ಪೀಠಿಕೆ

ನಿನಗು ನನಗು ನೆಲ-ಮುಗಿಲಿನಂತರ
ವೆಂದನಲ್ಲನ ಮೊಗದಲಿ…..
ಮೊಗವಿಟ್ಟು ನುಡಿದಳು
ಇನಿದು ದನಿಯಲಿ..
ನಿಜದ ಬದುಕಿದೆ ನೆಲದಲಿ

ಭರದಿ ಸುರಿವಾ ಮಳೆಯಬ್ಬರ
ಸುವ ಕೋಪದುರಿಯ ನೇಸರ…..
ಗೊತ್ತು-ಗುರಿಯು ಇಲ್ಲದಲೆಯೋ…..
ಬೀಸುಗಾಳಿಯ ಬರ್ಬರ
ಎಲ್ಲ ಕಂಡು, ಎಲ್ಲ ಉಂಡು…..
ಬಸಿರ ಜೀವಕೆ ಬಾಳ ಬೆಸೆವಾ…..
ಇಳೆಯೇ ಜೀವಕೆ ಕಂಗಳು…..

ಇಂದು-ನಾಳೆಗೆ ನಾಳೆ-ಮುಂದಕೆ
ಕಣ್ಣ ಕನಸಿನ ಪೀಠಿಕೆ
ಬರುವುದೆಲ್ಲವ ಬರಸೆಳೆದು ಒಪ್ಪುತೆ
ಮಣ್ಣ ಹಾಡಿನ ಚರಣಕೆ
ಎಲ್ಲ ನಮ್ಮದು, ಎಲ್ಲೆ ಮೀರದು
ಉಸಿರುಸಿರ ಹಸಿರನಲಿ
ಸ್ಪುರಿಸೋ ಭಾವಕೆ ಪಥಗಳು…..

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನಾ ವಿದ್ಯೆಗಳೆಲ್ಲಾ ಕಲಿಯದೇನರಿಯದಲ್ಲಾ
Next post ನಗೆ ಡಂಗುರ – ೧

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…