ಮೊದಲ ಮಳೆ ಬಿದ್ದ ಮಣ್ಣಾಂತಾಗುವೆನು

ನಾನು, ಅನ್ನಿಸಿಕೊಂಡ ನನ್ನನ್ನು
ಅದೋ.. ಇದೋ.. ಅವನೋ.. ಇವನೋ.. ನನಗೆ ಗೊತ್ತಿಲ್ಲ!
ಯಾವುದೋ ಒಂದು ಶಕ್ತಿ
ರೂಪ ಕೊಟ್ಟು, ಪ್ರಾಣ ಕೊಟ್ಟು
ಅಪ್ಪ, ಅಮ್ಮನ ಹೊಟ್ಟೆಯಲ್ಲಿ ತಂದು ಬಿಟ್ಟಿತು.

ಅಪ್ಪ, ಅಮ್ಮ ಭೂಮಿಗಿಳಿಸಿ
ಪ್ರೀತಿಯಿಂದ ತೊಳೆದು, ಬಳಿದು, ಬೆಳೆಸಿ
ಯಾವುದು ? ಏನು ? ಎಂತು ?
ಆಡಿ, ಮಾಡಿ, ನೋಡೋದು ಕಲಿಸಿಕೊಟ್ಟರು;
ಮನೆಮಂದಿ, ಊರು ಜನರ ಸಹಯೋಗ, ಸ್ನೇಹದಿ
ಪರಮ ಗುರುಗಳಾದರು.

ಶಾಲೆಯಲ್ಲಿ
ಸಂತ ಗುರುಗಳು
ಲೋಕ ಜ್ಞಾನ ನೀಡಿ
ನಿನ್ನೆ, ಇಂದು, ನಾಳೆಗಳ ನೋಡುವಂತಹ
ಕಣ್ಣು ಇಟ್ಟರು.

ಇಂದು, ನಾನು ಏನಾಗಿರುವೆ
ಏನನ್ನಾದರೂ ನೀಡಿರುವೆಯೆಂದರೆ
ಅದಕ್ಕೆ, ಎಲ್ಲದಕ್ಕೆ ಕಾರಣ ನಾನು ಹೇಗೆ ಆದೇನು ?
ಈ ಋಣ ಭಾವವು ನನ್ನನ್ನು ತಬ್ಬಿದಾಗ
ಮೊದಲ ಮಳೆ ಬಿದ್ದ ಮಣ್ಣಂತಾಗುವೆನು; ಘಂ! ಎನ್ನುವೆನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಸಹಾಯಕ
Next post ಮುನ್ನಿನಂತಿನ್ನುಂ ಎನ್ನ ಖುಷಿಯೆನ್ನ ಹಕ್ಕೆಂದೊಡೆಂತಕ್ಕು ?

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…