Home / ಕವನ / ಕವಿತೆ / ಮೊದಲ ಮಳೆ ಬಿದ್ದ ಮಣ್ಣಾಂತಾಗುವೆನು

ಮೊದಲ ಮಳೆ ಬಿದ್ದ ಮಣ್ಣಾಂತಾಗುವೆನು

ನಾನು, ಅನ್ನಿಸಿಕೊಂಡ ನನ್ನನ್ನು
ಅದೋ.. ಇದೋ.. ಅವನೋ.. ಇವನೋ.. ನನಗೆ ಗೊತ್ತಿಲ್ಲ!
ಯಾವುದೋ ಒಂದು ಶಕ್ತಿ
ರೂಪ ಕೊಟ್ಟು, ಪ್ರಾಣ ಕೊಟ್ಟು
ಅಪ್ಪ, ಅಮ್ಮನ ಹೊಟ್ಟೆಯಲ್ಲಿ ತಂದು ಬಿಟ್ಟಿತು.

ಅಪ್ಪ, ಅಮ್ಮ ಭೂಮಿಗಿಳಿಸಿ
ಪ್ರೀತಿಯಿಂದ ತೊಳೆದು, ಬಳಿದು, ಬೆಳೆಸಿ
ಯಾವುದು ? ಏನು ? ಎಂತು ?
ಆಡಿ, ಮಾಡಿ, ನೋಡೋದು ಕಲಿಸಿಕೊಟ್ಟರು;
ಮನೆಮಂದಿ, ಊರು ಜನರ ಸಹಯೋಗ, ಸ್ನೇಹದಿ
ಪರಮ ಗುರುಗಳಾದರು.

ಶಾಲೆಯಲ್ಲಿ
ಸಂತ ಗುರುಗಳು
ಲೋಕ ಜ್ಞಾನ ನೀಡಿ
ನಿನ್ನೆ, ಇಂದು, ನಾಳೆಗಳ ನೋಡುವಂತಹ
ಕಣ್ಣು ಇಟ್ಟರು.

ಇಂದು, ನಾನು ಏನಾಗಿರುವೆ
ಏನನ್ನಾದರೂ ನೀಡಿರುವೆಯೆಂದರೆ
ಅದಕ್ಕೆ, ಎಲ್ಲದಕ್ಕೆ ಕಾರಣ ನಾನು ಹೇಗೆ ಆದೇನು ?
ಈ ಋಣ ಭಾವವು ನನ್ನನ್ನು ತಬ್ಬಿದಾಗ
ಮೊದಲ ಮಳೆ ಬಿದ್ದ ಮಣ್ಣಂತಾಗುವೆನು; ಘಂ! ಎನ್ನುವೆನು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...