ಕನ್ನಡ ನಾಡು

ಇದುವೆ.. ಇದುವೆ.. ನಮ್ಮ ಕನ್ನಡ ನಾಡು
ಸರ್ವರ ಸುಖವ ಬಯಸಿದ ನಾಡು
ಸಾಮಾಜಿಕ ನ್ಯಾಯ; ಕಾಯಕ, ಭಕ್ತಿಯ ಬಸವನ ಬೀಡು
ದಿಕ್ಕು, ದಿಕ್ಕಲಿ ಜ್ಯೋತಿಯ ಹೊತ್ತಿಸಿ
ಧರ್ಮ, ಸಂಸ್ಕೃತಿ ಬೆಳಗಿದ ನಾಡು.

ಅಂಧಾನುಕರಣೆ, ಆಚರಣೆಗಳ
ಬುಡವನು ಅಲುಗಿಸಿ, ಕ್ರಾಂತಿಯ ಮೊಳಗಿಸಿ
ಸಂಗೀತ, ಸಾಹಿತ್ಯ ಸಿರಿಯನು ಮೆರೆದ
ಸಂತ, ಪುರಂದರ, ಕನಕರ ನಾಡು.

ಬದುಕಿನ ಗಾಢ ಅನುಭವಗಳನು
ಸರಳೀಕರಿಸಿ ಸುಂದರವಾಗಿ ಶ್ರುತಪಡಿಸಿರುವ
ವಚನಕಾರರು, ಜನಪದರು, ಸರ್ವಜ್ಞರು ಬಂದ
ಶಾರದಾ ಪೀಠದ…
ಚೆಲುವು, ಕಲೆಗಳ ಸಂಗಮ ನಾಡು.

ಅನ್ಯರ ಹೆಣ್ಣು, ಹೊನ್ನು, ಮಣ್ಣು
ಕಣ್ಣೆತ್ತಿಯು ನೋಡದ ಹಿರಿಗುಣದವರು
ದುಷ್ಟರ, ದುರುಳರ ಸಂತತಿ ತರಿದು
ಶಾಂತಿ ಸಜ್ಜನಿಕೆ ಕಂಕಣ ಬದ್ಧ
ಶ್ರೀ ಭುವನೇಶ್ವರಿ ಮಕ್ಕಳ ನಾಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೈದ್ಯರ ಒಗ್ಗರಣೆ
Next post ಅನ್ನಕೆಮ್ಮವಯವ ಬಳಸದೊಡದನು ಸಾವಯವವೆನಲುಂಟೇ ?

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…