ನಾನು ಹೆಂಡತಿಯಾಗಲಾರೆ

ಹೆಣ್ಣಿನ ಕುತ್ತಿಗೆಗೆ ಮಾತ್ರ ತೂಗು ಹಾಕುವ
ಗುರುತಿನ ಕಾರ್‍ಡು
ನೇಣು ಹಗ್ಗದಂತೆ ಕಾಣಿಸುತ್ತದೆ ನನಗೆ
ನಾನು ಹೆಂಡತಿಯಾಗಲಾರೆ.

ಸಂಕೇತಗಳ ಬೇಡಿಯನ್ನು
ಅಂಗಾಂಗಗಳ ಮೇಲೆಲ್ಲಾ ಹೇರಿ
ಕುಂಕುಮವ ನೆತ್ತಿಗೆ ಮೆತ್ತಿ, ಮುತೈದೆ ಮಂಗಳೆ
ಎಂದೆಲ್ಲ ಊದುವ ಶಂಖನಾದ
ಭಂಡಾರ ಬಳಿದು ಬಲಿಗೆ ಸಿದ್ಧಪಡಿಸಿದ
ಯೂಪಸ್ತಂಭದ ಹರಕೆಯ ಕುರಿಯ
ನೆನಪು ತರುತ್ತದೆ ನನಗೆ
ನಾನು ಹೆಂಡತಿಯಾಗಲಾರೆ.

ಅವಕುಂಟನ, ಪರದಾ ಬುರಖಾಗಳಲ್ಲಿ
ನನ್ನ ಮುಚ್ಚಿ ಮೆಚ್ಚುವ ನಿನ್ನ ಪರಿ
ಅಲಂಕೃತಗೊಳಿಸಿದ ಮೃತದೇಹವನ್ನು
ಶವಪೆಟ್ಟಿಗೆಯಲ್ಲಿಟ್ಟು ಮುಚ್ಚಿದಂತೆ
ನನ್ನೊಳಗಿನ ನನ್ನನ್ನು ಅದುಮಿ
ಸಾಯಿಸುವ ನಿನ್ನ ಹಂಬಲ
ಸೂರ್ಯನಷ್ಟೇ ಸ್ಪಷ್ಟ ನನಗೆ
ನಾನು ಹೆಂಡತಿಯಾಗಲಾರೆ.

ನೀನು ಬಿತ್ತಿದ ಬೀಜಕ್ಕೆ ನನ್ನೆಲ್ಲಾ
ರಕ್ತ ಮಾಂಸಗಳ ಗೊಬ್ಬರ ಬೀರಿ
ತೆನೆತೆಗೆದು ನಿನ್ನ ಕೈಯಲ್ಲಿಟ್ಟು
ಕೃತಾರ್ಥಳಾಗಬೇಕು
ರಕ್ತ ಬಸಿಯುವ ಹಾಲೂಡಿಸಿ ಮತ್ತೆ
ನಿನ್ನ ಹೆಸರಿಗೆ ಇಡಬೇಕು
ನಾನು ಹೆಂಡತಿಯಾಗಲಾರೆ

ನನ್ನ ಹೆಸರಿನ ಕೂಡ ನಿನ್ನ ಹೆಸರಿನ
ಧಿಮಾಕು ಜೋಡಿಸಿ
ನಿನ್ನ ಆಸ್ತಿಯಲ್ಲಿ ಭಾವಬತ್ತಿದ ನಾನೊಂದು
ವಸ್ತುವಾಗಬೇಕು
ನಾನು ಹೆಂಡತಿಯಾಗಲಾರೆ.

ಗಾಲವನ ಗಾಳಕ್ಕೆ ಸಿಕ್ಕು ಮದುವೆ ಎಂಬ
ಬಲೆಯೊಳಗೆ ಮರಳಿ ಮರಳಿ ನರಳಿ
ವಿಲವಿಲನೆ ಒದ್ದಾಡಿ ಬಳಲಿ
ಬೆಂಡಾದ ಬಾಡಿದ ಮಾಧವಿಯಲ್ಲ ನಾನು

ದುಶ್ಯಂತನ ಪ್ರೇಮದ ಬಲೆಯಲ್ಲಿ ಕಳೆದುಹೋಗಿ
ಗಾಂಧರ್ವ ವಿವಾಹದಿ ಬಂಧಿಯಾಗಿ
ಮತ್ತೆ ಪರಿತ್ಯಕ್ತೆಯಾಗಿ ಬೆಂದ
ಶಕುಂತಲಾ ಅಲ್ಲ ನಾನು

ಇನ್ನು ಹುಟ್ಟದೇ ಇರಲಿ ನಾರಿ ಎನ್ನವೋಲ್
ಎಂದು ಹಳಹಳಿಸಿ ನೊಂದ ಪಂಚವಲ್ಲಭೆ
ಪಾಂಚಾಲಿಯೂ ಅಲ್ಲ ನಾನು
ನಾನು ಹೆಂಡತಿಯಾಗಲಾರೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩
Next post ಮುಸ್ಸಂಜೆಯ ಮಿಂಚು – ೧

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…