Home / ಕವನ / ಕವಿತೆ / ನಾನು ಹೆಂಡತಿಯಾಗಲಾರೆ

ನಾನು ಹೆಂಡತಿಯಾಗಲಾರೆ

ಹೆಣ್ಣಿನ ಕುತ್ತಿಗೆಗೆ ಮಾತ್ರ ತೂಗು ಹಾಕುವ
ಗುರುತಿನ ಕಾರ್‍ಡು
ನೇಣು ಹಗ್ಗದಂತೆ ಕಾಣಿಸುತ್ತದೆ ನನಗೆ
ನಾನು ಹೆಂಡತಿಯಾಗಲಾರೆ.

ಸಂಕೇತಗಳ ಬೇಡಿಯನ್ನು
ಅಂಗಾಂಗಗಳ ಮೇಲೆಲ್ಲಾ ಹೇರಿ
ಕುಂಕುಮವ ನೆತ್ತಿಗೆ ಮೆತ್ತಿ, ಮುತೈದೆ ಮಂಗಳೆ
ಎಂದೆಲ್ಲ ಊದುವ ಶಂಖನಾದ
ಭಂಡಾರ ಬಳಿದು ಬಲಿಗೆ ಸಿದ್ಧಪಡಿಸಿದ
ಯೂಪಸ್ತಂಭದ ಹರಕೆಯ ಕುರಿಯ
ನೆನಪು ತರುತ್ತದೆ ನನಗೆ
ನಾನು ಹೆಂಡತಿಯಾಗಲಾರೆ.

ಅವಕುಂಟನ, ಪರದಾ ಬುರಖಾಗಳಲ್ಲಿ
ನನ್ನ ಮುಚ್ಚಿ ಮೆಚ್ಚುವ ನಿನ್ನ ಪರಿ
ಅಲಂಕೃತಗೊಳಿಸಿದ ಮೃತದೇಹವನ್ನು
ಶವಪೆಟ್ಟಿಗೆಯಲ್ಲಿಟ್ಟು ಮುಚ್ಚಿದಂತೆ
ನನ್ನೊಳಗಿನ ನನ್ನನ್ನು ಅದುಮಿ
ಸಾಯಿಸುವ ನಿನ್ನ ಹಂಬಲ
ಸೂರ್ಯನಷ್ಟೇ ಸ್ಪಷ್ಟ ನನಗೆ
ನಾನು ಹೆಂಡತಿಯಾಗಲಾರೆ.

ನೀನು ಬಿತ್ತಿದ ಬೀಜಕ್ಕೆ ನನ್ನೆಲ್ಲಾ
ರಕ್ತ ಮಾಂಸಗಳ ಗೊಬ್ಬರ ಬೀರಿ
ತೆನೆತೆಗೆದು ನಿನ್ನ ಕೈಯಲ್ಲಿಟ್ಟು
ಕೃತಾರ್ಥಳಾಗಬೇಕು
ರಕ್ತ ಬಸಿಯುವ ಹಾಲೂಡಿಸಿ ಮತ್ತೆ
ನಿನ್ನ ಹೆಸರಿಗೆ ಇಡಬೇಕು
ನಾನು ಹೆಂಡತಿಯಾಗಲಾರೆ

ನನ್ನ ಹೆಸರಿನ ಕೂಡ ನಿನ್ನ ಹೆಸರಿನ
ಧಿಮಾಕು ಜೋಡಿಸಿ
ನಿನ್ನ ಆಸ್ತಿಯಲ್ಲಿ ಭಾವಬತ್ತಿದ ನಾನೊಂದು
ವಸ್ತುವಾಗಬೇಕು
ನಾನು ಹೆಂಡತಿಯಾಗಲಾರೆ.

ಗಾಲವನ ಗಾಳಕ್ಕೆ ಸಿಕ್ಕು ಮದುವೆ ಎಂಬ
ಬಲೆಯೊಳಗೆ ಮರಳಿ ಮರಳಿ ನರಳಿ
ವಿಲವಿಲನೆ ಒದ್ದಾಡಿ ಬಳಲಿ
ಬೆಂಡಾದ ಬಾಡಿದ ಮಾಧವಿಯಲ್ಲ ನಾನು

ದುಶ್ಯಂತನ ಪ್ರೇಮದ ಬಲೆಯಲ್ಲಿ ಕಳೆದುಹೋಗಿ
ಗಾಂಧರ್ವ ವಿವಾಹದಿ ಬಂಧಿಯಾಗಿ
ಮತ್ತೆ ಪರಿತ್ಯಕ್ತೆಯಾಗಿ ಬೆಂದ
ಶಕುಂತಲಾ ಅಲ್ಲ ನಾನು

ಇನ್ನು ಹುಟ್ಟದೇ ಇರಲಿ ನಾರಿ ಎನ್ನವೋಲ್
ಎಂದು ಹಳಹಳಿಸಿ ನೊಂದ ಪಂಚವಲ್ಲಭೆ
ಪಾಂಚಾಲಿಯೂ ಅಲ್ಲ ನಾನು
ನಾನು ಹೆಂಡತಿಯಾಗಲಾರೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...