Home / ಕವನ / ಕವಿತೆ / ನೆಲಮಣ್ಣಿನ ಸ್ವಯಂ ಸ್ವಯಂವರ

ನೆಲಮಣ್ಣಿನ ಸ್ವಯಂ ಸ್ವಯಂವರ

ಅದೇ ಆ ಕೆಂಪುಮಣ್ಣಿನ
ಗದ್ದೆಯ ತುಂಬಾ
ಪ್ರತಿಸಲದಂತೆ ಈ ಸಲವೂ
ಹೊಸ ಬೀಜಗಳದ್ದೇ ಬಿತ್ತು.
ಮೋಹನ ರಾಗದ ಮಾಲಿಕೆಗಳ
ಜೊತೆ ತರವೇಹಾರಿ
ತಳಿಬೀಜಗಳ ಊರಿಹೋಗುವ
ಆತನಿಗೋ ಪುರಸೊತ್ತಿಲ್ಲದ ದಣಿವು.

ಸೀಮೆಗೆ ತಕ್ಕಂತಿರುವ ಮಣ್ಣಿನ ಹದಕ್ಕೆ
ಬೀಜ ಹಾಕುವುದೇನು ಸಾಮಾನ್ಯವೇ?
ಆ ಮಣ್ಣಿನ ಹದ ಈ ನೆಲಕ್ಕಿಲ್ಲ.
ಈ ನೆಲದ ಗುಣ ಆ ಮಣ್ಣಿಗೆಲ್ಲಿ?
ನೆಲಮಣ್ಣಿನ ಕಾವು
ಆತನಿಗೆ ಮಾತ್ರ ಗೊತ್ತು.
ರಾಗ ಹೊರಡಿಸುವ, ಕೆರಳಿಸುವ
ಕೈಬೆರಳಿನಾಟವ ಹೂಡುವ ಆತನಿಗೋ
ಗದ್ದೆ ಗದ್ದೆಗಳ ಮೇಲೆಲ್ಲಾ ಮೋಹ.

ಲಾಗಾಯ್ತಿನಿಂದ ಸೀಮೆಗೊಪ್ಪುವ
ಬೀಜಗಳ ಹೊತ್ತು ಹೆತ್ತು
ಭಾರವಾದ ಗದ್ದೆಗಳಿಗೆ
ಈಗೀಗ ಉರಿ ನವೆಯ ಜಡ್ಡು.
ಹಾಗಾಗೇ ಬೀಜಕ್ಕೆ ತಕ್ಕ ಪೈರು
ಕೊಡುವ ಕೆಲಸ
ನೆನೆಗುದಿಗೆ ಬಿದ್ದಿದೆ.

ಮದುಮಗಳ ಹುಸಿ ಮೌನದಂತೆ
ತಣ್ಣಗೆ ಕುಳಿತು ಕಾಯುತ್ತಲೇ ಇವೆ
ಹೊಲಗದ್ದೆ ಬಯಲ ಮಹಲು.
ಮುಗಿಲು ಮುರಿದು ಬೀಳುವ
ಹೊತ್ತಿಗಾಗೇ ಹೊಂಚಿ ಕೂತಿದೆ.

ಕೇಳದ ಗಾನವನ್ನು ಎದೆಯಾಳದಿಂದಲೇ
ಮೀಟಿ ತೆಗೆಯುವ ಹುಕಿ ಹತ್ತಿಸಿಕೊಂಡ
ಗದ್ದೆಗಳ ಆಲಾಪ
ಬಾನಾಡಿಗಳಿಗಷ್ಟೇ ಶ್ರವಣಸಾಧ್ಯ.
ಗದ್ದೆಗಳೀಗ ಬಿತ್ತಿದ ಬೀಜಗಳ
ಫಸಲಿಗೆ ಪೈಪೋಟಿಗಿಳಿಯುತ್ತಿಲ್ಲ.
ಬೀಜದವನ ದಾರಿ ಕಾಯುತ್ತಲೂ ಇಲ್ಲ.
ಬೀಜಗಳನ್ನೆ ನಿರಾಕರಿಸುತ್ತಿವೆ.
ನೆಲಮಣ್ಣು ಮಣ್ಣನೆಲ
ಸ್ವಯಂ ಸ್ವಯಂವರದ ಸುಖ ಕಾಣುತ್ತಿವೆ.

ಅವಳೋ ಅವಳೆದೆಯ ಮೋಹನ ರಾಗಕ್ಕೆ
ಕಿವಿಯಾಗಿದ್ದಾಳೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...