Home / ಕವನ / ಕವಿತೆ / ನೆಲಮಣ್ಣಿನ ಸ್ವಯಂ ಸ್ವಯಂವರ

ನೆಲಮಣ್ಣಿನ ಸ್ವಯಂ ಸ್ವಯಂವರ

ಅದೇ ಆ ಕೆಂಪುಮಣ್ಣಿನ
ಗದ್ದೆಯ ತುಂಬಾ
ಪ್ರತಿಸಲದಂತೆ ಈ ಸಲವೂ
ಹೊಸ ಬೀಜಗಳದ್ದೇ ಬಿತ್ತು.
ಮೋಹನ ರಾಗದ ಮಾಲಿಕೆಗಳ
ಜೊತೆ ತರವೇಹಾರಿ
ತಳಿಬೀಜಗಳ ಊರಿಹೋಗುವ
ಆತನಿಗೋ ಪುರಸೊತ್ತಿಲ್ಲದ ದಣಿವು.

ಸೀಮೆಗೆ ತಕ್ಕಂತಿರುವ ಮಣ್ಣಿನ ಹದಕ್ಕೆ
ಬೀಜ ಹಾಕುವುದೇನು ಸಾಮಾನ್ಯವೇ?
ಆ ಮಣ್ಣಿನ ಹದ ಈ ನೆಲಕ್ಕಿಲ್ಲ.
ಈ ನೆಲದ ಗುಣ ಆ ಮಣ್ಣಿಗೆಲ್ಲಿ?
ನೆಲಮಣ್ಣಿನ ಕಾವು
ಆತನಿಗೆ ಮಾತ್ರ ಗೊತ್ತು.
ರಾಗ ಹೊರಡಿಸುವ, ಕೆರಳಿಸುವ
ಕೈಬೆರಳಿನಾಟವ ಹೂಡುವ ಆತನಿಗೋ
ಗದ್ದೆ ಗದ್ದೆಗಳ ಮೇಲೆಲ್ಲಾ ಮೋಹ.

ಲಾಗಾಯ್ತಿನಿಂದ ಸೀಮೆಗೊಪ್ಪುವ
ಬೀಜಗಳ ಹೊತ್ತು ಹೆತ್ತು
ಭಾರವಾದ ಗದ್ದೆಗಳಿಗೆ
ಈಗೀಗ ಉರಿ ನವೆಯ ಜಡ್ಡು.
ಹಾಗಾಗೇ ಬೀಜಕ್ಕೆ ತಕ್ಕ ಪೈರು
ಕೊಡುವ ಕೆಲಸ
ನೆನೆಗುದಿಗೆ ಬಿದ್ದಿದೆ.

ಮದುಮಗಳ ಹುಸಿ ಮೌನದಂತೆ
ತಣ್ಣಗೆ ಕುಳಿತು ಕಾಯುತ್ತಲೇ ಇವೆ
ಹೊಲಗದ್ದೆ ಬಯಲ ಮಹಲು.
ಮುಗಿಲು ಮುರಿದು ಬೀಳುವ
ಹೊತ್ತಿಗಾಗೇ ಹೊಂಚಿ ಕೂತಿದೆ.

ಕೇಳದ ಗಾನವನ್ನು ಎದೆಯಾಳದಿಂದಲೇ
ಮೀಟಿ ತೆಗೆಯುವ ಹುಕಿ ಹತ್ತಿಸಿಕೊಂಡ
ಗದ್ದೆಗಳ ಆಲಾಪ
ಬಾನಾಡಿಗಳಿಗಷ್ಟೇ ಶ್ರವಣಸಾಧ್ಯ.
ಗದ್ದೆಗಳೀಗ ಬಿತ್ತಿದ ಬೀಜಗಳ
ಫಸಲಿಗೆ ಪೈಪೋಟಿಗಿಳಿಯುತ್ತಿಲ್ಲ.
ಬೀಜದವನ ದಾರಿ ಕಾಯುತ್ತಲೂ ಇಲ್ಲ.
ಬೀಜಗಳನ್ನೆ ನಿರಾಕರಿಸುತ್ತಿವೆ.
ನೆಲಮಣ್ಣು ಮಣ್ಣನೆಲ
ಸ್ವಯಂ ಸ್ವಯಂವರದ ಸುಖ ಕಾಣುತ್ತಿವೆ.

ಅವಳೋ ಅವಳೆದೆಯ ಮೋಹನ ರಾಗಕ್ಕೆ
ಕಿವಿಯಾಗಿದ್ದಾಳೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...