Home / ಕವನ / ಕವಿತೆ / ನೆಲಮಣ್ಣಿನ ಸ್ವಯಂ ಸ್ವಯಂವರ

ನೆಲಮಣ್ಣಿನ ಸ್ವಯಂ ಸ್ವಯಂವರ

ಅದೇ ಆ ಕೆಂಪುಮಣ್ಣಿನ
ಗದ್ದೆಯ ತುಂಬಾ
ಪ್ರತಿಸಲದಂತೆ ಈ ಸಲವೂ
ಹೊಸ ಬೀಜಗಳದ್ದೇ ಬಿತ್ತು.
ಮೋಹನ ರಾಗದ ಮಾಲಿಕೆಗಳ
ಜೊತೆ ತರವೇಹಾರಿ
ತಳಿಬೀಜಗಳ ಊರಿಹೋಗುವ
ಆತನಿಗೋ ಪುರಸೊತ್ತಿಲ್ಲದ ದಣಿವು.

ಸೀಮೆಗೆ ತಕ್ಕಂತಿರುವ ಮಣ್ಣಿನ ಹದಕ್ಕೆ
ಬೀಜ ಹಾಕುವುದೇನು ಸಾಮಾನ್ಯವೇ?
ಆ ಮಣ್ಣಿನ ಹದ ಈ ನೆಲಕ್ಕಿಲ್ಲ.
ಈ ನೆಲದ ಗುಣ ಆ ಮಣ್ಣಿಗೆಲ್ಲಿ?
ನೆಲಮಣ್ಣಿನ ಕಾವು
ಆತನಿಗೆ ಮಾತ್ರ ಗೊತ್ತು.
ರಾಗ ಹೊರಡಿಸುವ, ಕೆರಳಿಸುವ
ಕೈಬೆರಳಿನಾಟವ ಹೂಡುವ ಆತನಿಗೋ
ಗದ್ದೆ ಗದ್ದೆಗಳ ಮೇಲೆಲ್ಲಾ ಮೋಹ.

ಲಾಗಾಯ್ತಿನಿಂದ ಸೀಮೆಗೊಪ್ಪುವ
ಬೀಜಗಳ ಹೊತ್ತು ಹೆತ್ತು
ಭಾರವಾದ ಗದ್ದೆಗಳಿಗೆ
ಈಗೀಗ ಉರಿ ನವೆಯ ಜಡ್ಡು.
ಹಾಗಾಗೇ ಬೀಜಕ್ಕೆ ತಕ್ಕ ಪೈರು
ಕೊಡುವ ಕೆಲಸ
ನೆನೆಗುದಿಗೆ ಬಿದ್ದಿದೆ.

ಮದುಮಗಳ ಹುಸಿ ಮೌನದಂತೆ
ತಣ್ಣಗೆ ಕುಳಿತು ಕಾಯುತ್ತಲೇ ಇವೆ
ಹೊಲಗದ್ದೆ ಬಯಲ ಮಹಲು.
ಮುಗಿಲು ಮುರಿದು ಬೀಳುವ
ಹೊತ್ತಿಗಾಗೇ ಹೊಂಚಿ ಕೂತಿದೆ.

ಕೇಳದ ಗಾನವನ್ನು ಎದೆಯಾಳದಿಂದಲೇ
ಮೀಟಿ ತೆಗೆಯುವ ಹುಕಿ ಹತ್ತಿಸಿಕೊಂಡ
ಗದ್ದೆಗಳ ಆಲಾಪ
ಬಾನಾಡಿಗಳಿಗಷ್ಟೇ ಶ್ರವಣಸಾಧ್ಯ.
ಗದ್ದೆಗಳೀಗ ಬಿತ್ತಿದ ಬೀಜಗಳ
ಫಸಲಿಗೆ ಪೈಪೋಟಿಗಿಳಿಯುತ್ತಿಲ್ಲ.
ಬೀಜದವನ ದಾರಿ ಕಾಯುತ್ತಲೂ ಇಲ್ಲ.
ಬೀಜಗಳನ್ನೆ ನಿರಾಕರಿಸುತ್ತಿವೆ.
ನೆಲಮಣ್ಣು ಮಣ್ಣನೆಲ
ಸ್ವಯಂ ಸ್ವಯಂವರದ ಸುಖ ಕಾಣುತ್ತಿವೆ.

ಅವಳೋ ಅವಳೆದೆಯ ಮೋಹನ ರಾಗಕ್ಕೆ
ಕಿವಿಯಾಗಿದ್ದಾಳೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...