Home / ಕವನ / ಕವಿತೆ / ನೆಲಮಣ್ಣಿನ ಸ್ವಯಂ ಸ್ವಯಂವರ

ನೆಲಮಣ್ಣಿನ ಸ್ವಯಂ ಸ್ವಯಂವರ

ಅದೇ ಆ ಕೆಂಪುಮಣ್ಣಿನ
ಗದ್ದೆಯ ತುಂಬಾ
ಪ್ರತಿಸಲದಂತೆ ಈ ಸಲವೂ
ಹೊಸ ಬೀಜಗಳದ್ದೇ ಬಿತ್ತು.
ಮೋಹನ ರಾಗದ ಮಾಲಿಕೆಗಳ
ಜೊತೆ ತರವೇಹಾರಿ
ತಳಿಬೀಜಗಳ ಊರಿಹೋಗುವ
ಆತನಿಗೋ ಪುರಸೊತ್ತಿಲ್ಲದ ದಣಿವು.

ಸೀಮೆಗೆ ತಕ್ಕಂತಿರುವ ಮಣ್ಣಿನ ಹದಕ್ಕೆ
ಬೀಜ ಹಾಕುವುದೇನು ಸಾಮಾನ್ಯವೇ?
ಆ ಮಣ್ಣಿನ ಹದ ಈ ನೆಲಕ್ಕಿಲ್ಲ.
ಈ ನೆಲದ ಗುಣ ಆ ಮಣ್ಣಿಗೆಲ್ಲಿ?
ನೆಲಮಣ್ಣಿನ ಕಾವು
ಆತನಿಗೆ ಮಾತ್ರ ಗೊತ್ತು.
ರಾಗ ಹೊರಡಿಸುವ, ಕೆರಳಿಸುವ
ಕೈಬೆರಳಿನಾಟವ ಹೂಡುವ ಆತನಿಗೋ
ಗದ್ದೆ ಗದ್ದೆಗಳ ಮೇಲೆಲ್ಲಾ ಮೋಹ.

ಲಾಗಾಯ್ತಿನಿಂದ ಸೀಮೆಗೊಪ್ಪುವ
ಬೀಜಗಳ ಹೊತ್ತು ಹೆತ್ತು
ಭಾರವಾದ ಗದ್ದೆಗಳಿಗೆ
ಈಗೀಗ ಉರಿ ನವೆಯ ಜಡ್ಡು.
ಹಾಗಾಗೇ ಬೀಜಕ್ಕೆ ತಕ್ಕ ಪೈರು
ಕೊಡುವ ಕೆಲಸ
ನೆನೆಗುದಿಗೆ ಬಿದ್ದಿದೆ.

ಮದುಮಗಳ ಹುಸಿ ಮೌನದಂತೆ
ತಣ್ಣಗೆ ಕುಳಿತು ಕಾಯುತ್ತಲೇ ಇವೆ
ಹೊಲಗದ್ದೆ ಬಯಲ ಮಹಲು.
ಮುಗಿಲು ಮುರಿದು ಬೀಳುವ
ಹೊತ್ತಿಗಾಗೇ ಹೊಂಚಿ ಕೂತಿದೆ.

ಕೇಳದ ಗಾನವನ್ನು ಎದೆಯಾಳದಿಂದಲೇ
ಮೀಟಿ ತೆಗೆಯುವ ಹುಕಿ ಹತ್ತಿಸಿಕೊಂಡ
ಗದ್ದೆಗಳ ಆಲಾಪ
ಬಾನಾಡಿಗಳಿಗಷ್ಟೇ ಶ್ರವಣಸಾಧ್ಯ.
ಗದ್ದೆಗಳೀಗ ಬಿತ್ತಿದ ಬೀಜಗಳ
ಫಸಲಿಗೆ ಪೈಪೋಟಿಗಿಳಿಯುತ್ತಿಲ್ಲ.
ಬೀಜದವನ ದಾರಿ ಕಾಯುತ್ತಲೂ ಇಲ್ಲ.
ಬೀಜಗಳನ್ನೆ ನಿರಾಕರಿಸುತ್ತಿವೆ.
ನೆಲಮಣ್ಣು ಮಣ್ಣನೆಲ
ಸ್ವಯಂ ಸ್ವಯಂವರದ ಸುಖ ಕಾಣುತ್ತಿವೆ.

ಅವಳೋ ಅವಳೆದೆಯ ಮೋಹನ ರಾಗಕ್ಕೆ
ಕಿವಿಯಾಗಿದ್ದಾಳೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...