Home / ಕವನ / ಕವಿತೆ / ಕತ್ತಲ ಗೂಡಿನ ದೀಪ

ಕತ್ತಲ ಗೂಡಿನ ದೀಪ

ಮೈತುಂಬಾ ಮಸಿ ಮೆತ್ತಿದರೂ
ತೊಳೆದು ಬರಬಲ್ಲರು ಅವರು
ಕೇಳಲುಬಾರದು
ಮಸಿಯ ಮೂಲಕ್ಕೆ ಕಾರಣ
ಅವರು ಮೇಲ್ಪಂಕ್ತಿಯ ಊಟಕ್ಕೆ ಕುಳಿತವರು.

ಬಿಳಿಮೈಯ ಮಾತಿಗೆ ಬಸವನ ಗೋಣು
ಎಂಜಲೆಲೆಗೆ ಮೈ ಉಜ್ಜಿಕೊಂಡವರು ಇವರು.
ಕರಿಮೈಯ ಮಾರನ ಮನೆಯ
ದೀಪದ ಬೆಳಕಿಗೆ ಯಾವ ಬಣ್ಣ

ಕೇಳಲೇ ಇಲ್ಲ, ಬಲ್ಲವರು
ತಗ್ಗಿದ ತಲೆಗಳ ಎತ್ತಲಾಗಲೇ ಇಲ್ಲ
ಜಾತಿ ಎಂಬ ಬಾವಿಯ ಆರದ ನೀರು
ಸಿಹಿಯಲ್ಲ, ಉಪ್ಪುಪ್ಪು.

ಆದೇ ಆಗ ಮೂಡಿದ್ದ
ಪೂರ್ವದಲ್ಲೊಬ್ಬ ಪ್ರಖರ ಸೂರ್ಯ
ದೀನ ದಲಿತರ ಹಾಡುಗಳು
ಮುಖಪುಟದ ಮೇಲೆ ಮೂಡಲಾರಂಭಿಸಿದವು
ಮಂತ್ರಗಳ ಮೇಲೋಚ್ಛಾಟನೆ ಮಾಡಿ.

ಆತನ ಕಣ್ಣುಗಳಲ್ಲಿ ತೀಕ್ಷ್ಣ ಹೊಳಪು
ಭಂಡಾರ ಮೆತ್ತಿದ ಹಣೆಗಳು
ತಲೆತಗ್ಗಿಸಿದವು.

ಬೆಚ್ಚಿಬಿದ್ದರು ಧರ್ಮಸೈತಾನರು
ಮೈಗಂಟಿದ ದಾರ ಬಿಗಿಯಾಗಿ
ಉಸಿರುಗಟ್ಟಿದಂತೆ

ಜಲಪಾತದ ವಾಙ್ಮಯಕ್ಕೆ
ಬೆದರಿದ ಪುರಾಣಗಳು
ಪಟಪಟನೇ ಉದುರಿಬಿದ್ದವು.

ಅದೊಂದು ಧಾತುವಿನಿಂದ
ಹೊಮ್ಮಿದ, ಪಲ್ಲವಿಸಿದ
ರಕ್ತದಲ್ಲೇ ಬೆಂಕಿಯುಗುಳುವ
ಲಾವಾ ತುಂಬಿಕೊಂಡ
ಬೆಂಕಿಯುಂಡೆಗಳು
ವರ್ತಮಾನದ ಬಾಗಿಲ ಕಾವಲುಗಾರರು

ಕತ್ತಲೆಗೂಡಿನ ದೀಪಗಳು
ಜಗ್ಗನೇ ಉರಿಯುತ್ತಿವೆ.
ಬಾಯಿಲ್ಲದವನ ಕೂಗಿಗೆ
ಕಂಚಿನ ಕಂಠ ಎರವಲು ಸಿಕ್ಕಿದೆ.
ದಲಿತರ ಕೇರಿಗಳು
ದಿಗ್ವಿಜಯದ ಕೇಕೆಗಳು

ಪ್ರತಿ ಉದಯವೂ
ಮಾರ್ದವದ ಸೌಂದರ್ಯ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...