Home / ಕವನ / ಕವಿತೆ / ಇಂದು ನಿನ್ನೆಯಂತಿಲ್ಲ

ಇಂದು ನಿನ್ನೆಯಂತಿಲ್ಲ

ಗೆಳೆಯ ರಹೀಮನ ಮನೆಯಲ್ಲಿ
ಕುಟ್ಟಿದ ಮೆಹಂದಿಗೆ ಹಪಾಹಪಿಸಿ
ಕಾಡಿ ಬೇಡಿ ಇಸಿದುಕೊಳ್ಳುತ್ತಿದ್ದೆ.
ಕೈಬಣ್ಣ ಕೆಂಪಗಾದಷ್ಟು
ಗುಲಾಬಿ ಅರಳುತ್ತಿತ್ತು ಮನದಲ್ಲಿ.

ಪತ್ರ ಹೊತ್ತು ತರುವ ಇಸೂಬಸಾಬ್
ಬಂದಾಗಲೆಲ್ಲಾ ಚಾ ಕುಡಿದೇ
ಹೋಗುತ್ತಿದ್ದ..
ಅಂಗಳದ ತುಂಬೆಲ್ಲಾ
ಅತ್ತರಿನ ಪರಿಮಳ ಬಿಟ್ಟು.

ರಮಜಾನ್ ದಿನದ ಸಿರ್‍ಕುರಮಾ
ಘಮಘಮಲು ನಮ್ಮನೆಯಲ್ಲೂ
ತುಂಬಿಕೊಳ್ಳುತ್ತಿತ್ತು.
ಬಂಡಿಹಬ್ಬದ ಬೆಂಡು ಬತ್ತಾಸು,
ಕಜ್ಜಾಯಗಳೆಲ್ಲ
ಅವರ ತಿಂಡಿಡಬ್ಬ ತುಂಬಿಕೊಳ್ಳುತ್ತಿತ್ತು.
ದೊಡ್ಡವರಾದೆವು ನೋಡಿ
ಮನೆ ಜೋಪಡಿಗಳಿಲ್ಲ ಈಗ
ಬರಿಯ ಬಂಗೆಲೆಗಳೆದ್ದಿವೆ.
ಮನೆಮುಂದಿನ ಗಿಡಮರಗಳಲ್ಲಿ
ಹೆಣಗಳು ನೇತಾಡುತ್ತಿವೆ
ಹಿತ್ತಲ ಕೆರೆಯಲ್ಲಿ ಕೊಳೆತ ಶವದ
ವಾಸನೆಗೆ ನೈದಿಲೆಗಳು ಕಮರಿವೆ.

ನಿತ್ಯ ಹುಟ್ಟುವ ಸೂರ್ಯ ಇಂದು
ಪೂರ್ವಕ್ಕೆ ಏಳುತ್ತಾನೆ
ಆಂಜನೇಯನಿಗೆ ಅಡ್ಡ ಬಿದ್ದರೆ
ಆಯಸ್ಸು ಮಿಗುತ್ತದೆ.
ಅಮ್ಮ ಚಿಕ್ಕಂದಿನಲ್ಲಿ ಹೇಳಿದ್ದು
ಸುಳ್ಳಾಗುತ್ತಿದೆ-
ಬತ್ತಿ ಬೆಳಗಲು ಹೋದವ ಹೆಣವಾದದ್ದು ಕೇಳಿ.
ಗಂಟೆ ಜಾಗಟೆ, ಜಾ ನಮಾಜ್ ಎಲ್ಲೆಂದರಲ್ಲಿ
ಉರಿದು ಹೋದವು. ಕೆಂಡ ಇಂಗಳವಾದವು
ಆ ಕೈಗಳೆಲ್ಲ
ಈಗ ಕತ್ತಿ ತಲವಾರಗಳನ್ನೆ ತೊಟ್ಟಿವೆ.

ರಹೀಮನ ಮನೆಯ ಸಿರಕುರಮಾ
ನಮ್ಮನೆಯ ಬೆಂಡು ಬತ್ತಾಸು ಪರಸ್ಪರ
ಮಾತು ಬಿಟ್ಟಿವೆ, ತಪಶೀಲು ಜಾರಿಯಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...