Home / ಕವನ / ಕವಿತೆ / ಕಾಲಾತೀತ ತಲಬು

ಕಾಲಾತೀತ ತಲಬು

ಇದ್ದ ಬಿದ್ದ ಶಕ್ತಿಯನ್ನೆಲ್ಲಾ ಇಡಿಯಾಗಿಸಿ
ಕೊಂಡು ಹೊರಟೆ, ಉನ್ಮಾದ ತಡೆಯಲಾರದೇ
ಬಾಯಿ ತೆರೆದುಕೊಂಡೆ.
ಈಗ ಮೆಲ್ಲಲೇಬೇಕು ಕವಳ.
ಚಟ ಎಷ್ಟೆಂದರೂ ಚಟವೇ:
ಹುಡುಕಿದರೂ ಸಿಗಲಿಲ್ಲ ಸಂಚಿಯಲ್ಲಿ ನಾಲ್ಕಾಣೆ
ಹಂಗೆಲ್ಲ ಸಿಕ್ಕುವ ಸರಕಲ್ಲ.
ಎದುರಿಗೆ ಅದೇ ಹಳೆಯ ಶತ್ರು
ಹಲ್ಲುಗಿಂಜುತ್ತ
ಧನದ ಥಾಲಿ ಹಿಡಿದ ಕೋರೆದಂತಗಳ ಧನಿಕ.

ಹಂಬಲಿಸಿ ಲೇಪಿಸಿದ ಲಿಪಸ್ಟಿಕ್ಕು,
ಕ್ರೀಮು, ಮುಖಬಣ್ಣಗಳು
ಸೋತು ಸುಣ್ಣವಾಗಿವೆ.
ಒತ್ತಿ ಕುಳಿತುಕೊಳ್ಳಲಾಗದೇ ಶತ್ರುವಿನಂತೆ.
ಕಾಲನ ಕೈಯಲ್ಲಿ ಸಿಕ್ಕು ತರಗೆಲೆಗಳಂತೆ
ಮುದುಡಿ,
ತುಪ್ಪೆಯಾಗಿರುವ ಚರ್ಮದ
ಸುಕ್ಕು ನೋಡಿ ಮುಸಿ ಮುಸಿ ನಗುತ್ತ,
ಲೇವಡಿ ಮಾಡುತ್ತಿವೆ ಶತ್ರುವಿನಂತೆ

ಈಗಷ್ಟೇ ಬಿಚ್ಚಿಟ್ಟ ಬಳೆ ಮಂಗಮಾಯವಾದಂತೆ.
ಹುಡುಕಿ ಹುಡುಕಿ ಸಾಕಾಗಿ
ಪ್ರಾಯ ದಕ್ಕಿಸಿಕೊಟ್ಟ ಶತ್ರುವಿಗೆ ಹಿಡಿಶಾಪ ಹಾಕುತ್ತ
ಕೈ ನೋಡಿಕೊಂಡೆ.
ಅರೇ ಯಾವಾಗ ಕೈ ಸೇರಿತು,
ಮಂದಿ ಮಗಂದು?
ಜಿಗುಪ್ಸೆಯಾದರೂ ಚಿನ್ನಚಿನ್ನವೇ?
ಶತ್ರುವಾದರೇನು?

ಮೇಲಿನ ಕೇರಿ ಮಾಯಣ್ಣನ ಮಗಳು
ಮೈನೆರೆದಾಳಂತೆ. ದೇವರಿಗೆ ಬಿಡ್ತಾರಂತೆ.
ಅದಕ್ಕೆ ಬಳೆ ನೆನಪಾಯ್ತು.
“ಹೀರೇಕಿ ನೀನು, ನಿತ್ಯ ಸುಮಂಗಲಿ.
ಹರಸಿ ಹೋಗು ಬಾ.” ಎಂದಿದ್ದ.
ಯಾವ ಕಾಲದಲ್ಲಿದ್ದಾನೆ ಮಾಯಣ್ಣ.
ಕಾಲ ಯಾವುದಾದ್ರೇನೂ ಈಗೆಲ್ಲ
ಹೈಟೆಕ್ಕು ಕಾಲವಂತೆ.
ಹೊಸ ನಮೂನೆ ದಂಧೆಗಳು.

ಗೊನೆ ಕಡಿದ ಬಾಳೆಹಂಗೆ ಬದುಕು.
ಹರಕು ಚಾಪೆ ಹಂಗೆ ದೇಹ
ಆಗುತ್ತೆ ಅಂತ ಗೊತ್ತಿಲ್ಲೇನು?
ಕಟಕಟ ಹಲ್ಲುಕಡಿಯೋದ ಬಿಟ್ಟು
ಬೇರೇನೂ ಮಾಡೋಕಾಗಲ್ಲ.
ಹರಕು ಕಚ್ಚೆ ಧಣಿಗೂ
ಮೆಳ್ಳೆಗಣ್ಣ ಪೂಜಾರಿಗೂ ಬೆಂಕಿ ಹಾಕ.
ಅರೇ ಶತ್ರು ಅಂದ್ರೆ ಯಾರು?
ಈ ಕವಳದ ತಲುಬಿಗಿಷ್ಟು
ಹೊಗೆ ಹಾಕ. ತೂ.. ತೂ…
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...