Home / ಕವನ / ಕವಿತೆ / ಗೂಸಬಮ್ಸ ನಿರೀಕ್ಷೆಯಲ್ಲಿ

ಗೂಸಬಮ್ಸ ನಿರೀಕ್ಷೆಯಲ್ಲಿ

ಕಡಲ ತಡಿಯಲ್ಲಿ ನಿಂತು
ವಿರುದ್ಧ ಮುಖವಾಗಿ
ಚಿತ್ತೈಸಿದರೆ ಎಂಥ ಸಹಜತೆ
ಲ್ಯಾಂಡಸ್ಕೇಪ್ ಮಾಡಿದ
ಮಹಾನ್ ತೋಟಗಾರನೊಬ್ಬ
ಅಂಚಂಚನ್ನು ಬಿಡದೆ
ಕಲೆಯ ಗ್ಯಾಲರಿಯನ್ನೆ ಇಳಿಬಿಟ್ಟ ಹಾಗೆ.
ನೋಡುತ್ತ ಮೈಮೇಲೆ
ಗೂಸಬಮ್ಸಗಾಗಿ ಕಾದೆ.

ಗಗನ ಚುಂಬಿ ಕಟ್ಟಡದ
ಏರುವ ಇಳಿಯುವ
ಎಸ್ಕಲೇಟರಗಳ ಮೇಲೆ
ಕಿರು ಸೊಂಟದ
ಏಳು ಮಲ್ಲಿಗೆ ತೂಕದ ಹೆಣ್ಣುಗಳನ್ನು
ಧಡೂತಿ ತೊಡೆಗಳ ಇಳಿಬಿದ್ದ ಸ್ತನಗಳ ಭಾರ
ಜೀವ ಹೊತ್ತ ಗಜಗಾಮಿನಿಯರನ್ನು
ಕಂಡು ಅರೆರೆ.. ಎಂದುಕೊಳ್ಳುತ್ತ
ಮೈ ರೋಮ ನಿಮಿರಿತೇ?
ಕಾಣದೇ ವ್ಯಗ್ರಗೊಂಡೆ.

ಮೆಟ್ರೋ ಸಿಟಿಗಳಲ್ಲಿಯ ರಸ್ತೆಗಳಲ್ಲಿ
ಸೂಟುಬೂಟು ಹಾಕಿದ
ಮಿಂಚು ಕಂಗಳ
ಸುಂದರಾಂಗರ ಕಣ್ಣಿನ ಸಂಚಲನೆಗೆ
ಕೆತ್ತಿಸಿಕೊಂಡ ಮುಖಗಳ ಮಾದಕತೆಗೆ ಇದ್ದ
ಸೆಳೆತಕ್ಕೆ ಮನಸ್ಸು ಜೋಲಿ ಹೊಡೆದು
ಕೈ ನೋಡಿದರೆ
ರೋಮಾಂಚನ ವ್ಯಾಕ್ಸಾಯನ.

ಹೆತ್ತವರ ಶ್ರಾದ್ದಕ್ಕೆ ಪಿಂಡ ಬಿಡುವಾಗಲೆಲ್ಲಾ
ನೆನಪುಕ್ಕಿ ಕಣ್ಣೀರಾಗುತ್ತಿದ್ದಾಗಲೆಲ್ಲಾ
ನನ್ನಪ್ಪನ ಮೈಮೇಲಿನ ಕರಿಕಪ್ಪುರೋಮ
ನಿಮಿರಕೊಳ್ಳುತ್ತ ಅದ ನೋಡುತ್ತ
ಎದೆಯಲ್ಲಾಡುವ ಅಂಜಿಕೆಯ ಕಪ್ಪೆ
ನನ್ನಪ್ಪನ ಶ್ರಾದ್ಧದ ಹೆಸರಿನಲ್ಲಿ ಗಡದ್ದಾಗಿ ತಿಂದು
ಬರುವ ನನಗೆ ಪ್ರತಿವರ್ಷವೂ
ಮೈ ರೋಮ ನೆಟ್ಟಗಾಗಲಿಲ್ಲವೆಂದು ಖುಷಿ.

ಸಂಜೆ ಗೋಧೂಳಿ ಹೊತ್ತು
ಗದ್ದೆ ಬದುವಿಗೆ ಕೂತ ಪೆಡ್ಡೆ ಹೈಕಳು
ಬಾಲನೆಗರಿಸಿ ಓಡುತ್ತ ಬರುವ
ಕರುಗಳ ಕಂಡು
ಕುಂಡೇ ಹರಿದ ಚಡ್ಡಿಯಲ್ಲಿಯೇ
ರಿಲೇ ಓಡುತ್ತಾ ಗೂಸಬಮ್ಸ ಆವಾಹಿಸಿಕೊಳ್ಳತ್ತಿದ್ದಾರೆ.
ಹುಡಿ ಎದ್ದ ಮಣ್ಣಿಗೆ ತಟ್ಟನೆ ಬಿದ್ದ
ಒಂದೆರಡು ಮಳೆಹನಿಗಳ ಆಘ್ರಾಣಿಸುತ್ತಾ
ಎದ್ದ ರೋಮದ ಲೆಕ್ಕಾಚಾರ ಮಾಡುತ್ತಿದ್ದಾರೆ
ಇಲ್ಲಿ ಪಟ್ಟಣಗಳಲ್ಲಿ
ಸಂಜೆಯಾಗುತ್ತದೆ ಅಷ್ಟೇ
ರೋಮ ಸೆಟೆದುಕೊಳ್ಳುವುದಿಲ್ಲ.

ಹೂವಿನ ದಳಗಳ ಮುಗುಳು
ಮೈಸೋಕಿಸಿಕೊಂಡು ತಟ್ಟನೆ ಏಳುವ
ಮೈರೋಮಕ್ಕಾಗಿ
ಕೃತಕ
ಕಾತರಿಸುತ್ತಲೇ ಇದ್ದೇನೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...