Home / ಕವನ / ಕವಿತೆ / ಗೂಸಬಮ್ಸ ನಿರೀಕ್ಷೆಯಲ್ಲಿ

ಗೂಸಬಮ್ಸ ನಿರೀಕ್ಷೆಯಲ್ಲಿ

ಕಡಲ ತಡಿಯಲ್ಲಿ ನಿಂತು
ವಿರುದ್ಧ ಮುಖವಾಗಿ
ಚಿತ್ತೈಸಿದರೆ ಎಂಥ ಸಹಜತೆ
ಲ್ಯಾಂಡಸ್ಕೇಪ್ ಮಾಡಿದ
ಮಹಾನ್ ತೋಟಗಾರನೊಬ್ಬ
ಅಂಚಂಚನ್ನು ಬಿಡದೆ
ಕಲೆಯ ಗ್ಯಾಲರಿಯನ್ನೆ ಇಳಿಬಿಟ್ಟ ಹಾಗೆ.
ನೋಡುತ್ತ ಮೈಮೇಲೆ
ಗೂಸಬಮ್ಸಗಾಗಿ ಕಾದೆ.

ಗಗನ ಚುಂಬಿ ಕಟ್ಟಡದ
ಏರುವ ಇಳಿಯುವ
ಎಸ್ಕಲೇಟರಗಳ ಮೇಲೆ
ಕಿರು ಸೊಂಟದ
ಏಳು ಮಲ್ಲಿಗೆ ತೂಕದ ಹೆಣ್ಣುಗಳನ್ನು
ಧಡೂತಿ ತೊಡೆಗಳ ಇಳಿಬಿದ್ದ ಸ್ತನಗಳ ಭಾರ
ಜೀವ ಹೊತ್ತ ಗಜಗಾಮಿನಿಯರನ್ನು
ಕಂಡು ಅರೆರೆ.. ಎಂದುಕೊಳ್ಳುತ್ತ
ಮೈ ರೋಮ ನಿಮಿರಿತೇ?
ಕಾಣದೇ ವ್ಯಗ್ರಗೊಂಡೆ.

ಮೆಟ್ರೋ ಸಿಟಿಗಳಲ್ಲಿಯ ರಸ್ತೆಗಳಲ್ಲಿ
ಸೂಟುಬೂಟು ಹಾಕಿದ
ಮಿಂಚು ಕಂಗಳ
ಸುಂದರಾಂಗರ ಕಣ್ಣಿನ ಸಂಚಲನೆಗೆ
ಕೆತ್ತಿಸಿಕೊಂಡ ಮುಖಗಳ ಮಾದಕತೆಗೆ ಇದ್ದ
ಸೆಳೆತಕ್ಕೆ ಮನಸ್ಸು ಜೋಲಿ ಹೊಡೆದು
ಕೈ ನೋಡಿದರೆ
ರೋಮಾಂಚನ ವ್ಯಾಕ್ಸಾಯನ.

ಹೆತ್ತವರ ಶ್ರಾದ್ದಕ್ಕೆ ಪಿಂಡ ಬಿಡುವಾಗಲೆಲ್ಲಾ
ನೆನಪುಕ್ಕಿ ಕಣ್ಣೀರಾಗುತ್ತಿದ್ದಾಗಲೆಲ್ಲಾ
ನನ್ನಪ್ಪನ ಮೈಮೇಲಿನ ಕರಿಕಪ್ಪುರೋಮ
ನಿಮಿರಕೊಳ್ಳುತ್ತ ಅದ ನೋಡುತ್ತ
ಎದೆಯಲ್ಲಾಡುವ ಅಂಜಿಕೆಯ ಕಪ್ಪೆ
ನನ್ನಪ್ಪನ ಶ್ರಾದ್ಧದ ಹೆಸರಿನಲ್ಲಿ ಗಡದ್ದಾಗಿ ತಿಂದು
ಬರುವ ನನಗೆ ಪ್ರತಿವರ್ಷವೂ
ಮೈ ರೋಮ ನೆಟ್ಟಗಾಗಲಿಲ್ಲವೆಂದು ಖುಷಿ.

ಸಂಜೆ ಗೋಧೂಳಿ ಹೊತ್ತು
ಗದ್ದೆ ಬದುವಿಗೆ ಕೂತ ಪೆಡ್ಡೆ ಹೈಕಳು
ಬಾಲನೆಗರಿಸಿ ಓಡುತ್ತ ಬರುವ
ಕರುಗಳ ಕಂಡು
ಕುಂಡೇ ಹರಿದ ಚಡ್ಡಿಯಲ್ಲಿಯೇ
ರಿಲೇ ಓಡುತ್ತಾ ಗೂಸಬಮ್ಸ ಆವಾಹಿಸಿಕೊಳ್ಳತ್ತಿದ್ದಾರೆ.
ಹುಡಿ ಎದ್ದ ಮಣ್ಣಿಗೆ ತಟ್ಟನೆ ಬಿದ್ದ
ಒಂದೆರಡು ಮಳೆಹನಿಗಳ ಆಘ್ರಾಣಿಸುತ್ತಾ
ಎದ್ದ ರೋಮದ ಲೆಕ್ಕಾಚಾರ ಮಾಡುತ್ತಿದ್ದಾರೆ
ಇಲ್ಲಿ ಪಟ್ಟಣಗಳಲ್ಲಿ
ಸಂಜೆಯಾಗುತ್ತದೆ ಅಷ್ಟೇ
ರೋಮ ಸೆಟೆದುಕೊಳ್ಳುವುದಿಲ್ಲ.

ಹೂವಿನ ದಳಗಳ ಮುಗುಳು
ಮೈಸೋಕಿಸಿಕೊಂಡು ತಟ್ಟನೆ ಏಳುವ
ಮೈರೋಮಕ್ಕಾಗಿ
ಕೃತಕ
ಕಾತರಿಸುತ್ತಲೇ ಇದ್ದೇನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...