Home / ಕವನ / ಕವಿತೆ / ಯುಗಾದಿ ಹರವು

ಯುಗಾದಿ ಹರವು

ಹರವು ಹೆಚ್ಚಲು ಮುಗಿಲ ನೆಲದಲಿ
ಬೆಳಕು ಚಿಮ್ಮಿತು
ಕೊಸರು ಕರಗಲು ಹಸೆಯು ಹರಡಲು
ಎದೆಯ ಬನದಲಿ ತನ್ನಿಂತಾನೇ
ಚೆಲುವು ಮೂಡಿತು.

ಯುಗವು ಕಳೆಯಲು ಯುಗವು ಮರಳಲು
ಜಗದ ನಿಯಮ ಸಹಜವಾಗಲು
ವಿಳಂಬಿ ವಿಳಂಬವೆನ್ನದೇ
ದಾಪುಗಾಲು ಹಾಕಿ ಬರುತಿರೆ
ಹೇಮಲಂಬಿ ಹಳೆಯ ಬಿಂಬಿ
ದೂರ ಸರಿಯಿತು.

ಕೆಂದಳಿರಿಗೂ ಮೀಗಿ ಕೆಂದೂಳು
ಹುಡಿಯೆದ್ದು
ಜಗವು ಸುಗ್ಗಿಯ ಸೊಬಗ ಹೊದೆದು
ರಸದೌತಣ ಇಳೆಯ ಮನೆಯೊಳೆದ್ದು
ತೇಲುತೇಲುತ
ಕನಸ ಹೆಣೆಯುವ ಕಾಲ ಬಂದಿತು.

ಹೂಬಿಸಿಲು ನೃತ್ಯಗೈಯಲು
ಮಾಮರದ ಸೆರಗ ಹಿಡಿಯಲು
ದುಂಬಿ ನುಡಿಯಲು,
ಕುಕಿಲ ಉಲಿಯಲು
ರೈತ ಬವಣೆಯು ಮುಗಿದು ಹೋಗಲು
ಸುಗ್ಗಿ ಸಂಭ್ರಮ ಮುಷ್ಟಿ ಹಿಡಿದು
ಸೃಷ್ಟಿ ಮೆರೆಯಿತು.

ಬೇವು ಬೆಲ್ಲ ನೋವು ನಲಿವು
ಮೆರಗು ಚೆಲ್ಲಿತು.
ಹೊಸ ಭರವಸೆಯ ಬೆಳಕ ಸೂಡಿ.
ಎದೆಗೂ ಎದೆಗೂ ಅರಿವು ಹರಡಿ
ವೈರುಧ್ಯ ತೊರೆದು ಜ್ಞಾನ ಮೂಡಿ
ಏಕತೆಯ ಗಾನ ಹೊರಟಿತು.

ಶಿಶಿರ ಋತುವು ಬೇಲಿದಾಟಲು
ವಸಂತ ಗಾನದ ಮಧುರ ಮೈತ್ರಿಯು
ಚೈತ್ರ ಸೊಬಗು ಬಲೆಯ ಬೀಸಲು
ಬಿರಿದ ಮೊಗ್ಗಿನ ಘಮವು ಪಸರಿಸೆ
ಹಾರೋ ಹೆಜ್ಜೆಗೂ ಗೆಜ್ಜೆ ಕಟ್ಟಿತು.

ಜಗವ ಹರಸಲು,
ರಮೆಯ ರಮಿಸಲು
ಬವಣೆ ಭಾವ ಕಳೆದು ಹೋಗಲು
ತಳಿರುತೋರಣ ಮುತ್ತಿನಾರತಿ
ಸುಮದರಾಶಿಯ ಹೊತ್ತು ತಂದಿತು
ವಿಳಂಬವೆನ್ನದೇವಿಳಂಬಿಯೊಡನೆ
ಇಳೆಗೆ ಹಬ್ಬವು ಹಬ್ಬಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...