Home / ಕವನ / ಕವಿತೆ / ಯುಗಾದಿ ಹರವು

ಯುಗಾದಿ ಹರವು

ಹರವು ಹೆಚ್ಚಲು ಮುಗಿಲ ನೆಲದಲಿ
ಬೆಳಕು ಚಿಮ್ಮಿತು
ಕೊಸರು ಕರಗಲು ಹಸೆಯು ಹರಡಲು
ಎದೆಯ ಬನದಲಿ ತನ್ನಿಂತಾನೇ
ಚೆಲುವು ಮೂಡಿತು.

ಯುಗವು ಕಳೆಯಲು ಯುಗವು ಮರಳಲು
ಜಗದ ನಿಯಮ ಸಹಜವಾಗಲು
ವಿಳಂಬಿ ವಿಳಂಬವೆನ್ನದೇ
ದಾಪುಗಾಲು ಹಾಕಿ ಬರುತಿರೆ
ಹೇಮಲಂಬಿ ಹಳೆಯ ಬಿಂಬಿ
ದೂರ ಸರಿಯಿತು.

ಕೆಂದಳಿರಿಗೂ ಮೀಗಿ ಕೆಂದೂಳು
ಹುಡಿಯೆದ್ದು
ಜಗವು ಸುಗ್ಗಿಯ ಸೊಬಗ ಹೊದೆದು
ರಸದೌತಣ ಇಳೆಯ ಮನೆಯೊಳೆದ್ದು
ತೇಲುತೇಲುತ
ಕನಸ ಹೆಣೆಯುವ ಕಾಲ ಬಂದಿತು.

ಹೂಬಿಸಿಲು ನೃತ್ಯಗೈಯಲು
ಮಾಮರದ ಸೆರಗ ಹಿಡಿಯಲು
ದುಂಬಿ ನುಡಿಯಲು,
ಕುಕಿಲ ಉಲಿಯಲು
ರೈತ ಬವಣೆಯು ಮುಗಿದು ಹೋಗಲು
ಸುಗ್ಗಿ ಸಂಭ್ರಮ ಮುಷ್ಟಿ ಹಿಡಿದು
ಸೃಷ್ಟಿ ಮೆರೆಯಿತು.

ಬೇವು ಬೆಲ್ಲ ನೋವು ನಲಿವು
ಮೆರಗು ಚೆಲ್ಲಿತು.
ಹೊಸ ಭರವಸೆಯ ಬೆಳಕ ಸೂಡಿ.
ಎದೆಗೂ ಎದೆಗೂ ಅರಿವು ಹರಡಿ
ವೈರುಧ್ಯ ತೊರೆದು ಜ್ಞಾನ ಮೂಡಿ
ಏಕತೆಯ ಗಾನ ಹೊರಟಿತು.

ಶಿಶಿರ ಋತುವು ಬೇಲಿದಾಟಲು
ವಸಂತ ಗಾನದ ಮಧುರ ಮೈತ್ರಿಯು
ಚೈತ್ರ ಸೊಬಗು ಬಲೆಯ ಬೀಸಲು
ಬಿರಿದ ಮೊಗ್ಗಿನ ಘಮವು ಪಸರಿಸೆ
ಹಾರೋ ಹೆಜ್ಜೆಗೂ ಗೆಜ್ಜೆ ಕಟ್ಟಿತು.

ಜಗವ ಹರಸಲು,
ರಮೆಯ ರಮಿಸಲು
ಬವಣೆ ಭಾವ ಕಳೆದು ಹೋಗಲು
ತಳಿರುತೋರಣ ಮುತ್ತಿನಾರತಿ
ಸುಮದರಾಶಿಯ ಹೊತ್ತು ತಂದಿತು
ವಿಳಂಬವೆನ್ನದೇವಿಳಂಬಿಯೊಡನೆ
ಇಳೆಗೆ ಹಬ್ಬವು ಹಬ್ಬಿತು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...