ಓ ಸಾವೇ!

ನಿನ್ನ ಹಂದರದ ಪರದೆಯನ್ನೊಮ್ಮೆ
ಕಳಚಿಟ್ಟುಬಿಡು.
ಲೋಕದ ಮೋಹ
ಮಕಾರಗಳು ಚಿಗುರುತಿವೆ.

ದೆಸೆದಿಕ್ಕುಗಳು ಚೈತ್ರ ಚಿಗುರ
ಮೀಯುತ್ತಿವೆ
ಮನದ ಬನಿ ಕೆನೆಗಟ್ಟಿದೆ.

ಓ..ಸಾವೇ ಕನಿಕರಿಸು
ಕಾಡಿಗೆಯ ಕಣ್ಣು
ಕಪೋಲದ ಕೆಂಪು
ಕೆಂದಾವರೆ ತುಟಿಗಳು ಅರಳಿ ನಗುತ್ತಿವೆ.

ಮರಗಿಡ ನದಿ ಬನದ
ಚಿತ್ರಕಾರನೊಬ್ಬ
ಹಸ್ತಾಕ್ಷರವ ಮೂಡಿಸುತ್ತಲೇ ಇದ್ದಾನೆ.
ದೃಗೋಚರ ಶ್ರಾವ್ಯ ಕಿವಿ ತುಂಬುತ್ತಿದೆ.

ತುರುಬಿಗೆ ನಿನ್ನೆಯಷ್ಟೇ
ಗುಲಾಬಿಯೊಂದ ಮುಡಿಸಿದ ಕೈ
ಕರೆಯುತ್ತಿದೆ ಕಾಣದ ಕಡಲಿನ
ತಟದಿ ಉಯ್ಯಾಲೆಗೆ

ಓ ಸಾವೇ
ಸುಮ್ಮನಿದ್ದು ಬಿಡು ಸ್ವಲ್ಪಕಾಲ
ಕೆದರು ತಲೆಯ ಮರಗಳ
ನೆತ್ತಿ ಹಸಿರ ಮುಪ್ಪುರಿಗೊಳ್ಳುವವರೆಗಾದರೂ
ಆ ನೆರಳಬುಡದಲ್ಲಿ
ನನ್ನಿನಿಯನ ಎದೆಯ
ನಿಬಿಡ ಕೇಶದ ಗೂಡಲ್ಲಿ ನಾ
ಬೆರಳಾಡಿಸಿ ಬರುವವರೆಗಾದರೂ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೧
Next post ಮುಸ್ಸಂಜೆಯ ಮಿಂಚು – ೧೮

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys