Home / ಕವನ / ಕವಿತೆ / ಸಂದೂಕದೊಳಗಣ ಕಡತ

ಸಂದೂಕದೊಳಗಣ ಕಡತ

ಅವನ ನೆನಪಿನ ಕಿರು
ಕಡತಗಳು ಹಾಗೆ ಇವೆ.
ಸಂದೂಕದ ಅಡಿಯಲ್ಲಿ ಅಲ್ಲಲ್ಲಿ
ಧೂಳಿನ ಲೇಪನಗೊಂಡು

ಎಡತಾಕುವ ಬೆಕ್ಕಿನಂತೆ
ಸದಾ ಹಿಂದೆ ಸುತ್ತುತ್ತಿದ್ದವ
ಅಪರೂಪದ ಬಿಳಿ ಪಾರಿವಾಳವಾದ.
ನನ್ನೆದೆಯ ಗೂಡಲ್ಲಿ
ಕಾಪಿಡುವೆ ನಿನ್ನ ಎಂದವ
ನನ್ನೊಡಲ ಚಿಗುರು ಚೆಲುವುಗಳನ್ನೆಲ್ಲಾ
ಚಿಂದಿಗೊಪ್ಪಿಸಿ ನಡೆದ.

ಸರದಿ ಸಾಲಿನ ಇರುವೆಗಳಂತೆ
ಕಾದು ನಿಂತವರ ಕಡೆಗಣಿಸಿ
ತೆಕೈಸಿ ಬಂದರೆ
ಇರುವೆಯ ಕಾಲಲ್ಲಿ ಹೊಸಕಿದಂತೆ
ಹಿಸುಕಿ ಹಾಕಿದ..
ನೋವಿನ ಕಟಕಟೆಯಲ್ಲಿ
ನಿಂತಾಗಲೆಲ್ಲಾ
ಕೊರೆವ ಗರಗಸದ ಆತ್ಮಗತ
ಪಾಟಿಸವಾಲು

ಆದರೀಗ.. ಈಗೀಗ
ಸಂದೂಕದ ಸಂದಿಗೊಂದಿಗಳು
ಮೇಲೈಯಲ್ಲಿ
ವಿಪರೀತ ಅಲಂಕೃತಗೊಂಡಿವೆ.
ಹೊಸ ಪುಸ್ತಕವೊಂದು ಸಂದೂಕದ
ಬೆನ್ನೇರಿದೆ.
ಬಿಚ್ಚಿ ಮೈ ಚಾಚಿದೆ
ಅರ್‍ವಾಚೀನ ಸೌಂದರ್ಯದ
ನಾವಿನ್ಯತೆ ತೊಟ್ಟು.

ಆದರೂ ನೆನಪುಗಳು ಬೆದರುತ್ತವೆ
ಹಿಡಿದಿಡಲಾಗದೇ
ಹಳೆಯ ಉಸಿರ ಬಸಿರ
ಕಡತಗಳ ತೆಗೆದೊಮ್ಮೆ
ನೋಡಬೇಕೆನಿಸುತ್ತದೆ
ಅದೇ ಗಟ್ಟಿತನವೇ?
ಇಲ್ಲ. ಗೆದ್ದಲುಗೊಂಡ
ಪುಡಿಪುಡಿಗೊಂಡ ಕಾಗದದ ಚೂರೇ
ಎಂದು.
ಓದಬಲ್ಲನೇ ನಾನು
ಹಳೆಯ ದಿಟ್ಟಿಯ ಹಿಡಿದು
ಕನ್ನಡಕದ ದೃಷ್ಟಿಯಲ್ಲಿ ಮುಳುಗಿದವಳಿಗೆ
ತಿಳಿದೀತೆ ಮೊಗೆವ ಮಮತೆಯ
ಮಧುರ ಧಾರೆಯ ಚುಕ್ಕಿ ಹೊಳಪು.
ಕಂಡೀತೆ ಮಗದೊಮ್ಮೆ
ಅವನಲ್ಲೂ ಈ ಚಳಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...