Home / ಕವನ / ಕವಿತೆ / ಜಗವ ತೋರುವ ಕಣ್ಣು

ಜಗವ ತೋರುವ ಕಣ್ಣು

ಜೊತೆಜೊತೆಯಲಿ
ಕೈಯಲ್ಲಿ ಕೈಯಿಟ್ಟು ನಡೆವ
ಅವರನ್ನೂ ಕಂಡಾಗಲೆಲ್ಲಾ,
ಮುಂದೊಂದು ದಿನ ನಾನು ಹೀಗೆ,
ಬರಿಯ ಹಾಗೇ ಅಂದುಕೊಂಡಿದ್ದೆ, ಅಷ್ಟೇ.

ಪೇಟೆ ದಾರಿಯಲ್ಲಿ
ಹೀಗೆ ಕೈ ಕೈ ಹಿಡಿದು
ನಡೆದಾಡಿರಲೇ ಇಲ್ಲ ನಾವೆಂದೂ.
ಹಾಗೆ ಇರಲಾಗಲೇ ಇಲ್ಲ
ಎಂದುಕೊಳ್ಳುತ್ತಿರುವಾಗಲೇ,
ಆಕಸ್ಮಿಕವಾಗಿ ಆತ ಎದುರಾದದ್ದು.
ಕೊಂಚ ಗಲಿಬಿಲಿ ಮುಖದಲ್ಲೇ ನಕ್ಕು
ಹಲ್ಲು ಗಿಂಜಿದ.
ನನ್ನ ಮುಖದಲ್ಲೊಂದು ವಿಜಯದ ನಗೆ.

ಬಿಚ್ಚಿಕೊಳ್ಳಲು ಏನಿಲ್ಲ
ಗಿಡದ ಕೊರಳಲ್ಲಿ ಮೂಡಿದ ಏಕಾಂಗಿದನಿ
ಜಗದ ದನಿಯಾಗಿ ಮೂಡಿದ್ದಾಗಿದೆ.
ಹೆರಳಿಗೆ ಮುಡಿಸಿದ ಮಾಲೆ
ಕಿತ್ತೆಸೆದು ವರ್ಷಗಳಾಗಿವೆ.
ನಾಭಿಯಲ್ಲುದಿಸಿದ ನಾದ
ಅಶ್ರುತ ಗಾನವಾಗಿ
ಕರ್ಣಕ್ಕೊಲಿಯದೆ ಕರ್ಕಶವಾಗ ಲಾಗಾಯ್ತು.
ಬರಿಯ ದಾಸರ ಪದಗಳೇ
ಉಸಿರಾಗಿ ಕಳೆದಾಯ್ತು.

ಎಲ್ಲ ಹೆಣ್ಣು ಅಹಲ್ಯೆ ಎಂದೇ ಪರಿಭಾವಿಸಿ
ಅನರ್ಥಗೈಯುವ ಇಂದ್ರರಿರುವರು ಜಾಣೆ
ಸೀತೆಯಂತಿರಬೇಕು ನೀನು
ಎಂದಾಗಲೆಲ್ಲಾ ನಾನೆನ್ನುತ್ತಿದ್ದೆ
‘ನೀನು ರಾಮನಾದರೆ’
ಅಷ್ಟೇ ಪಲ್ಲಟಿಸಿಬಿಟ್ಟಿತು ಬದುಕು.
ಪರಿಪರಿಯಾದ
ಯಾವ ಪ್ರಲಾಪವೂ ಪ್ರಕೋಪವೂ ಇಲ್ಲದೇ.

ಈಗ ಪೇಟೆದಾರಿಯಲ್ಲಿ
ಕೈ ಕೈ ಹಿಡಿದು ನುಲಿವ
ಅವರು ಗೋಚರಿಸುವುದಿಲ್ಲ.
ಅದಕ್ಕೆಂದೆ ಗುತ್ತು ಬದಲಿಸಿ ಬೆಟ್ಟದ
ನೆತ್ತಿಯ ಮೇಲೆ ಕೂತೆ.
ಕನಸ ಕವನ ನೆಲನೆಲ್ಲಿಯ ಬಾಯಿಗಿಟ್ಟಿತು
ಸೋಂಕಿನ ಶೀತಕ್ಕೆ ರಾಮಬಾಣ
ಮನೆ ಕಿಬಳಿಯ ಬದಿಯಲ್ಲೆ
ಹುಟ್ಟಿದ ಇದಕ್ಕೆ ಅದೆಂಥಾ
ಇಸ್ರೂಪದ ಹೆಸರು- ನೆಲನೆಲ್ಲಿ
ಪೇಟೆದಾರಿಯಲ್ಲಿ ಸಿಗದ ಇದನ್ನು
ಹಿತ್ತಲು ಹುಡುಕಿಯೇ ತೆಗೆದದ್ದು
ಒಂದಿಷ್ಟು ನೀರು ಸೇರಿಸಿ ಕುದಿಸಿ ರಸ
ಬಸಿದು ಕುಡಿದಷ್ಟು ರಸವುಕ್ಕಿಸಿ
ಜಗವ ತೋರುವ ಕಣ್ಣಾದದ್ದು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...