Home / ಕವನ / ಕವಿತೆ / ಜಗವ ತೋರುವ ಕಣ್ಣು

ಜಗವ ತೋರುವ ಕಣ್ಣು

ಜೊತೆಜೊತೆಯಲಿ
ಕೈಯಲ್ಲಿ ಕೈಯಿಟ್ಟು ನಡೆವ
ಅವರನ್ನೂ ಕಂಡಾಗಲೆಲ್ಲಾ,
ಮುಂದೊಂದು ದಿನ ನಾನು ಹೀಗೆ,
ಬರಿಯ ಹಾಗೇ ಅಂದುಕೊಂಡಿದ್ದೆ, ಅಷ್ಟೇ.

ಪೇಟೆ ದಾರಿಯಲ್ಲಿ
ಹೀಗೆ ಕೈ ಕೈ ಹಿಡಿದು
ನಡೆದಾಡಿರಲೇ ಇಲ್ಲ ನಾವೆಂದೂ.
ಹಾಗೆ ಇರಲಾಗಲೇ ಇಲ್ಲ
ಎಂದುಕೊಳ್ಳುತ್ತಿರುವಾಗಲೇ,
ಆಕಸ್ಮಿಕವಾಗಿ ಆತ ಎದುರಾದದ್ದು.
ಕೊಂಚ ಗಲಿಬಿಲಿ ಮುಖದಲ್ಲೇ ನಕ್ಕು
ಹಲ್ಲು ಗಿಂಜಿದ.
ನನ್ನ ಮುಖದಲ್ಲೊಂದು ವಿಜಯದ ನಗೆ.

ಬಿಚ್ಚಿಕೊಳ್ಳಲು ಏನಿಲ್ಲ
ಗಿಡದ ಕೊರಳಲ್ಲಿ ಮೂಡಿದ ಏಕಾಂಗಿದನಿ
ಜಗದ ದನಿಯಾಗಿ ಮೂಡಿದ್ದಾಗಿದೆ.
ಹೆರಳಿಗೆ ಮುಡಿಸಿದ ಮಾಲೆ
ಕಿತ್ತೆಸೆದು ವರ್ಷಗಳಾಗಿವೆ.
ನಾಭಿಯಲ್ಲುದಿಸಿದ ನಾದ
ಅಶ್ರುತ ಗಾನವಾಗಿ
ಕರ್ಣಕ್ಕೊಲಿಯದೆ ಕರ್ಕಶವಾಗ ಲಾಗಾಯ್ತು.
ಬರಿಯ ದಾಸರ ಪದಗಳೇ
ಉಸಿರಾಗಿ ಕಳೆದಾಯ್ತು.

ಎಲ್ಲ ಹೆಣ್ಣು ಅಹಲ್ಯೆ ಎಂದೇ ಪರಿಭಾವಿಸಿ
ಅನರ್ಥಗೈಯುವ ಇಂದ್ರರಿರುವರು ಜಾಣೆ
ಸೀತೆಯಂತಿರಬೇಕು ನೀನು
ಎಂದಾಗಲೆಲ್ಲಾ ನಾನೆನ್ನುತ್ತಿದ್ದೆ
‘ನೀನು ರಾಮನಾದರೆ’
ಅಷ್ಟೇ ಪಲ್ಲಟಿಸಿಬಿಟ್ಟಿತು ಬದುಕು.
ಪರಿಪರಿಯಾದ
ಯಾವ ಪ್ರಲಾಪವೂ ಪ್ರಕೋಪವೂ ಇಲ್ಲದೇ.

ಈಗ ಪೇಟೆದಾರಿಯಲ್ಲಿ
ಕೈ ಕೈ ಹಿಡಿದು ನುಲಿವ
ಅವರು ಗೋಚರಿಸುವುದಿಲ್ಲ.
ಅದಕ್ಕೆಂದೆ ಗುತ್ತು ಬದಲಿಸಿ ಬೆಟ್ಟದ
ನೆತ್ತಿಯ ಮೇಲೆ ಕೂತೆ.
ಕನಸ ಕವನ ನೆಲನೆಲ್ಲಿಯ ಬಾಯಿಗಿಟ್ಟಿತು
ಸೋಂಕಿನ ಶೀತಕ್ಕೆ ರಾಮಬಾಣ
ಮನೆ ಕಿಬಳಿಯ ಬದಿಯಲ್ಲೆ
ಹುಟ್ಟಿದ ಇದಕ್ಕೆ ಅದೆಂಥಾ
ಇಸ್ರೂಪದ ಹೆಸರು- ನೆಲನೆಲ್ಲಿ
ಪೇಟೆದಾರಿಯಲ್ಲಿ ಸಿಗದ ಇದನ್ನು
ಹಿತ್ತಲು ಹುಡುಕಿಯೇ ತೆಗೆದದ್ದು
ಒಂದಿಷ್ಟು ನೀರು ಸೇರಿಸಿ ಕುದಿಸಿ ರಸ
ಬಸಿದು ಕುಡಿದಷ್ಟು ರಸವುಕ್ಕಿಸಿ
ಜಗವ ತೋರುವ ಕಣ್ಣಾದದ್ದು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...