ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲಾ

ಎಷ್ಟು ಸವರಿದರೂ ಮತ್ತೆ ಮತ್ತೆ
ಮುಟ್ಟಬೇಕೆನ್ನಿಸುವ
ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲ
ಅಕ್ಷರಗಳು
ನನ್ನೊಳಗಿನ ಆತ್ಮದಂತೆ ಹರಿದಾಡುತ್ತವೆ.

ಆತನ ತುಟಿಗಳ ಮೇಲೆ
ಬೆರಳಾಡಿಸಿದಾಗೆಲ್ಲ
ಅನೂಹ್ಯವಾದ ಬೆಸುಗೆ
ಕರುಳ ಕೊಂಡಿಯಂತೆ
ಒಳಗೊಳಗೆ ಬಲಿಯುತ್ತದೆ.
ನನ್ನೊಳಗಿನ ಆತ್ಮದ ಕುರುಡು
ಕರಗಿ ಹೋಗಲೆಂದು
ಆತನ ಪತ್ರಕ್ಕೆ ಮಾತ್ರ ರುಜು ಹಾಕಿದೆ.

ಸತ್ಯಕ್ಕೂ ಸುಳ್ಳಿಗೂ ನಡುವಿನ ಪಟ
ಕಳೆದು ಕಪ್ಪುಕಲೆಗಳು
ಎದ್ದುಬಿದ್ದು ಹೊರಳಾಡಿ
ಶುದ್ಧ ಮಣ್ಣಿನೆದೆಗಳು ಬರಸೆಳೆದು
ತಬ್ಬಿಕೊಂಡವು.
ಲೋಕದ ಜಂಜಾಟಗಳಿಗೆ
ಆರ್ತನಾದಗೈವ ಅಕ್ಷರಗಳಿಲ್ಲ ಈಗ

ನೀಲಾಕಾಶದ ನಿರಭ್ರತೆಯ
ಹೊಟ್ಟೆ ಸೀಳಿ
ಮಿಂಚಿನ ಕಣವೊಂದು ಆಳಕ್ಕೆ
ಗರ್ಭದೊಳಗೆ ಹೊಕ್ಕಿದ್ದೇ ತಡ,
ನೆಲ ಮುಗಿಲನ್ನು
ಮೋಹಿಸುತ್ತಾ ಎದೆತೆರೆದು ಕಣ್ಣರಳಿಸಿತು.
ಈ ದಾರಿಯ ಸೊಬಗಿನಲ್ಲಿ
ಕಣ್ಸೆಳೆಯುವ
ಬಿಸಿಲು-ಬೆಳದಿಂಗಳು, ಹಸಿರು-ಕೆಸರು
ಎಲ್ಲವನ್ನೂ ಇನ್ನಿಲ್ಲದಂತೆ ಪ್ರೀತಿಸುತ್ತಾ,
ಎರಡೂ ತೆಕ್ಕೆಗಳಲ್ಲಿ
ಬರಸೆಳೆದುಕೊಂಡು ಮುದ್ದಿಸುತ್ತಿದ್ದೇನೆ.

ಬಿಚ್ಚು ಮನಸ್ಸಿನಂತೆ
ದೇಹದ ಬಿಚ್ಚು ಕೂಡಾ ಆಪ್ತವಾದಂತೆ
ಅವನೂ ನಾನು ಕ್ಷಣಕ್ಷಣವೂ ಬಿಡದೇ
ಆವರಿಸಿಕೊಳ್ಳುತ್ತಲೇ,
ನೆಲದ ಹಸಿ ಚಿಗುರನ್ನು
ಜಗವೊಪ್ಪುವ ಪದಗಳಿಂದ ಹಿಡಿದು
ಮತ್ತದನ್ನು ಸುರವಿ ಹರವುದನು ಕಲಿತಿದ್ದೇನೆ.

ಆತನ ಕೈಸಂದಿನೊಳಗೆ
ಬೆರಳು ತೂರಿಸಿಕೊಂಡೇ
ದೇಹ ಮೀರಿದ ಪ್ರೇಮದ
ಠೇವಣಿ ಇಟ್ಟಿದ್ದು
ಮೊನ್ನೆ ಮೊನ್ನೆಯಷ್ಟೇ ನಗದಾಗಿದೆ.
ಈಗ ನಾನು ಅವನೂ ಕೂಡಿಯೇ
ಮನೆ ಕಟ್ಟುತ್ತಿದ್ದೇವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೭
Next post ಮುಸ್ಸಂಜೆಯ ಮಿಂಚು – ೨೪

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…