ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲಾ

ಎಷ್ಟು ಸವರಿದರೂ ಮತ್ತೆ ಮತ್ತೆ
ಮುಟ್ಟಬೇಕೆನ್ನಿಸುವ
ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲ
ಅಕ್ಷರಗಳು
ನನ್ನೊಳಗಿನ ಆತ್ಮದಂತೆ ಹರಿದಾಡುತ್ತವೆ.

ಆತನ ತುಟಿಗಳ ಮೇಲೆ
ಬೆರಳಾಡಿಸಿದಾಗೆಲ್ಲ
ಅನೂಹ್ಯವಾದ ಬೆಸುಗೆ
ಕರುಳ ಕೊಂಡಿಯಂತೆ
ಒಳಗೊಳಗೆ ಬಲಿಯುತ್ತದೆ.
ನನ್ನೊಳಗಿನ ಆತ್ಮದ ಕುರುಡು
ಕರಗಿ ಹೋಗಲೆಂದು
ಆತನ ಪತ್ರಕ್ಕೆ ಮಾತ್ರ ರುಜು ಹಾಕಿದೆ.

ಸತ್ಯಕ್ಕೂ ಸುಳ್ಳಿಗೂ ನಡುವಿನ ಪಟ
ಕಳೆದು ಕಪ್ಪುಕಲೆಗಳು
ಎದ್ದುಬಿದ್ದು ಹೊರಳಾಡಿ
ಶುದ್ಧ ಮಣ್ಣಿನೆದೆಗಳು ಬರಸೆಳೆದು
ತಬ್ಬಿಕೊಂಡವು.
ಲೋಕದ ಜಂಜಾಟಗಳಿಗೆ
ಆರ್ತನಾದಗೈವ ಅಕ್ಷರಗಳಿಲ್ಲ ಈಗ

ನೀಲಾಕಾಶದ ನಿರಭ್ರತೆಯ
ಹೊಟ್ಟೆ ಸೀಳಿ
ಮಿಂಚಿನ ಕಣವೊಂದು ಆಳಕ್ಕೆ
ಗರ್ಭದೊಳಗೆ ಹೊಕ್ಕಿದ್ದೇ ತಡ,
ನೆಲ ಮುಗಿಲನ್ನು
ಮೋಹಿಸುತ್ತಾ ಎದೆತೆರೆದು ಕಣ್ಣರಳಿಸಿತು.
ಈ ದಾರಿಯ ಸೊಬಗಿನಲ್ಲಿ
ಕಣ್ಸೆಳೆಯುವ
ಬಿಸಿಲು-ಬೆಳದಿಂಗಳು, ಹಸಿರು-ಕೆಸರು
ಎಲ್ಲವನ್ನೂ ಇನ್ನಿಲ್ಲದಂತೆ ಪ್ರೀತಿಸುತ್ತಾ,
ಎರಡೂ ತೆಕ್ಕೆಗಳಲ್ಲಿ
ಬರಸೆಳೆದುಕೊಂಡು ಮುದ್ದಿಸುತ್ತಿದ್ದೇನೆ.

ಬಿಚ್ಚು ಮನಸ್ಸಿನಂತೆ
ದೇಹದ ಬಿಚ್ಚು ಕೂಡಾ ಆಪ್ತವಾದಂತೆ
ಅವನೂ ನಾನು ಕ್ಷಣಕ್ಷಣವೂ ಬಿಡದೇ
ಆವರಿಸಿಕೊಳ್ಳುತ್ತಲೇ,
ನೆಲದ ಹಸಿ ಚಿಗುರನ್ನು
ಜಗವೊಪ್ಪುವ ಪದಗಳಿಂದ ಹಿಡಿದು
ಮತ್ತದನ್ನು ಸುರವಿ ಹರವುದನು ಕಲಿತಿದ್ದೇನೆ.

ಆತನ ಕೈಸಂದಿನೊಳಗೆ
ಬೆರಳು ತೂರಿಸಿಕೊಂಡೇ
ದೇಹ ಮೀರಿದ ಪ್ರೇಮದ
ಠೇವಣಿ ಇಟ್ಟಿದ್ದು
ಮೊನ್ನೆ ಮೊನ್ನೆಯಷ್ಟೇ ನಗದಾಗಿದೆ.
ಈಗ ನಾನು ಅವನೂ ಕೂಡಿಯೇ
ಮನೆ ಕಟ್ಟುತ್ತಿದ್ದೇವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೭
Next post ಮುಸ್ಸಂಜೆಯ ಮಿಂಚು – ೨೪

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys