Home / ಕವನ / ಕವಿತೆ / ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲಾ

ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲಾ

ಎಷ್ಟು ಸವರಿದರೂ ಮತ್ತೆ ಮತ್ತೆ
ಮುಟ್ಟಬೇಕೆನ್ನಿಸುವ
ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲ
ಅಕ್ಷರಗಳು
ನನ್ನೊಳಗಿನ ಆತ್ಮದಂತೆ ಹರಿದಾಡುತ್ತವೆ.

ಆತನ ತುಟಿಗಳ ಮೇಲೆ
ಬೆರಳಾಡಿಸಿದಾಗೆಲ್ಲ
ಅನೂಹ್ಯವಾದ ಬೆಸುಗೆ
ಕರುಳ ಕೊಂಡಿಯಂತೆ
ಒಳಗೊಳಗೆ ಬಲಿಯುತ್ತದೆ.
ನನ್ನೊಳಗಿನ ಆತ್ಮದ ಕುರುಡು
ಕರಗಿ ಹೋಗಲೆಂದು
ಆತನ ಪತ್ರಕ್ಕೆ ಮಾತ್ರ ರುಜು ಹಾಕಿದೆ.

ಸತ್ಯಕ್ಕೂ ಸುಳ್ಳಿಗೂ ನಡುವಿನ ಪಟ
ಕಳೆದು ಕಪ್ಪುಕಲೆಗಳು
ಎದ್ದುಬಿದ್ದು ಹೊರಳಾಡಿ
ಶುದ್ಧ ಮಣ್ಣಿನೆದೆಗಳು ಬರಸೆಳೆದು
ತಬ್ಬಿಕೊಂಡವು.
ಲೋಕದ ಜಂಜಾಟಗಳಿಗೆ
ಆರ್ತನಾದಗೈವ ಅಕ್ಷರಗಳಿಲ್ಲ ಈಗ

ನೀಲಾಕಾಶದ ನಿರಭ್ರತೆಯ
ಹೊಟ್ಟೆ ಸೀಳಿ
ಮಿಂಚಿನ ಕಣವೊಂದು ಆಳಕ್ಕೆ
ಗರ್ಭದೊಳಗೆ ಹೊಕ್ಕಿದ್ದೇ ತಡ,
ನೆಲ ಮುಗಿಲನ್ನು
ಮೋಹಿಸುತ್ತಾ ಎದೆತೆರೆದು ಕಣ್ಣರಳಿಸಿತು.
ಈ ದಾರಿಯ ಸೊಬಗಿನಲ್ಲಿ
ಕಣ್ಸೆಳೆಯುವ
ಬಿಸಿಲು-ಬೆಳದಿಂಗಳು, ಹಸಿರು-ಕೆಸರು
ಎಲ್ಲವನ್ನೂ ಇನ್ನಿಲ್ಲದಂತೆ ಪ್ರೀತಿಸುತ್ತಾ,
ಎರಡೂ ತೆಕ್ಕೆಗಳಲ್ಲಿ
ಬರಸೆಳೆದುಕೊಂಡು ಮುದ್ದಿಸುತ್ತಿದ್ದೇನೆ.

ಬಿಚ್ಚು ಮನಸ್ಸಿನಂತೆ
ದೇಹದ ಬಿಚ್ಚು ಕೂಡಾ ಆಪ್ತವಾದಂತೆ
ಅವನೂ ನಾನು ಕ್ಷಣಕ್ಷಣವೂ ಬಿಡದೇ
ಆವರಿಸಿಕೊಳ್ಳುತ್ತಲೇ,
ನೆಲದ ಹಸಿ ಚಿಗುರನ್ನು
ಜಗವೊಪ್ಪುವ ಪದಗಳಿಂದ ಹಿಡಿದು
ಮತ್ತದನ್ನು ಸುರವಿ ಹರವುದನು ಕಲಿತಿದ್ದೇನೆ.

ಆತನ ಕೈಸಂದಿನೊಳಗೆ
ಬೆರಳು ತೂರಿಸಿಕೊಂಡೇ
ದೇಹ ಮೀರಿದ ಪ್ರೇಮದ
ಠೇವಣಿ ಇಟ್ಟಿದ್ದು
ಮೊನ್ನೆ ಮೊನ್ನೆಯಷ್ಟೇ ನಗದಾಗಿದೆ.
ಈಗ ನಾನು ಅವನೂ ಕೂಡಿಯೇ
ಮನೆ ಕಟ್ಟುತ್ತಿದ್ದೇವೆ.
*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...