ನಿನ್ನ ಕಂಡ ಲಾಗಾಯ್ತಿನಿಂದ

ನನ್ನ ಪ್ರೇಮದ ಕಡ ಎಷ್ಟು ದಿನ
ಇಟ್ಟುಕೊಳ್ಳುವಿ ನೀ
ಬಿದಿರಕೋಲಿನ ಸಖನೇ
ನಾಳೆಗಾದರೂ ತೀರಿಸಿಬಿಡು
ಹನಿಮುತ್ತಿದ ಕೆಂದಾವರೆಗಳು
ನನ್ನ ತುಟಿಯಲ್ಲರಳಲಿ.

ಬಿದಿರುಗಣೆ ಉಲಿತ ಸದ್ದಾಗದಂತೆ
ನನ್ನಾತ್ಮವನ್ನೆ ಕಬಳಿಸುತ್ತಿದೆ.
ಯಮುನೆ ತೀರದ ಕುಳಿರ್‍ಗಾಳಿ
ತಣ್ಣಗಿನ ಒಳಕೋಲಾಹಲಕ್ಕೆ ಜೊತೆಯಾಗಿದೆ
ಮನನೆಲದ ಬೇರುಗಳೇ ಉರುಳಾಗಿ
ರಕ್ತದ ಹಾಸು ಗೋರಿಯ ಗುಲಾಬಿ
ನಾ ಹೆಜ್ಜೆ ಇಟ್ಟಲ್ಲೆಲ್ಲಾ ಪವಡಿಸಿವೆ.

ಪ್ರೇಮದಂಟಿನ ಉಂಡೆಯೊಳಗೆ
ಕ್ಷಣಕ್ಷಣಕ್ಕೂ ಕರಗಿಸಿಬಿಡುವ
ಸಕ್ಕರೆಯ ಸವಿಯಂತವನೇ
ನಿನ್ನ ಕಂಡ ಲಾಗಾಯ್ತಿನಿಂದ
ನನ್ನ ಕಣ್ಣುಗಳು ನಿದ್ರಿಸುವದನ್ನೆ ಮರೆತಿವೆ.

ಈ ಲೋಕದೊಳಗಿನ ಎಲ್ಲ ಸದ್ದುಗಳನ್ನು
ಸೆಣಬಿನ ಚೀಲದಲ್ಲಿಟ್ಟು ಬಾಯಿಕಟ್ಟಿ,
ನಿನ್ನುಸಿರಿನ ಜೊತೆ
ಗದ್ದೆಬದಿಯಲ್ಲೊಂದು ಕಳೆ
ಗಿಡವಾಗಿ ಗಡದ್ದಾಗಿ ಉಸಿರಾಡಬೇಕೆನಿಸುತ್ತಿದೆ.

ಕಾಲದ ಗಡಿಯಾರಕ್ಕೆ
ಕತ್ತಿಗಳೇ ಮುಳ್ಳುಗಳಾಗಿ
ಕೆದಕಿ ಕತ್ತರಿಸಿ ಹಾಕುವ ಮುನ್ನ
ಒಮ್ಮೆ ಬಂದುಬಿಡು.
ಬೆಚ್ಚಗಿನ ಬಯಲ ಗಾಳಿಗೆ ಬೀಸಿಬೀಸಿ
ನಾಲ್ಕು ಹೆಜ್ಜೆ ಹಾಕಿಬಿಡುವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೮
Next post ನವಿಲುಗರಿ – ೧

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…