ಸಾವು ಬಂದಾಗ

ಸಾವು ಬಂದಾಗ ನಾನು ನಿನ್ನೊಡನೆ ಇರಲಿಲ್ಲ.
ಮುನಿಸಿಪಲ್ ಆಸ್ಪತ್ರೆ ನೀನಿದ್ದಕೊನೆಯ ಮನೆ :
ಬಿಳಿಯ ಬಣ್ಣದ ರೂಮು, ಮೂಲೆಯಲ್ಲಿ ಜೇಡರಬಲೆ,
ಚಕ್ಕೆ ಎದ್ದ ಗೋಡೆಯ ಬಣ್ಣ, ಉಪ್ಪಿನ ಕಾಯಿ ಬಾಟಲು,
ನಾಲ್ಕು ತಿಂಗಳು ಹಳೆಯ ವಾರಪತ್ರಿಕೆ, ಕಾಫಿ ಗಸಿ ಇದ್ದ ಎರಡು ಲೋಟ.
ಪಕ್ಕದ ಬೆಡ್ಡಿನಲ್ಲಿ ಕ್ಯಾನ್ಸರ್ ಬಂದ ಟೈಲರು.
ನಿನಗೆಷ್ಟು ವಯಸ್ಸೆಂದರೆ
ಸಾವೂ ಲೆಕ್ಕ ಇಡುವುದು ಮರೆತಿದೆ
ಎಂದು ಡಾಕ್ಬರು ಹೇಳುತಿದ್ದರು.
ನಿನಗೆಷ್ಟು ವಯಸ್ಸೆಂದರೆ
ನಿನ್ನ ಬೀದಿಯ ಮಕ್ಕಳು,
ಹಳ್ಳ ಬಿದ್ದ ಫುಟ್ ಪಾತಿನಲ್ಲಿ
ಕುಗ್ಗಿಕುಸಿದು ಬಿದ್ದ ಸಾಮ್ರಾಜ್ಯದ ಹಾಗೆ,
ನೀನು ಕಳೆದ ಶತಮಾನವೆನ್ನುತ್ತಿದ್ದರು.

ಸಾವು ಬಂದಾಗ ನಿನಗೆ ಯೌವನವೂ ಬಂತು :
ಇದ್ದಕ್ಕಿದ್ದಂತೆ ಬಾಲಭಾಷೆಯಲ್ಲಿ ಮಾತನಾಡಿದೆ,
ನಿನಗೂ ಬದುಕಿದ್ದವರಿಗೂ ನಡುವೆ ಇದ್ದ
ಬಿಳಿಯ ತೆರೆ ಗ್ಲೈಡರಿನ ರೆಕ್ಕೆಯಂತಿತ್ತು.
ನಿನ್ನ ನರಕ್ಕೆ ಚುಚ್ಚಿದ್ದ ಗ್ಲೊಕೋಸು ನಳಿಗೆ
ತೊದಲಿತು, ಚೆಜ್ಜಾದ ಮೇಲೆ ಕುಳಿತ ಪಾರಿವಾಳ
ಪತರ ಗುಟ್ಟಿತು. ನಿನ್ನ ಬಗ್ಗೆಯೇ ನೀನೇ
ಮಾತಾಡಿಕೊಳ್ಳುತ್ತಾ ಈ ಬೇಸತ್ತ ಜಾಗದಿಂದ
ಸಾವಿನ ನಾಡಿಗೆ ನಡೆದಿದ್ದೆ : ಹದಿನೆಂಟರ ಹರೆಯದ
ಹುಮ್ಮಸ್ಸಿನ ಯುವಕ, ವಿದ್ಯಾರ್ಥಿಗಳ ತಲೆಹರಟೆ
ಸಹಿಸದ ಮೂವತ್ತರ ಪ್ರಬುದ್ಧ ಜರ್‍ಮನ್ ಮೇಷ್ಟ್ರು,
ದಿನವೂ ಬೆಳಗ್ಗೆ ಒಂಟಿ ವಾಕಿಂಗ್ ಹೋಗುವ
ಪಿಂಚಣಿದಾರ, ನೀನು ಒಟ್ಟು ನಡೆದ ದೂರ ಲೆಕ್ಕ ಇಟ್ಟಿದ್ದರೆ
ಈ ಭೂಮಿಯಿಂದ ಸ್ವರ್‍ಗವನ್ನೆ ತಲುಪುತ್ತಿದ್ದಯೋ ಏನೋ.
ಸಾವನ್ನು ಸ್ವಾಗತಿಸಲು ನಿನ್ನ ನೀನೇ
ಮತ್ತೆಮೊದಲಿಂದ ಹೊಸಬನಾಗಿ ಮಾಡಿಕೊಂಡೆ.
ಹಾಲ್‍ನಲ್ಲಿ ಕಿಸಕ್ಕನೆ ಯಾತಕ್ಕೋ ನಕ್ಕು
ನಗು ಅದುಮಿಟ್ಟುಕೊಂಡ ನರ್ಸುಗಳು.
ಕಿಟಕಿ ಅಂಚಿನಲ್ಲಿ ಅನ್ನದ ಅಗುಳಿಗೆ
ಜಗಳವಾಡುವ ಗುಬ್ಬಚ್ಚಿಗಳು.
*****
ಮೂಲ: ಆಡಂ ಝಗಯೇವ್ಸ್‍ಕಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೋಕಗೀತೆ
Next post ತರಗತಿ ವಿಕೇಂದ್ರೀಕರಣ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…