ಸನ್ಮತಿ

ಇರಲಿ ನಿನ್ನಲಿ ಮಾನವತೆಯ
ರೀತಿ-ನೀತಿಯ ಸನ್ಮತಿ
ಉರಿವ ಧಗೆ ಹಗೆ
ಹೊತ್ತು ಸಾಗಿರೆ ನಿನ್ನುಳಿವಿಗೊದಗದೆ ದುರ್ಗತಿ

ಧುಮ್ಮಿಕ್ಕಿ
ದುಮುಕುತ
ಏರಿಳಿವ ಬಳಸುವಾ ಜಲವು ಸಾಗರ ಸೇರದೆ
ನಡೆವ ಹಾದಿಯತಿಲ್ಲ
ಚಿಗುರಿಸಿ ಹಸಿರ ಬಳಿಯದೆ ತಾನಿರುವುದೆ

ಬರುವುದೆಲ್ಲ ಬರುತಲಿರಲಿ
ನಗುವ ಸೂಸೋ ಮನವು ತಾ ನಿಜ ಬಾಂದಳ
ಅಷ್ಟು-ಇಷ್ಟು ಕಷ್ಟ ಸುಖಗಳ
ಅನುಭವದ ಕೂಟವೆ ನಮ್ಮ ಬದುಕಿನ ಅಂಗಳ

ಇರುಳು ಕವಿಯುವುದೆಂಬ
ಭಯವೇಕೆ ನಿನಗೆ ಹಿಡಿದಿದೆ
ಹಣತೆಯು ತಾ ಬೆಳಗಲು ಇರುತಿರೆ
ಸೊಗಸ ನಾಳೆಯು ಕಾದಿದೆ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀ ಶಿವಾಪರಾಧ ಸ್ತೋತ್ರ
Next post ಬೆಳಕು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…