Home / ಕಥೆ / ಕಿರು ಕಥೆ / ಲಂಚದ ಮನೆ

ಲಂಚದ ಮನೆ

ಆನಂದಪ್ಪ ಆ ಶಹರದ ಹೃದಯಭಾಗದಲ್ಲಿ ಮನೆ ಕಟ್ಟಿಸಲು ಶುರು ಮಾಡಿದ. ಅಲ್ಲಿನದು ಬಹು ಮೌಲ್ಯದ ಬಯಲು ಜಾಗೆ. ಅದು ಅವನಿಗೆ ಬಳುವಳಿಯಾಗಿ ಸಿಕ್ಕಿತ್ತು.

ಆನಂದಪ್ಪ ಒಬ್ಬ ಇಂಜಿನಿಯರ್‍. ಸರಕಾರಿ ಹುದ್ದೆಯಲ್ಲಿದ್ದ. ತಾನು ಕಟ್ಟಿಸುವ ಮನೆ ಭೂಮಿಯ ಮೇಲಿನ ಸ್ವರ್ಗಧಾಮದಂತಿರಬೇಕೆಂದು ಕನಸು ಕಂಡಿದ್ದ. ಅವನ ಕೈ ಕೆಳಗಿನ ನಾಲ್ಕಾರು ಜನ ಇಂಜಿನಿಯರ್‌ಗಳು ಆ ಕನಸಿನ ಸಾಕಾರಕ್ಕಾಗಿ ಸತತವಾಗಿ ಪರಿಶ್ರಮಿಸತೊಡಗಿದ್ದರು.

ಕೆಲವು ಕಂಟ್ರಾಕ್ಟರರು ಆನಂದಪ್ಪ ಹೇಳದಿದ್ದರೂ ಮನೆಯ ಕಟ್ಟಡಕ್ಕೆ ಬೇಕಾಗುವಷ್ಟು ಕಬ್ಬಿಣ, ಸಿಮೆಂಟು, ಕಲ್ಲು, ಉಸುಕು, ಕಿಟಕಿ, ಬಾಗಿಲು ಪೂರೈಸಿದ್ದರು. ಗೌಂಡಿಗಳು ತಮ್ಮ ಶ್ರಮದ ಬೆವರನ್ನು ಕಟ್ಟಡಕ್ಕೆ ಹನಿಸುತ್ತ ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದರು.

ಹಣ ಎಷ್ಟು ಖರ್ಚಾದರೂ ಚಿಂತೆಯಿಲ್ಲ. ಮನೆ ಮಾತ್ರ ಸುಂದರವಾಗಿರಬೇಕೆಂದು ಇಂಜಿನಿಯರ್‍ ಪತ್ನಿ ಪದೆ ಪದೆ ಹೇಳುತ್ತಿದ್ದಳು. ಅವಳ ಮನಸ್ಸಿಗೆ ಬೇಸರವೆನಿಸಿದರೆ ಕಟ್ಟಡವನ್ನು ಕೆಡವಿ ಹಾಕಲಾಗುತ್ತಿತ್ತು. ಇಂಜಿನಿಯರಿಂದ ಶುಕ್ರದೆಸೆ ಅನುಭವಿಸಿದ್ದ ಕಾಂಟ್ರಾಕ್ಟರರು ಒಂದು ಚಕಾರ ಶಬ್ದ ಆಡದೇ ಅವಳ ನಿರ್ದೇಶನಗಳನ್ನು ಪಾಲಿಸುತ್ತಿದ್ದರು.

ಕೊನಗೂ ಮನೆ ತಯಾರಾಯಿತು. ಎಂಥ ಅಪರೂಪದ ಮನೆ ಅದು!

ಒಳ-ಹೊರ ಗೋಡೆಗಳಿಗೆ ಸಂಗಮವರಿ ಕಲ್ಲುಗಳನ್ನು ಹೊರಿಸಲಾಗಿತ್ತು. ನೆಲದ ಹಾಸುಗಲ್ಲುಗಳಲ್ಲಿ ನಡೆದಾಡುವವರ ಪ್ರತಿಬಿಂಬ ಕಾಣಿಸುತ್ತಿತು. ತೇಗ-ಗಂಧದ ಕಿಟಕಿ, ಬಾಗಿಲುಗಳು ಹೊಸ ವಿನ್ಯಾಸದೊಂದಿಗೆ ಮನಮೋಹಕವಾಗಿದ್ದವು. ಮನೆ ನೋಡಿದವರೆಲ್ಲ ಬೆರಗುಗೊಂಡು ಅದ್ಭುತ! ಎಂದು ಬಣ್ಣಿಸುವರು.

ಅಂತೂ ಆ ಮನೆ ಗೃಹ ಪ್ರವೇಶಕ್ಕೆ ಸಿದ್ಧಗೊಂಡಿತು.

ಇಂಜಿನಿಯರ್‍ ಪತ್ನಿ ಮೂಹೂರ್ತ ಗೊತ್ತುಪಡಿಸಲು ಕಾರು ಹತ್ತಿ ಜೋಯಿಸರ ಮನೆಗೆ ಹೋದಳು. ತಿರುಗಿ ಬರುವಾಗ ರಸ್ತೆಯ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಳು. ಹೆಂಡತಿಯ ಸಾವಿನ ಸುದ್ದಿ ಕೇಳಿದ್ದೆ ತಡ ಇಂಜಿನಿಯರ್‍ ಸಾಹೇಬರು ಹಠಾತ್ತನೆ ಹೃದಯಾಘಾತಕ್ಕೆ ಕುಸಿದು ಬಿದ್ದರು.

ಆ ಚೆಂದದ ಮನೆಯಲ್ಲಿ ಬದುಕುವ ತೀವ್ರ ತುಡಿತವಿದ್ದ ಗಂಡ-ಹೆಂಡತಿ ತಣ್ಣಗೆ ಸ್ಮಶಾನದ ಮಣ್ಣಲ್ಲಿ ಮಲಗಿದರು. ಮನೆಯನ್ನು ಹೊಗಳಿದ ಜನರೆ “ಇದು ಗೃಹದೋಷದ ಪ್ರಭಾವ!” ಎಂದರು.

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...