Home / ಕಥೆ / ಕಿರು ಕಥೆ / ಲಂಚದ ಮನೆ

ಲಂಚದ ಮನೆ

ಆನಂದಪ್ಪ ಆ ಶಹರದ ಹೃದಯಭಾಗದಲ್ಲಿ ಮನೆ ಕಟ್ಟಿಸಲು ಶುರು ಮಾಡಿದ. ಅಲ್ಲಿನದು ಬಹು ಮೌಲ್ಯದ ಬಯಲು ಜಾಗೆ. ಅದು ಅವನಿಗೆ ಬಳುವಳಿಯಾಗಿ ಸಿಕ್ಕಿತ್ತು.

ಆನಂದಪ್ಪ ಒಬ್ಬ ಇಂಜಿನಿಯರ್‍. ಸರಕಾರಿ ಹುದ್ದೆಯಲ್ಲಿದ್ದ. ತಾನು ಕಟ್ಟಿಸುವ ಮನೆ ಭೂಮಿಯ ಮೇಲಿನ ಸ್ವರ್ಗಧಾಮದಂತಿರಬೇಕೆಂದು ಕನಸು ಕಂಡಿದ್ದ. ಅವನ ಕೈ ಕೆಳಗಿನ ನಾಲ್ಕಾರು ಜನ ಇಂಜಿನಿಯರ್‌ಗಳು ಆ ಕನಸಿನ ಸಾಕಾರಕ್ಕಾಗಿ ಸತತವಾಗಿ ಪರಿಶ್ರಮಿಸತೊಡಗಿದ್ದರು.

ಕೆಲವು ಕಂಟ್ರಾಕ್ಟರರು ಆನಂದಪ್ಪ ಹೇಳದಿದ್ದರೂ ಮನೆಯ ಕಟ್ಟಡಕ್ಕೆ ಬೇಕಾಗುವಷ್ಟು ಕಬ್ಬಿಣ, ಸಿಮೆಂಟು, ಕಲ್ಲು, ಉಸುಕು, ಕಿಟಕಿ, ಬಾಗಿಲು ಪೂರೈಸಿದ್ದರು. ಗೌಂಡಿಗಳು ತಮ್ಮ ಶ್ರಮದ ಬೆವರನ್ನು ಕಟ್ಟಡಕ್ಕೆ ಹನಿಸುತ್ತ ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದರು.

ಹಣ ಎಷ್ಟು ಖರ್ಚಾದರೂ ಚಿಂತೆಯಿಲ್ಲ. ಮನೆ ಮಾತ್ರ ಸುಂದರವಾಗಿರಬೇಕೆಂದು ಇಂಜಿನಿಯರ್‍ ಪತ್ನಿ ಪದೆ ಪದೆ ಹೇಳುತ್ತಿದ್ದಳು. ಅವಳ ಮನಸ್ಸಿಗೆ ಬೇಸರವೆನಿಸಿದರೆ ಕಟ್ಟಡವನ್ನು ಕೆಡವಿ ಹಾಕಲಾಗುತ್ತಿತ್ತು. ಇಂಜಿನಿಯರಿಂದ ಶುಕ್ರದೆಸೆ ಅನುಭವಿಸಿದ್ದ ಕಾಂಟ್ರಾಕ್ಟರರು ಒಂದು ಚಕಾರ ಶಬ್ದ ಆಡದೇ ಅವಳ ನಿರ್ದೇಶನಗಳನ್ನು ಪಾಲಿಸುತ್ತಿದ್ದರು.

ಕೊನಗೂ ಮನೆ ತಯಾರಾಯಿತು. ಎಂಥ ಅಪರೂಪದ ಮನೆ ಅದು!

ಒಳ-ಹೊರ ಗೋಡೆಗಳಿಗೆ ಸಂಗಮವರಿ ಕಲ್ಲುಗಳನ್ನು ಹೊರಿಸಲಾಗಿತ್ತು. ನೆಲದ ಹಾಸುಗಲ್ಲುಗಳಲ್ಲಿ ನಡೆದಾಡುವವರ ಪ್ರತಿಬಿಂಬ ಕಾಣಿಸುತ್ತಿತು. ತೇಗ-ಗಂಧದ ಕಿಟಕಿ, ಬಾಗಿಲುಗಳು ಹೊಸ ವಿನ್ಯಾಸದೊಂದಿಗೆ ಮನಮೋಹಕವಾಗಿದ್ದವು. ಮನೆ ನೋಡಿದವರೆಲ್ಲ ಬೆರಗುಗೊಂಡು ಅದ್ಭುತ! ಎಂದು ಬಣ್ಣಿಸುವರು.

ಅಂತೂ ಆ ಮನೆ ಗೃಹ ಪ್ರವೇಶಕ್ಕೆ ಸಿದ್ಧಗೊಂಡಿತು.

ಇಂಜಿನಿಯರ್‍ ಪತ್ನಿ ಮೂಹೂರ್ತ ಗೊತ್ತುಪಡಿಸಲು ಕಾರು ಹತ್ತಿ ಜೋಯಿಸರ ಮನೆಗೆ ಹೋದಳು. ತಿರುಗಿ ಬರುವಾಗ ರಸ್ತೆಯ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಳು. ಹೆಂಡತಿಯ ಸಾವಿನ ಸುದ್ದಿ ಕೇಳಿದ್ದೆ ತಡ ಇಂಜಿನಿಯರ್‍ ಸಾಹೇಬರು ಹಠಾತ್ತನೆ ಹೃದಯಾಘಾತಕ್ಕೆ ಕುಸಿದು ಬಿದ್ದರು.

ಆ ಚೆಂದದ ಮನೆಯಲ್ಲಿ ಬದುಕುವ ತೀವ್ರ ತುಡಿತವಿದ್ದ ಗಂಡ-ಹೆಂಡತಿ ತಣ್ಣಗೆ ಸ್ಮಶಾನದ ಮಣ್ಣಲ್ಲಿ ಮಲಗಿದರು. ಮನೆಯನ್ನು ಹೊಗಳಿದ ಜನರೆ “ಇದು ಗೃಹದೋಷದ ಪ್ರಭಾವ!” ಎಂದರು.

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...