ಪ್ರಕೃತಿ ಮತ್ತು ವಿಮರ್ಶಕ

ಸಾಹಿತ್ಯ ಲೋಕದಲ್ಲಿ ಆ ವಿಮರ್ಶಕನಿಗೆ ದೊಡ್ಡ ಗೌರವವಿತ್ತು. ಪೌರ್ವಾತ್ಯ, ಪಾಶ್ಚಿಮಾತ್ಯ ಲೇಖಕರ ಕೃತಿಗಳನ್ನು ಆಳವಾಗಿ ಓದಿಕೊಂಡಿದ್ದ ಅವನನ್ನು ವಿಮರ್ಶೆಯಲ್ಲಿ ಮೀರಿಸುವವರೇ ಇರಲಿಲ್ಲ. ಒಮದು ಕೃತಿ ಬಿಡುಗಡೆಯಾಗಿ ಕೈಸೇರುತ್ತಲೆ ಅದರ ಜನ್ಮ ಜಾಲಾಡುವ, ಅದಕ್ಕೊಂದು ಸ್ಥಾನ ಕಲ್ಪಿಸುವ ಪ್ರಗಲ್ಭ ಪಾಂಡಿತ್ಯ ಅವನದು. ಗಣ್ಯಾತಿಗಣ್ಯ ಲೇಖಕರು ಅವನ ವಿಮರ್ಶೆಗಾಗಿ ಕಾತರಿಸುತ್ತಿದ್ದರು.

ಪ್ರಪಂಚದ ಮಹಾ ಕಾವ್ಯಗಳನ್ನು ಮಹಾಲೇಖಕರ ಕೃತಿಗಳನ್ನು ತನ್ನದೇ ಆದ ದೃಷ್ಟಿಕೋನದಿಂದ ಪರಾಮರಿಸುವ, ಸಮರ್ಥಿಸುವ, ಮೌಲಿಕಗೊಳಿಸುವ ಸಾತತ್ಯದಿಂದಾಗಿ ವಿಮರ್ಶಕನಿಗೆ ಪ್ರಶಸ್ತಿ ಪ್ರಸಿದ್ಧಿ ಪ್ರಾಪ್ತವಾಗಿದ್ದವು. ಹೀಗೆ ಒಂದು ನೆಲೆಯಲ್ಲಿ ಗಟ್ಟಿಗೊಂಡ ಮೇಲೆ ವಿಮರ್ಶಕನ ನಿಸ್ಪೃಹತೆ ಅಳ್ಳಕಾಗುತ್ತ ಬಂತು. ಒಂದು ವರ್ಗದ ಸಿದ್ಧಾಂತಗಳನ್ನು ತನ್ನ ವಿಮರ್ಶೆಯ ಮಾನದಂಡವನ್ನಾಗಿಸಿಕೊಂಡ ಅವನು ತನ್ನವರ ಕೃತಿಗಳ ಬಗ್ಗೆ ಹಿತಾಸಕ್ತಿಯನ್ನು ಇತರರ ಕೃತಿಗಳ ಬಗ್ಗೆ ಅಸಹನೆಯನ್ನು ರೂಢಿಸಿಕೊಂಡು ವಿಮರ್ಶಾಕ್ಷೇತ್ರವನ್ನು ರೋಗಗ್ರಸ್ತಗೊಳಿಸಿದ. ಮತ್ತೊಂದು ವರ್ಗದ ಲೇಖಕರ ಸಾಮರ್ಥ್ಯವನ್ನು ಅದ್ಭುತ ಪ್ರತಿಭೆಯನ್ನು ಅಸ್ಥಿರಗೊಳಿಸುವ ಅವನ ದೋಷ ಪ್ರಜ್ಞಾಪೂರ್ವಕವಾಗಿಯೇ ಇರುತ್ತಿತ್ತು. ಕೆಲವರು ಅವನ ಪೂರ್ವಾಗ್ರಹ ಪೀಡಿತ ವಿಮರ್ಶೆಯನ್ನು ಭಯೋತ್ಪಾದಕತೆಗೆ ಹೋಲಿಸುತ್ತಿದ್ದುದು ಸಹಜವೇ ಆಗಿತ್ತು.

ವಿದ್ವತ್ತಿನ ಅಹಮಿಕೆಯಲ್ಲಿ ಸ್ವಜನ ಪ್ರಕ್ಷಪಾತದ ಕಬಂಧಬಾಹುವಿನಲ್ಲಿ ಬಂಧಿಯಾದ ಅವನ ಸೂಕ್ಷ್ಮ ನೋಟ ಒಂದಿನ ಇದ್ದಕ್ಕಿದ್ದಂತೆ ಪ್ರಕೃತಿಯ ಮೇಲೆ ಹರಿದಾಡಿತ್ತು. ಸಮತಳವಿಲ್ಲದ ಭೂಮಿ ಕುರೂಪ, ಬೆಟ್ಟ ಗುಡ್ಡಗಳು, ಸತ್ತ ಹೆಣ, ಮರಗಳು ಡೊಂಕು, ನದಿಗಳದು ತರಾವರಿ ಪಾತ್ರ, ಸಮುದ್ರ ಅಪಾಯಕಾರಿ, ಉರಿಯುವ ಸೂರ್ಯ ನಿಷ್ಕರುಣಿ, ಚಂದ್ರ ಕಳಂಕಿತ… ಹೀಗೆ ಸಾಗಿತ್ತು ಅವನ ಸಮೀಕ್ಷೆ.

“ವಿಮರ್ಶಕ ಮಹಾಶಯರೇ” ಕೂಗಿ ಕರೆಯಿತು ಪ್ರಕೃತಿ.

“ಓ! ಪ್ರಕೃತಿ, ನನ್ನ ವಿಮರ್ಶೆಯಿಂದ ಬೇಸರವಾಯಿತೇ?” ಕೇಳಿದ ವಿಮರ್ಶಕ.

“ಹಾಗೇನಿಲ್ಲ. ಆದರೆ ನಿಮ್ಮ ವಿಮರ್ಶೆ ಸಹಜವಾಗಿಲ್ಲ”

“ನಾನು ಸೂಕ್ಷ್ಮಜ್ಞ ನನ್ನ ವಿಮರ್ಶೆ ಸಮರ್ಥವಾಗಿದೆ”

“ನಿಮ್ಮ ಬುದ್ಧಿಗೆ ಹೊಳೆದಷ್ಟನ್ನೇ ಹೇಳುತ್ತಿದ್ದೀರಿ”

“ಆ ಬುದ್ಧಿಯಲ್ಲಿ ಪ್ರತಿಸೃಷ್ಟಿ ಇರುವದು ವಾಸ್ತವ”

“ಸೃಷ್ಟಿಸುವುದು ಗೊತ್ತಿಲ್ಲದವರಿಗೆ ಪ್ರತಿಸೃಷ್ಟಿ ಹೇಗೆ ಸಾಧ್ಯ?”

“ಅದು ನನಗೆ ದಕ್ಕಿದ ಅಸಾಮಾನ್ಯ ಸಾಮರ್ಥ್ಯ!”

ಪ್ರಕೃತಿ ಹೇಳಿತು:
“ಹಾಗಾದರೆ ಮೋಡಗಳಿಂದ ಮಳೆ ಸುರಿಸುವುದು, ಆಕಾಶದಲ್ಲಿ ಸೂರ್ಯ ಚಂದ್ರರನ್ನು ಬೆಳಗಿಸುವುದು, ಭೂಮಿಯಲ್ಲಿ ಬೀಜ ಸೃಷ್ಟಿಸುವುದು, ಅದನ್ನು ಕೊನರಿಸಿ ಮರವಾಗಿಸುವುದು, ಹೂವಾಗಿಸುವುದು, ಕಾಯಾಗಿಸುವುದು, ಫಲವಾಗಿಸುವುದು ನಿಮ್ಮ ಸಾಮರ್ಥ್ಯದಿಂದ ಸಾಧ್ಯವೇ?”

ವಿಮರ್ಶಕ ಉತ್ತರಕ್ಕಾಗಿ ತಡಕಾಡಿದ.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಕು – ಬೇಡ
Next post ಶ್ರೀ ದೇವಿ ದಂಡಕ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…