Home / ಕಥೆ / ಕಿರು ಕಥೆ / ಪ್ರಕೃತಿ ಮತ್ತು ವಿಮರ್ಶಕ

ಪ್ರಕೃತಿ ಮತ್ತು ವಿಮರ್ಶಕ

ಸಾಹಿತ್ಯ ಲೋಕದಲ್ಲಿ ಆ ವಿಮರ್ಶಕನಿಗೆ ದೊಡ್ಡ ಗೌರವವಿತ್ತು. ಪೌರ್ವಾತ್ಯ, ಪಾಶ್ಚಿಮಾತ್ಯ ಲೇಖಕರ ಕೃತಿಗಳನ್ನು ಆಳವಾಗಿ ಓದಿಕೊಂಡಿದ್ದ ಅವನನ್ನು ವಿಮರ್ಶೆಯಲ್ಲಿ ಮೀರಿಸುವವರೇ ಇರಲಿಲ್ಲ. ಒಮದು ಕೃತಿ ಬಿಡುಗಡೆಯಾಗಿ ಕೈಸೇರುತ್ತಲೆ ಅದರ ಜನ್ಮ ಜಾಲಾಡುವ, ಅದಕ್ಕೊಂದು ಸ್ಥಾನ ಕಲ್ಪಿಸುವ ಪ್ರಗಲ್ಭ ಪಾಂಡಿತ್ಯ ಅವನದು. ಗಣ್ಯಾತಿಗಣ್ಯ ಲೇಖಕರು ಅವನ ವಿಮರ್ಶೆಗಾಗಿ ಕಾತರಿಸುತ್ತಿದ್ದರು.

ಪ್ರಪಂಚದ ಮಹಾ ಕಾವ್ಯಗಳನ್ನು ಮಹಾಲೇಖಕರ ಕೃತಿಗಳನ್ನು ತನ್ನದೇ ಆದ ದೃಷ್ಟಿಕೋನದಿಂದ ಪರಾಮರಿಸುವ, ಸಮರ್ಥಿಸುವ, ಮೌಲಿಕಗೊಳಿಸುವ ಸಾತತ್ಯದಿಂದಾಗಿ ವಿಮರ್ಶಕನಿಗೆ ಪ್ರಶಸ್ತಿ ಪ್ರಸಿದ್ಧಿ ಪ್ರಾಪ್ತವಾಗಿದ್ದವು. ಹೀಗೆ ಒಂದು ನೆಲೆಯಲ್ಲಿ ಗಟ್ಟಿಗೊಂಡ ಮೇಲೆ ವಿಮರ್ಶಕನ ನಿಸ್ಪೃಹತೆ ಅಳ್ಳಕಾಗುತ್ತ ಬಂತು. ಒಂದು ವರ್ಗದ ಸಿದ್ಧಾಂತಗಳನ್ನು ತನ್ನ ವಿಮರ್ಶೆಯ ಮಾನದಂಡವನ್ನಾಗಿಸಿಕೊಂಡ ಅವನು ತನ್ನವರ ಕೃತಿಗಳ ಬಗ್ಗೆ ಹಿತಾಸಕ್ತಿಯನ್ನು ಇತರರ ಕೃತಿಗಳ ಬಗ್ಗೆ ಅಸಹನೆಯನ್ನು ರೂಢಿಸಿಕೊಂಡು ವಿಮರ್ಶಾಕ್ಷೇತ್ರವನ್ನು ರೋಗಗ್ರಸ್ತಗೊಳಿಸಿದ. ಮತ್ತೊಂದು ವರ್ಗದ ಲೇಖಕರ ಸಾಮರ್ಥ್ಯವನ್ನು ಅದ್ಭುತ ಪ್ರತಿಭೆಯನ್ನು ಅಸ್ಥಿರಗೊಳಿಸುವ ಅವನ ದೋಷ ಪ್ರಜ್ಞಾಪೂರ್ವಕವಾಗಿಯೇ ಇರುತ್ತಿತ್ತು. ಕೆಲವರು ಅವನ ಪೂರ್ವಾಗ್ರಹ ಪೀಡಿತ ವಿಮರ್ಶೆಯನ್ನು ಭಯೋತ್ಪಾದಕತೆಗೆ ಹೋಲಿಸುತ್ತಿದ್ದುದು ಸಹಜವೇ ಆಗಿತ್ತು.

ವಿದ್ವತ್ತಿನ ಅಹಮಿಕೆಯಲ್ಲಿ ಸ್ವಜನ ಪ್ರಕ್ಷಪಾತದ ಕಬಂಧಬಾಹುವಿನಲ್ಲಿ ಬಂಧಿಯಾದ ಅವನ ಸೂಕ್ಷ್ಮ ನೋಟ ಒಂದಿನ ಇದ್ದಕ್ಕಿದ್ದಂತೆ ಪ್ರಕೃತಿಯ ಮೇಲೆ ಹರಿದಾಡಿತ್ತು. ಸಮತಳವಿಲ್ಲದ ಭೂಮಿ ಕುರೂಪ, ಬೆಟ್ಟ ಗುಡ್ಡಗಳು, ಸತ್ತ ಹೆಣ, ಮರಗಳು ಡೊಂಕು, ನದಿಗಳದು ತರಾವರಿ ಪಾತ್ರ, ಸಮುದ್ರ ಅಪಾಯಕಾರಿ, ಉರಿಯುವ ಸೂರ್ಯ ನಿಷ್ಕರುಣಿ, ಚಂದ್ರ ಕಳಂಕಿತ… ಹೀಗೆ ಸಾಗಿತ್ತು ಅವನ ಸಮೀಕ್ಷೆ.

“ವಿಮರ್ಶಕ ಮಹಾಶಯರೇ” ಕೂಗಿ ಕರೆಯಿತು ಪ್ರಕೃತಿ.

“ಓ! ಪ್ರಕೃತಿ, ನನ್ನ ವಿಮರ್ಶೆಯಿಂದ ಬೇಸರವಾಯಿತೇ?” ಕೇಳಿದ ವಿಮರ್ಶಕ.

“ಹಾಗೇನಿಲ್ಲ. ಆದರೆ ನಿಮ್ಮ ವಿಮರ್ಶೆ ಸಹಜವಾಗಿಲ್ಲ”

“ನಾನು ಸೂಕ್ಷ್ಮಜ್ಞ ನನ್ನ ವಿಮರ್ಶೆ ಸಮರ್ಥವಾಗಿದೆ”

“ನಿಮ್ಮ ಬುದ್ಧಿಗೆ ಹೊಳೆದಷ್ಟನ್ನೇ ಹೇಳುತ್ತಿದ್ದೀರಿ”

“ಆ ಬುದ್ಧಿಯಲ್ಲಿ ಪ್ರತಿಸೃಷ್ಟಿ ಇರುವದು ವಾಸ್ತವ”

“ಸೃಷ್ಟಿಸುವುದು ಗೊತ್ತಿಲ್ಲದವರಿಗೆ ಪ್ರತಿಸೃಷ್ಟಿ ಹೇಗೆ ಸಾಧ್ಯ?”

“ಅದು ನನಗೆ ದಕ್ಕಿದ ಅಸಾಮಾನ್ಯ ಸಾಮರ್ಥ್ಯ!”

ಪ್ರಕೃತಿ ಹೇಳಿತು:
“ಹಾಗಾದರೆ ಮೋಡಗಳಿಂದ ಮಳೆ ಸುರಿಸುವುದು, ಆಕಾಶದಲ್ಲಿ ಸೂರ್ಯ ಚಂದ್ರರನ್ನು ಬೆಳಗಿಸುವುದು, ಭೂಮಿಯಲ್ಲಿ ಬೀಜ ಸೃಷ್ಟಿಸುವುದು, ಅದನ್ನು ಕೊನರಿಸಿ ಮರವಾಗಿಸುವುದು, ಹೂವಾಗಿಸುವುದು, ಕಾಯಾಗಿಸುವುದು, ಫಲವಾಗಿಸುವುದು ನಿಮ್ಮ ಸಾಮರ್ಥ್ಯದಿಂದ ಸಾಧ್ಯವೇ?”

ವಿಮರ್ಶಕ ಉತ್ತರಕ್ಕಾಗಿ ತಡಕಾಡಿದ.

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...