Home / ಕಥೆ / ಕಿರು ಕಥೆ / ಬಸವನ ಹುಳುವಿಗೆ ಗರಿ

ಬಸವನ ಹುಳುವಿಗೆ ಗರಿ

ಸಂಕುಚಿತ ಪ್ರವೃತ್ತಿಯ ಶಿಕ್ಷಕ ಅವನು. ಮಕ್ಕಳಿಗೆ ಪಾಠ ಬೋಧಿಸುವಾಗ ಮನುಷ್ಯನ ಸಣ್ಣತನವನ್ನು ಖಂಡಿಸುತ್ತಿದ್ದ. ವೈಶಾಲ್ಯತೆ ದಕ್ಕಿಸಿಕೊಳ್ಳಲು ಸಾಕ್ಷಿಪ್ರಜ್ಞೆಯಾಗುತ್ತಿದ್ದ. ಸಂದರ್ಭ ಸಿಕ್ಕಾಗೆಲ್ಲ ಪಾಠದ ಆಶಯವನ್ನು ವಿರೂಪಗೊಳಿಸಿ ವಿಷಂತರದಿಂದ ಕೆಳಸ್ತರದ ವಿದ್ಯಾರ್ಥಿಗಳನ್ನು ದಮನಿಸುವ ಮತ್ತು ಮೇಲುಸ್ತರದವರನ್ನು ವೈಭವೀಕರಿಸುವದರೊಂದಿಗೆ ಸ್ವಜನಪಕ್ಷಪಾತದಿಂದ ಹಾಲುಮನಸ್ಸಿನ ಮಕ್ಕಳ ನಡುವೆ ಗೋಡೆ ಎಬ್ಬಿಸುತ್ತಿದ್ದ. ನಿಂತ ನೀರಿನಂತಿದ್ದ ಅವನಿಗೆ ತನ್ನ ಕುಲಸ್ಥರೆಂದರೆ ಉತ್ಕಟ ಅಭಿಮಾನ, ಪ್ರೀತಿ, ತಮ್ಮ ಮೇಧಾವಿತನ ಹುಟ್ಟಿನಿಂದಲೇ ಬಂದದ್ದು. ತಮ್ಮ ಚತುರಮತಿಯಿಂದಲೇ ಈ ಭೂಮಿ ಉಸಿರಾಡುವುದೆಂದು ಅವರು ಮತ್ತೆ ಮತ್ತೆ ಮಾತಾಡಿ ಸಮರ್ಥಿಸಿಕೊಳ್ಳುವನು.

ದಲಿತ ಹುಡುಗನೊಬ್ಬ ತನ್ನ ಅಗಾಧ ಪ್ರತಿಭೆಯಿಂದ ಅವರ ಕಣ್ಣು ಕುಕ್ಕಿದ್ದ. ಶಿಕ್ಷಕ ತೀವ್ರ ತಳಮಳ ಅನುಭವಿಸುತ್ತಿದ್ದ. ಆ ಹುಡುಗ ಕಳೆದ ಜನ್ಮದಲ್ಲಿ ತಮ್ಮ ಕುಲಸ್ಥನೆ ಆಗಿರಬೇಕು ಅಥವಾ ಹುಟ್ಟುವಾಗ ಅಕಸ್ಮಿಕವಾಗಿ ಏರು ಪೇರಾಗಿರಬಹುದು ಎಂಬ ಅನುಮಾನದಿಂದ ಅವನನ್ನು ಗಮನಿಸುತ್ತಿದ್ದ. ಅವನು ತನ್ನನ್ನು ಕೀಳರಮೆಯಿಂದ ಕಾಣುತ್ತಿರುವ ಸೂಕ್ಷ್ಮವನ್ನು ಬದಿಗಿಟ್ಟು ಗುರು ಎಂಬ ಪೂಜ್ಯ ಭಾವನೆಯನ್ನು ಅಭಿವ್ಯಕ್ತಪಡಿಸುತ್ತಿದ್ದ ಹುಡುಗ ಗೌರವದಿಂದ ನಮಸ್ಕರಿಸುತ್ತಿದ್ದ.

ಹುಡುಗನಿಗೆ ಊರ್ಧ್ವಮುಖಿಯ ತುಡಿತ. ಅದರ ಫಲವಂತಿಕೆಗಾಗಿ ಹಗಲಿರುಳು ಶ್ರಮಿಸುವನು. ಆದರೆ ಶಿಕ್ಷಕನ ಕ್ಷುದ್ರ ಮನಸ್ಸು ಪ್ರತಿಯೊಂದು ಪರೀಕ್ಷಗಳಲ್ಲಿ ಹುಡುಗನ ಪ್ರತಿಭೆಗೆ ಕಾಲ್ತೊಡಕಾಗುತ್ತಲೆ ಇತ್ತು. “ನೀನು ನೆಲದ ಮೇಲೆ ತೆವಳುವ ಬಸವನ ಹುಳದಂತೆ ಹುಡುಗ, ನಿನಗೆ ಗರಿಗಳು ಮೂಡುವುದಿಲ್ಲ ಆಕಾಶದಲ್ಲಿ ಹಾರಾಡುವ ಕನಸು ಕಾಣಬೇಡ” ಎಂದು ಪದೆಪದೇ ಅವನನ್ನು ಅವಮಾನಿಸುವನು.

ಕೊನೆಗೂ ಆ ಶಿಕ್ಷಕನ ನೀಚ ಪರಿಧಿಯಿಂದ ಹುಡುಗ ಪಾರಾದ. ಶಿಕ್ಷಕನೂ ಆ ಹುಡುಗನನ್ನು ಮರೆತ. ಆ ಶಿಕ್ಷಕ ಮಾತುಗಳನ್ನು ಸವಾಲಾಗಿ ಸ್ವೀಕರಿಸಿದ ಹುಡುಗ ಕಷ್ಟಪಟ್ಟು ಓದಿದ. ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾದ. ಅಷ್ಟು ಹೊತ್ತಿಗೆ ಆ ಶಿಕ್ಷಕ ಬೇರೊಂದು ಶಾಲೆಯ ಮುಖ್ಯಾಧ್ಯಾಪಕನಾಗಿ ನಿವೃತ್ತಿಯ ಅಂಚು ತಲುಪಿದ್ದ.

ಸಾಹೇಬರು ಅಚಾನಕ್ಕಾಗಿ ಶಾಲೆಗೆ ಭೇಟಿಕೊಟ್ಟರು. ಅಲ್ಲಿನ ಅಸ್ತವ್ಯಸ್ತ ಪರಿಸರವನ್ನು, ಹುಡುಗರ ಅಶಿಸ್ತನ್ನು, ತರಗತಿಗಳ ದುರ್ಭಾಗ್ಯವನ್ನು, ಶಿಕ್ಷಕರ ಭಂಡತನವನ್ನು ಗಮನಿಸಿ ಮುಖ್ಯಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡರು. ಅವರು ಸಾಹೇಬರೆದುರಿಗೆ ಕೈ ಮುಗಿದುಕೊಂಡು ನಿಂತಿದ್ದರು. “ನೀವು ನನಗೆ ಕಲಿಸಿದ ಗುರುಳು. ನನಗೆ ಕೈ ಮುಗಿಯಬಾರದು” ಎಂದು ಅವರನ್ನು ಕುರ್ಚಿಯ ಮೇಲೆ ಕುಳ್ಳಿರಿಸಿ ತಮ್ಮ ಪರಿಚಯ ಮಾಡಿಕೊಟ್ಟಿದ್ದರು ಸಾಹೇಬರು.

ಅವರನ್ನು ದಿಟ್ಟಿಸಿ ನೋಡುತ್ತಿದ್ದಂತೆ ಶಿಕ್ಷಕನಿಗೆ ಹಸಿಹಸಿ ನೆನಪು. ಅವನ ಪ್ರತಿಭೆಯನ್ನು ಕುಗ್ಗಿಸುತ್ತಿದ್ದರ ನೆನಪು. “ನಿಮಗೆ ಋಣಿಯಾಗಿರುವೆ ಗುರುಗಳೆ. ನಿಮ್ಮ ಪುಣ್ಯದಿಂದ ಈ ಬಸವನ ಹುಳುವಿಗೆ ಗರಿ ಮೂಡಿದವು” ಎಂದರು ಸಾಹೇಬರು. ಶಿಕ್ಷಕನ ತಲೆ ತಗ್ಗಿತು.

*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...