Home / ಕಥೆ / ಕಿರು ಕಥೆ / ಒಡಕು ಹುಟ್ಟಿಸಿ ರಾಜ್ಯವಾಳು

ಒಡಕು ಹುಟ್ಟಿಸಿ ರಾಜ್ಯವಾಳು

ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವಿರಾರು ಮಕ್ಕಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಹರಸಾಹಸವೆನಿಸಿ ಮೇಡಂನ ಮೂಡು ತರಾವರಿಗೊಳ್ಳುತ್ತಿತ್ತು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಲೇಜನ್ನು ವ್ಯವಸ್ಥಿತವಾಗಿ ಮಾದರಿಯಾಗಿಸುವ ಧಾವಂತ ತೀವ್ರವಾಗಿದ್ದರೂ ಆಡಳಿತದ ಗಂಧಗಾಳಿಯ ಕೊರತೆಯಿಂದಾಗಿ ಮೇಡಂನ ಉದ್ದೇಶಗಳು ಬೇರುಗಳಿಲ್ಲದೆ ತತ್ತರಿಸತೊಡಗಿದ್ದವು. ಇದರಿಂದಾಗಿ ತಲೆ ತುಂಬ ನೋವು, ರಕ್ತದೊತ್ತಡ ಏರಿಳಿಯುತ್ತ ಜೀವನದ ಸೊಗಸನ್ನೇ ನುಂಗಿಹಾಕಿತ್ತು.

ಅಧ್ಯಾಪಕರಿಗೊ ಕಲಿಸುವ ಆಸಕ್ತಿಗಿಂತ ಸ್ವಹಿತ ಸಾಧಿಸಿಕೊಳ್ಳುವ ತವಕ. ಅದಕ್ಕಾಗಿ ಮೇಡಂನ ವಿಶ್ವಾಸಗಳಿಸಿಕೊಳ್ಳುವ ಹುನ್ನಾರು. ಮೇಡಂ ಒಬ್ಬರೇ ಕುಳಿತಿರುವುದನ್ನು ನೋಡಿಕೊಂಡು ಅವರ ಚೇಂಬರಿಗೆ ಲಗ್ಗೆ ಇಡುತ್ತಿದ್ದ ಪ್ರತಿಯೊಬ್ಬರೂ ಅತೀ ವಿನಯ ಪ್ರದರ್ಶಿಸಿ ಒಬ್ಬರ ಮೇಲೆ ಇನ್ನೊಬ್ಬರು ಚಾಡಿ ಹೇಳುವ, ತಮ್ಮ ಬೇಳೆ ಬೇಯಿಸಿಕೊಳ್ಳುವ ಸಮಯಸಾದಕತನದಿಂದ ಮೇಡಂ ದಿಕ್ಕೆಟ್ಟು ಹೋಗುತ್ತಿದ್ದರು.

ಚಾಡಿಕೋರರ ಕೈಗೊಂಬೆಯಾದವರಂಥೆ ಮೇಡಂ ಇನ್ನುಳಿದವರ ಮೇಲೆ ಹಾರಾಡುತ್ತಿದ್ದರು. ಅವರೂ ಪ್ರತ್ಯುತ್ತರ ನೀಡಿ ಮೇಡಂನ ರಕ್ತ ಕುದಿಸುತ್ತಿದ್ದರು.

ಒಂದಿನ ಕೆ.ಸಿ.ಎಸ್.ಆರ್‍. ರೂಲ್ಸ್ ಜಡಿದು ಮೆಮೊ ಕೊಟ್ಟಿದ್ದೇ ತಡ, ಪರಸ್ಪರ ದ್ವೇಷಿಸುವ ಎಲ್ಲ ಶಿಕ್ಷಕರು, ಶಿಕ್ಷಕಿಯರು ಒಟ್ಟಾಗಿ ಸೇರಿ ಮೀಟಿಂಗ್‌ನಲ್ಲಿ ಚತುರಮತಿ ಮೇಡಂನನ್ನು ತರಾಟೆಗೆ ತೆಗೆದುಕೊಂಡುಬಿಟ್ಟರು. ನನಗೆ ಖಾಸಾ ಆದ್ಮಿಗಳೆಂದು ನಂಬಿದವರು ಕೂಡ ಈ ಸಮಯದಲ್ಲಿ ತಮ್ಮ ವಿರುದ್ಧ ನಿಂತಿದ್ದು ಕಂಡು ಮೇಡಂ “ಈ ನರಕದ ಜಂಜಾಟವೇ ಬೇಡ. ನಾನು ರಾಜೀನಾಮೆ ಕೊಡುತ್ತೇನೆ” ಎಂದು ಹತ್ತು ದಿನಗಳ ಕಮ್ಯುಟೆಡ್ ಲೀವ್ ಹಾಕಿ ಊರಿಗೆ ಹೊರಟು ಹೋಗಿದ್ದರು.

ತಿರುಗಿ ಬಂದಾಗ ಮೇಡಂನ ಮುಖದಲ್ಲಿ ಹೊಸ ಕಳೆ. ಕೆಲಸದಲ್ಲಿ ಅತ್ಯುತ್ಸಾಹ. ಆಫೀಸಿಗೆ ಕೆಲಸವೊ, ಮಕ್ಕಳ ತರಗತಿಯೋ, ಬೋಧನೆಯ ಸಮಸ್ಯೆಯೋ ಯಾವುದನ್ನೂ ತಲೆಗೆ ಹಚ್ಚಿಕೊಳ್ಳದೆ ಸುಸೂತ್ರ ಆಡಳಿತ ನಡೆಸಿದರು. ಈಗವರಿಗೆ ರಕ್ತದ ಒತ್ತಡವೂ ಇರಲಿಲ್ಲ, ಮೆದುಳಿಗೆ ನೋವೂ ಬಾಧಿಸಲಿಲ್ಲ. ಆದರೆ ಅವರ ಹತ್ತಿರ ಸುಳಿದಾಡುವ ಅಧ್ಯಾಪಕರ ಒಡಲಾಳದಲ್ಲಿ ಮತ್ಸರದ ಕಡೆಗೋಲು ಆಡುತ್ತಲೇ ಇತ್ತು. ಚತುರಮತಿ ಮೇಡಂನ ಬ್ರಿಟಿಷ್ ಪಾಲಸಿ ಆ ಕಡೆಗೋಲನ್ನು ನಿಯಂತ್ರಿಸಿಕೊಂಡಿತ್ತು ನಿರಂತರ.

*****

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...