Home / ಕಥೆ / ಕಿರು ಕಥೆ / ಒಡಕು ಹುಟ್ಟಿಸಿ ರಾಜ್ಯವಾಳು

ಒಡಕು ಹುಟ್ಟಿಸಿ ರಾಜ್ಯವಾಳು

ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವಿರಾರು ಮಕ್ಕಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಹರಸಾಹಸವೆನಿಸಿ ಮೇಡಂನ ಮೂಡು ತರಾವರಿಗೊಳ್ಳುತ್ತಿತ್ತು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಲೇಜನ್ನು ವ್ಯವಸ್ಥಿತವಾಗಿ ಮಾದರಿಯಾಗಿಸುವ ಧಾವಂತ ತೀವ್ರವಾಗಿದ್ದರೂ ಆಡಳಿತದ ಗಂಧಗಾಳಿಯ ಕೊರತೆಯಿಂದಾಗಿ ಮೇಡಂನ ಉದ್ದೇಶಗಳು ಬೇರುಗಳಿಲ್ಲದೆ ತತ್ತರಿಸತೊಡಗಿದ್ದವು. ಇದರಿಂದಾಗಿ ತಲೆ ತುಂಬ ನೋವು, ರಕ್ತದೊತ್ತಡ ಏರಿಳಿಯುತ್ತ ಜೀವನದ ಸೊಗಸನ್ನೇ ನುಂಗಿಹಾಕಿತ್ತು.

ಅಧ್ಯಾಪಕರಿಗೊ ಕಲಿಸುವ ಆಸಕ್ತಿಗಿಂತ ಸ್ವಹಿತ ಸಾಧಿಸಿಕೊಳ್ಳುವ ತವಕ. ಅದಕ್ಕಾಗಿ ಮೇಡಂನ ವಿಶ್ವಾಸಗಳಿಸಿಕೊಳ್ಳುವ ಹುನ್ನಾರು. ಮೇಡಂ ಒಬ್ಬರೇ ಕುಳಿತಿರುವುದನ್ನು ನೋಡಿಕೊಂಡು ಅವರ ಚೇಂಬರಿಗೆ ಲಗ್ಗೆ ಇಡುತ್ತಿದ್ದ ಪ್ರತಿಯೊಬ್ಬರೂ ಅತೀ ವಿನಯ ಪ್ರದರ್ಶಿಸಿ ಒಬ್ಬರ ಮೇಲೆ ಇನ್ನೊಬ್ಬರು ಚಾಡಿ ಹೇಳುವ, ತಮ್ಮ ಬೇಳೆ ಬೇಯಿಸಿಕೊಳ್ಳುವ ಸಮಯಸಾದಕತನದಿಂದ ಮೇಡಂ ದಿಕ್ಕೆಟ್ಟು ಹೋಗುತ್ತಿದ್ದರು.

ಚಾಡಿಕೋರರ ಕೈಗೊಂಬೆಯಾದವರಂಥೆ ಮೇಡಂ ಇನ್ನುಳಿದವರ ಮೇಲೆ ಹಾರಾಡುತ್ತಿದ್ದರು. ಅವರೂ ಪ್ರತ್ಯುತ್ತರ ನೀಡಿ ಮೇಡಂನ ರಕ್ತ ಕುದಿಸುತ್ತಿದ್ದರು.

ಒಂದಿನ ಕೆ.ಸಿ.ಎಸ್.ಆರ್‍. ರೂಲ್ಸ್ ಜಡಿದು ಮೆಮೊ ಕೊಟ್ಟಿದ್ದೇ ತಡ, ಪರಸ್ಪರ ದ್ವೇಷಿಸುವ ಎಲ್ಲ ಶಿಕ್ಷಕರು, ಶಿಕ್ಷಕಿಯರು ಒಟ್ಟಾಗಿ ಸೇರಿ ಮೀಟಿಂಗ್‌ನಲ್ಲಿ ಚತುರಮತಿ ಮೇಡಂನನ್ನು ತರಾಟೆಗೆ ತೆಗೆದುಕೊಂಡುಬಿಟ್ಟರು. ನನಗೆ ಖಾಸಾ ಆದ್ಮಿಗಳೆಂದು ನಂಬಿದವರು ಕೂಡ ಈ ಸಮಯದಲ್ಲಿ ತಮ್ಮ ವಿರುದ್ಧ ನಿಂತಿದ್ದು ಕಂಡು ಮೇಡಂ “ಈ ನರಕದ ಜಂಜಾಟವೇ ಬೇಡ. ನಾನು ರಾಜೀನಾಮೆ ಕೊಡುತ್ತೇನೆ” ಎಂದು ಹತ್ತು ದಿನಗಳ ಕಮ್ಯುಟೆಡ್ ಲೀವ್ ಹಾಕಿ ಊರಿಗೆ ಹೊರಟು ಹೋಗಿದ್ದರು.

ತಿರುಗಿ ಬಂದಾಗ ಮೇಡಂನ ಮುಖದಲ್ಲಿ ಹೊಸ ಕಳೆ. ಕೆಲಸದಲ್ಲಿ ಅತ್ಯುತ್ಸಾಹ. ಆಫೀಸಿಗೆ ಕೆಲಸವೊ, ಮಕ್ಕಳ ತರಗತಿಯೋ, ಬೋಧನೆಯ ಸಮಸ್ಯೆಯೋ ಯಾವುದನ್ನೂ ತಲೆಗೆ ಹಚ್ಚಿಕೊಳ್ಳದೆ ಸುಸೂತ್ರ ಆಡಳಿತ ನಡೆಸಿದರು. ಈಗವರಿಗೆ ರಕ್ತದ ಒತ್ತಡವೂ ಇರಲಿಲ್ಲ, ಮೆದುಳಿಗೆ ನೋವೂ ಬಾಧಿಸಲಿಲ್ಲ. ಆದರೆ ಅವರ ಹತ್ತಿರ ಸುಳಿದಾಡುವ ಅಧ್ಯಾಪಕರ ಒಡಲಾಳದಲ್ಲಿ ಮತ್ಸರದ ಕಡೆಗೋಲು ಆಡುತ್ತಲೇ ಇತ್ತು. ಚತುರಮತಿ ಮೇಡಂನ ಬ್ರಿಟಿಷ್ ಪಾಲಸಿ ಆ ಕಡೆಗೋಲನ್ನು ನಿಯಂತ್ರಿಸಿಕೊಂಡಿತ್ತು ನಿರಂತರ.

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...