Home / ಕಥೆ / ಕಿರು ಕಥೆ / ಪ್ರಾಮಾಣಿಕ ಅನಿಸಿಕೆ

ಪ್ರಾಮಾಣಿಕ ಅನಿಸಿಕೆ

ಸಂಜೆ ಸಮಯ.

ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು ಅವನು ಮೂಸಿದ.

ಪಲ್ಲಂಗದ ಮೇಲೆ ಕುಳಿತುಕೊಳ್ಳುತ್ತ ಅವಳನ್ನು ಬರಸೆಳೆದು ತಬ್ಬಿಕೊಂಡು ಇಡೀ ಮೈಯನನ್ನು ಮುದ್ದಿಸತೊಡಗಿದ. ಅವನೊಂದಿಗೆ ಅವಳೂ ತೀವ್ರವಾಗಿ ಸ್ಪಂದಿಸತೊಡಗಿದಳು.

ಅವಳ ದೇಹ ಸೊಬಗಿಗೆ ಸಂಪೂರ್ಣ ಸೋತುಹೋದ ಅವನು ಉತ್ಕಟವಾಗಿ ಉಲಿತ “ನೀನಿಲ್ಲದ ಪ್ರತಿಯೊಂದು ಕ್ಷಣಗಳು ನನಗೆ ಶೂನ್ಯ.”

“ನನಗೂ ಅಷ್ಟೆ” ಆಕೆ ಮೋಹಕವಾಗಿ ಪ್ರತಿಕ್ರಿಯಿಸಿದಳು.

“ನನ್ನ ನಿನ್ನ ಸಂಬಂಧ ಜನ್ಮಾಂತರದ್ದು ಅನಿಸುವುದು.”

“ಹೌದು”.

“ನನ್ನ ಹೆಂಡತಿಯಲ್ಲಿ ಇಲ್ಲದ ಆಕರ್ಷಣೆ ನಿನ್ನಲ್ಲಿದೆ.”

“ಎಲ್ಲರೂ ಹಾಗೆ ಹೇಳುವರು.”

“ಎಲ್ಲರಂತಲ್ಲ ನಾನು. ನಿನ್ನನ್ನು ತುಂಬಾ ಇಷ್ಟಪಡುತ್ತೇನೆ.”

“ನಾನೂ ಅಷ್ಟೇ.”

“ನಿನಗಾಗಿ ನನ್ನ ಹೆಂಡತಿಯನ್ನು ಬಿಡುತ್ತೇನೆ ನಾನು.”

“ಏಕೆ?”

“ನನ್ನೆದೆಯಲ್ಲಿ ನೀನು ಹೆಪ್ಪುಗಟ್ಟಿರುವೆ.”

ಆಕೆ ಮಾತನಾಡದೆ ಅವನೆದೆಯ ಮೇಲೆ ಒರಗಿ ತನ್ನ ಕಣ್ಣು ರೆಪ್ಪೆ ಪಿಳುಕಿಸಿದಳು.

“ನಾನು ನಿನ್ನನ್ನು ಬಹಳ ಪ್ರೀತಿಸುತ್ತೇನೆ.”

ಅವಳು ಉತ್ಸಾಹದಿಂದ ಕೆನ್ನೆ ಕುಣಿಸಿ ನಕ್ಕಳು.

“ನೀನು…..?” ಅವನು ಕೇಳಿದ.

“ನಾನು ನಿನ್ನ ಹಾಗೆ ಸುಳ್ಳು ಹೇಳುವುದಿಲ್ಲ” ಆಕೆ ಎದ್ದು ಕುಳಿತಳು.

“ಅಂದರೆ….?” ಗಲಿಬಿಲಿಯಾಗಿ ಕೇಳಿದ ಅವನು.

“ನಾನು ನಿನ್ನ ಹಣವನ್ನು ಪ್ರೀತಿಸುತ್ತೇನೆ” ಎದೆಯ ಮಾತು ಹೇಳಿದಳಾಕೆ.

ಆಕಾಶದಿಂದ ಬಿದ್ದವನಂತೆ ತತ್ತರಿಸಿದ ಅವನು ಭ್ರಮೆಯ ಪದರುಗಳಿಂದ ಹೊರಬಂದಂತೆ ಕಣ್ಣು ಹಿಗ್ಗಿಸಿ ಹೇಳಿದ “ನೀನು ಪಕ್ಕಾ ವೇಶ್ಯೆ!”

“ಅದು ಜಗತ್ತಿಗೆ ಗೊತ್ತು” ಎಂದಾಕೆ ಅವನು ಮೂಸಿದ ಗಜರಾ ಕಿತ್ತೆಸೆದು ಬಾಗಿಲಿನತ್ತ ಒಗೆದಳು.

*****

 

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...