Home / ಕಥೆ / ಕಿರು ಕಥೆ / ಪ್ರಾಮಾಣಿಕ ಅನಿಸಿಕೆ

ಪ್ರಾಮಾಣಿಕ ಅನಿಸಿಕೆ

ಸಂಜೆ ಸಮಯ.

ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು ಅವನು ಮೂಸಿದ.

ಪಲ್ಲಂಗದ ಮೇಲೆ ಕುಳಿತುಕೊಳ್ಳುತ್ತ ಅವಳನ್ನು ಬರಸೆಳೆದು ತಬ್ಬಿಕೊಂಡು ಇಡೀ ಮೈಯನನ್ನು ಮುದ್ದಿಸತೊಡಗಿದ. ಅವನೊಂದಿಗೆ ಅವಳೂ ತೀವ್ರವಾಗಿ ಸ್ಪಂದಿಸತೊಡಗಿದಳು.

ಅವಳ ದೇಹ ಸೊಬಗಿಗೆ ಸಂಪೂರ್ಣ ಸೋತುಹೋದ ಅವನು ಉತ್ಕಟವಾಗಿ ಉಲಿತ “ನೀನಿಲ್ಲದ ಪ್ರತಿಯೊಂದು ಕ್ಷಣಗಳು ನನಗೆ ಶೂನ್ಯ.”

“ನನಗೂ ಅಷ್ಟೆ” ಆಕೆ ಮೋಹಕವಾಗಿ ಪ್ರತಿಕ್ರಿಯಿಸಿದಳು.

“ನನ್ನ ನಿನ್ನ ಸಂಬಂಧ ಜನ್ಮಾಂತರದ್ದು ಅನಿಸುವುದು.”

“ಹೌದು”.

“ನನ್ನ ಹೆಂಡತಿಯಲ್ಲಿ ಇಲ್ಲದ ಆಕರ್ಷಣೆ ನಿನ್ನಲ್ಲಿದೆ.”

“ಎಲ್ಲರೂ ಹಾಗೆ ಹೇಳುವರು.”

“ಎಲ್ಲರಂತಲ್ಲ ನಾನು. ನಿನ್ನನ್ನು ತುಂಬಾ ಇಷ್ಟಪಡುತ್ತೇನೆ.”

“ನಾನೂ ಅಷ್ಟೇ.”

“ನಿನಗಾಗಿ ನನ್ನ ಹೆಂಡತಿಯನ್ನು ಬಿಡುತ್ತೇನೆ ನಾನು.”

“ಏಕೆ?”

“ನನ್ನೆದೆಯಲ್ಲಿ ನೀನು ಹೆಪ್ಪುಗಟ್ಟಿರುವೆ.”

ಆಕೆ ಮಾತನಾಡದೆ ಅವನೆದೆಯ ಮೇಲೆ ಒರಗಿ ತನ್ನ ಕಣ್ಣು ರೆಪ್ಪೆ ಪಿಳುಕಿಸಿದಳು.

“ನಾನು ನಿನ್ನನ್ನು ಬಹಳ ಪ್ರೀತಿಸುತ್ತೇನೆ.”

ಅವಳು ಉತ್ಸಾಹದಿಂದ ಕೆನ್ನೆ ಕುಣಿಸಿ ನಕ್ಕಳು.

“ನೀನು…..?” ಅವನು ಕೇಳಿದ.

“ನಾನು ನಿನ್ನ ಹಾಗೆ ಸುಳ್ಳು ಹೇಳುವುದಿಲ್ಲ” ಆಕೆ ಎದ್ದು ಕುಳಿತಳು.

“ಅಂದರೆ….?” ಗಲಿಬಿಲಿಯಾಗಿ ಕೇಳಿದ ಅವನು.

“ನಾನು ನಿನ್ನ ಹಣವನ್ನು ಪ್ರೀತಿಸುತ್ತೇನೆ” ಎದೆಯ ಮಾತು ಹೇಳಿದಳಾಕೆ.

ಆಕಾಶದಿಂದ ಬಿದ್ದವನಂತೆ ತತ್ತರಿಸಿದ ಅವನು ಭ್ರಮೆಯ ಪದರುಗಳಿಂದ ಹೊರಬಂದಂತೆ ಕಣ್ಣು ಹಿಗ್ಗಿಸಿ ಹೇಳಿದ “ನೀನು ಪಕ್ಕಾ ವೇಶ್ಯೆ!”

“ಅದು ಜಗತ್ತಿಗೆ ಗೊತ್ತು” ಎಂದಾಕೆ ಅವನು ಮೂಸಿದ ಗಜರಾ ಕಿತ್ತೆಸೆದು ಬಾಗಿಲಿನತ್ತ ಒಗೆದಳು.

*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...