Home / ಕಥೆ / ಕಿರು ಕಥೆ / ಪ್ರಾಮಾಣಿಕ ಅನಿಸಿಕೆ

ಪ್ರಾಮಾಣಿಕ ಅನಿಸಿಕೆ

ಸಂಜೆ ಸಮಯ.

ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು ಅವನು ಮೂಸಿದ.

ಪಲ್ಲಂಗದ ಮೇಲೆ ಕುಳಿತುಕೊಳ್ಳುತ್ತ ಅವಳನ್ನು ಬರಸೆಳೆದು ತಬ್ಬಿಕೊಂಡು ಇಡೀ ಮೈಯನನ್ನು ಮುದ್ದಿಸತೊಡಗಿದ. ಅವನೊಂದಿಗೆ ಅವಳೂ ತೀವ್ರವಾಗಿ ಸ್ಪಂದಿಸತೊಡಗಿದಳು.

ಅವಳ ದೇಹ ಸೊಬಗಿಗೆ ಸಂಪೂರ್ಣ ಸೋತುಹೋದ ಅವನು ಉತ್ಕಟವಾಗಿ ಉಲಿತ “ನೀನಿಲ್ಲದ ಪ್ರತಿಯೊಂದು ಕ್ಷಣಗಳು ನನಗೆ ಶೂನ್ಯ.”

“ನನಗೂ ಅಷ್ಟೆ” ಆಕೆ ಮೋಹಕವಾಗಿ ಪ್ರತಿಕ್ರಿಯಿಸಿದಳು.

“ನನ್ನ ನಿನ್ನ ಸಂಬಂಧ ಜನ್ಮಾಂತರದ್ದು ಅನಿಸುವುದು.”

“ಹೌದು”.

“ನನ್ನ ಹೆಂಡತಿಯಲ್ಲಿ ಇಲ್ಲದ ಆಕರ್ಷಣೆ ನಿನ್ನಲ್ಲಿದೆ.”

“ಎಲ್ಲರೂ ಹಾಗೆ ಹೇಳುವರು.”

“ಎಲ್ಲರಂತಲ್ಲ ನಾನು. ನಿನ್ನನ್ನು ತುಂಬಾ ಇಷ್ಟಪಡುತ್ತೇನೆ.”

“ನಾನೂ ಅಷ್ಟೇ.”

“ನಿನಗಾಗಿ ನನ್ನ ಹೆಂಡತಿಯನ್ನು ಬಿಡುತ್ತೇನೆ ನಾನು.”

“ಏಕೆ?”

“ನನ್ನೆದೆಯಲ್ಲಿ ನೀನು ಹೆಪ್ಪುಗಟ್ಟಿರುವೆ.”

ಆಕೆ ಮಾತನಾಡದೆ ಅವನೆದೆಯ ಮೇಲೆ ಒರಗಿ ತನ್ನ ಕಣ್ಣು ರೆಪ್ಪೆ ಪಿಳುಕಿಸಿದಳು.

“ನಾನು ನಿನ್ನನ್ನು ಬಹಳ ಪ್ರೀತಿಸುತ್ತೇನೆ.”

ಅವಳು ಉತ್ಸಾಹದಿಂದ ಕೆನ್ನೆ ಕುಣಿಸಿ ನಕ್ಕಳು.

“ನೀನು…..?” ಅವನು ಕೇಳಿದ.

“ನಾನು ನಿನ್ನ ಹಾಗೆ ಸುಳ್ಳು ಹೇಳುವುದಿಲ್ಲ” ಆಕೆ ಎದ್ದು ಕುಳಿತಳು.

“ಅಂದರೆ….?” ಗಲಿಬಿಲಿಯಾಗಿ ಕೇಳಿದ ಅವನು.

“ನಾನು ನಿನ್ನ ಹಣವನ್ನು ಪ್ರೀತಿಸುತ್ತೇನೆ” ಎದೆಯ ಮಾತು ಹೇಳಿದಳಾಕೆ.

ಆಕಾಶದಿಂದ ಬಿದ್ದವನಂತೆ ತತ್ತರಿಸಿದ ಅವನು ಭ್ರಮೆಯ ಪದರುಗಳಿಂದ ಹೊರಬಂದಂತೆ ಕಣ್ಣು ಹಿಗ್ಗಿಸಿ ಹೇಳಿದ “ನೀನು ಪಕ್ಕಾ ವೇಶ್ಯೆ!”

“ಅದು ಜಗತ್ತಿಗೆ ಗೊತ್ತು” ಎಂದಾಕೆ ಅವನು ಮೂಸಿದ ಗಜರಾ ಕಿತ್ತೆಸೆದು ಬಾಗಿಲಿನತ್ತ ಒಗೆದಳು.

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...