Home / ಕವನ / ಕವಿತೆ / ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ
ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ||

ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ
ಜೋರ್‍ಜೋರು ಚಪ್ಪಲ್ಲು ಮಂಗಮಾಯಾ
ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು
ಚಂದುಳ್ಳ ನನಭಕುತಿ ಚೂರುಚಾರಾ ||೧||

ಸಾಮೇರ ಗುರುಪಾದ ಗ್ಹುಕ್ಕೆಂದು ನಕ್ಕೀತ
ಕಿಸ್ಸಂತ ಕಿಸಮಂಗ ಆದೆನಲ್ಲ
ಮೂಗ್ನ್ಯಾಗ ಮೆಣಸಿಂಡಿ ಬಾಯಾಗ ಹಿಡಿಸುಂಠಿ
ಕಣ್ಣಾಗ ಖಾರ್ಪೂಡಿ ಬಿದ್ದಿತಲ್ಲ ||೨||

ತೇರ್‍ಮ್ಯಾಲೆ ತೇರಾತ ಜೋರ್‍ಮ್ಯಾಲೆ ಜೋರಾತ
ಕಾರ್‍ಮ್ಯಾಲೆ ಕಾರಾತ ಪೊಂವ್ವ ಪೊಂವ್ವ
ಯಾತಕ್ಕ ಬಂದಿದ್ದೆ ಯಾತಕ್ಕ ತಂಗಿದ್ದೆ
ಯಾತಕ್ಕ ಬೊಗಳಾಟ ಬೊವ್ವ ಬೊವ್ವ ||೩||

ಭಕುತೀಗಿ ಬೋಗೂಣಿ ಮುಕುತೀಗಿ ಹಂಡೇವು
ಯುಕುತೀಗಿ ಸರಸೋತಿ ಬಸರಾದಳ
ಪಡಿಚಿಂತಿ ಪಡಜಂತಿ ಮಠದಾಗ ಮಾಸಂತಿ
ಫಜೀತಿ ಪಾರೋತಿ ಹೆಸರಾದಳ ||೪||

ಮಠಮಠ ಮಧ್ಯಾನ್ಹ ಮಠದಾನ ದೆವ್ವಾದೆ
ಸಾಮೇರ ಲಿಂಗಕ್ಕೆ ಬಡಕೊಂಡೆ
ಮಠದಾನ ತೊಲಿಕಂಬ ಕಡಕೊಂಡು ಬಿದ್ದಾಗ
ಘಟದಿಂದ ಘನಲಿಂಗ ಪಡಕೊಂಡೆ ||೫||
*****
ಮಠ = ಸಂಸಾರ
ಘಟ = ದೇಹ
ಚಪ್ಪಲ್ಲು = ಚರ್ಮದೇಹದ ಅಭಿಮಾನ (Lower Consciousness)
ಐವತ್ತು ರೂಪಾಯಿ = ಹಳೆ ಸಂಸ್ಕಾರಗಳು
ಸರಸೋತಿ = ಶಾಸ್ತ್ರಬುದ್ದಿ (Intellectual egoism)
ಬಸರಾಗು = ಆತ್ಮಜ್ಞಾನಿಯಾಗು
ಲಿಂಗಕ್ಕ ಬಡಕೊ= ಸಾಕ್ಷಾತ್ಕಾರ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...