Home / ಕವನ / ಕವಿತೆ / ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ
ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ||

ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ
ಜೋರ್‍ಜೋರು ಚಪ್ಪಲ್ಲು ಮಂಗಮಾಯಾ
ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು
ಚಂದುಳ್ಳ ನನಭಕುತಿ ಚೂರುಚಾರಾ ||೧||

ಸಾಮೇರ ಗುರುಪಾದ ಗ್ಹುಕ್ಕೆಂದು ನಕ್ಕೀತ
ಕಿಸ್ಸಂತ ಕಿಸಮಂಗ ಆದೆನಲ್ಲ
ಮೂಗ್ನ್ಯಾಗ ಮೆಣಸಿಂಡಿ ಬಾಯಾಗ ಹಿಡಿಸುಂಠಿ
ಕಣ್ಣಾಗ ಖಾರ್ಪೂಡಿ ಬಿದ್ದಿತಲ್ಲ ||೨||

ತೇರ್‍ಮ್ಯಾಲೆ ತೇರಾತ ಜೋರ್‍ಮ್ಯಾಲೆ ಜೋರಾತ
ಕಾರ್‍ಮ್ಯಾಲೆ ಕಾರಾತ ಪೊಂವ್ವ ಪೊಂವ್ವ
ಯಾತಕ್ಕ ಬಂದಿದ್ದೆ ಯಾತಕ್ಕ ತಂಗಿದ್ದೆ
ಯಾತಕ್ಕ ಬೊಗಳಾಟ ಬೊವ್ವ ಬೊವ್ವ ||೩||

ಭಕುತೀಗಿ ಬೋಗೂಣಿ ಮುಕುತೀಗಿ ಹಂಡೇವು
ಯುಕುತೀಗಿ ಸರಸೋತಿ ಬಸರಾದಳ
ಪಡಿಚಿಂತಿ ಪಡಜಂತಿ ಮಠದಾಗ ಮಾಸಂತಿ
ಫಜೀತಿ ಪಾರೋತಿ ಹೆಸರಾದಳ ||೪||

ಮಠಮಠ ಮಧ್ಯಾನ್ಹ ಮಠದಾನ ದೆವ್ವಾದೆ
ಸಾಮೇರ ಲಿಂಗಕ್ಕೆ ಬಡಕೊಂಡೆ
ಮಠದಾನ ತೊಲಿಕಂಬ ಕಡಕೊಂಡು ಬಿದ್ದಾಗ
ಘಟದಿಂದ ಘನಲಿಂಗ ಪಡಕೊಂಡೆ ||೫||
*****
ಮಠ = ಸಂಸಾರ
ಘಟ = ದೇಹ
ಚಪ್ಪಲ್ಲು = ಚರ್ಮದೇಹದ ಅಭಿಮಾನ (Lower Consciousness)
ಐವತ್ತು ರೂಪಾಯಿ = ಹಳೆ ಸಂಸ್ಕಾರಗಳು
ಸರಸೋತಿ = ಶಾಸ್ತ್ರಬುದ್ದಿ (Intellectual egoism)
ಬಸರಾಗು = ಆತ್ಮಜ್ಞಾನಿಯಾಗು
ಲಿಂಗಕ್ಕ ಬಡಕೊ= ಸಾಕ್ಷಾತ್ಕಾರ

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ