ತೆರೆಯ ಮೇಲೆ ತೆರೆಯು ನೆರೆಯು

ತೆರೆಯ ಮೇಲೆ ತೆರೆಯು ನೊರೆಯು
ತೊರೆಯ ಬುರುಗು ನಿಲ್ಲಲಿ
ಆಳ ಆಳ ಆಳ ಕಡಲು
ಮುತ್ತು ಹವಳ ತೆರೆಯಲಿ ||೧||

ಮೇಲೆ ಮೇಲೆ ಜೊಂಡು ಪಾಚಿ
ಒಳಗೆ ವಜ್ರ ಸಂಕುಲಾ
ತೆರೆಯ ಮೇಲೆ ಗಾಳಿ ಗೂಳಿ
ಒಳಗೆ ಶಾಂತಿ ಸಮತಲಾ ||೨||

ನನ್ನ ಒಳಗೆ ನಾನು ಇಳಿದು
ನನ್ನ ನಾನು ಹುಡುಕುವೆ
ನಾನು ಒಂದು ದೀಪವೆಂದು
ನನ್ನ ನಾನು ತಿಳಿಯುವೆ ||೩||

ಒಹೊ ಆತ್ಮ ದೀಪ ಕಂಡೆ
ಚಿಪ್ಪು ಚಟ್ಟ ದೊಡಲಲಿ
ಎಲುಬಿನೊಳಗೆ ಉಲುಹು ಕಂಡೆ
ವಿಶ್ವ ಜ್ಯೋತಿ ಕೊಳದಲಿ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಡ ಹಬ್ಬ
Next post ಭಾವಪೂರ್‍ಣ ಶ್ರದ್ಧಾಂಜಲಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಬೋರ್ಡು ಒರಸುವ ಬಟ್ಟೆ

    ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…