ಕಣಿಕಿ ಕೊಬ್ಬರಿ ಆತು

ಕಣಕಿ ಕೊಬ್ಬರಿ ಆತು ಹೊಟ್ಟು ಹುಗ್ಗಿಯು ಆತು
ಏನ್ಕಾಲ ಬಂತವ್ವ ಕಂಗಾಲ ||ಪಲ್ಲ||

ರೊಟ್ಟೀಯ ಬೇಸಾಕ ಚಕಿಚೂರು ಇಲ್ಲಾತು
ಹ್ಯಾಂಗವ್ವ ಮುಂದವ್ವ ಈ ಕಾಲ
ಆರು ವರುಸಕ ಒಮ್ಮೆ ಬರಗಾಲ ಬರುತಿತ್ತು
ಈಗೀಗ ವರುವರುಸ ಬರಗಾಲ ||೧||

ಏನು ಇಲ್ಲಾ ಅಂದ್ರು ಕಲ್ಲು ಬೆಲ್ಲಾ ಅಂದ್ರು
ನಾಲಿಗಿ ಚಟ ಮಾತ್ರ ನಿಂತಿಲ್ಲ
ಹುಚನಾಯಿ ಹೊಟ್ಟೀಗೆ ಹಿಟುಬ್ಯಾಳಿ ಬೇಕಲ್ಲ
ಹೊಟ್ಟೀಯ ಹಾವ್ರಾಣಿ ಸತ್ತಿಲ್ಲ ||೨||

ದೊಡದೊಡ್ಡ ದೊಡ್ಡೋರು ದೊಡ್ಮಾತು ಆಡ್ಹ್ಯೋದ್ರು
ನನಹೊಟ್ಟೆ ತಿಪಿಗುಂಡಿ ತುಂಬಿಲ್ಲ
ಹಸುಗೂಸು ನನಮಕ್ಳು ಹಾಲ್ಗೂಸು ಸಣಮಕ್ಳು
ಎಂಜಲದ ಪತ್ರೋಳಿ ಬಿಟ್ಟಿಲ್ಲ ||೩||

ಮೂರು ಸಾವಿರ ದುಡ್ಡು ಗಾಳಿಗೋಪುರವಾತು
ಡಾಕ್ಟರ ಬಿಲ್ಮಾಡಿ ಕಿತ್ನಲ್ಲ
ಏನು ಮಾಡಿದರೇನು ನನಕೂಸು ನಿಲಲಿಲ್ಲ
ಕುಣಿಯಾಗ ಗೊಂಬ್ಯಾಗಿ ಕುಂತಲ್ಲ ||೪||
*****
ಕಣಿಕಿ = ಜೋಳದ ದಂಟು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣ್ಣೀರ ಹನಿ
Next post ಏನು

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…