ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ

ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ
ಪೂಜಾರಿ ನಾನಽ ಪರಮೇಶಿ ||ಪಲ್ಲ||

ಕಲ್ಲಾಗಿ ನೀ ಕೂಡ ಬೆಲ್ಲಾ ನಾ ಕೊಡತೇನ
ಬಕುತರು ಬರಲೇ ನಿನಗುಡಿಗೆ
ಗಂಟಿ ಗುಗ್ಗುಳ ನಿನಗ ಹುಗ್ಗಿ ಹೋಳಿಗಿ ನನಗ
ಬಂಗಾರ ಕಳಸಾ ನಿನಮುಡಿಗೆ ||೧||

ನೀ ಕಲ್ಲು ಆದರ ಕಲ್ಲೆಲ್ಲ ಕೈವಲ್ಯ
ಪೂಜಾರಿ ನನಗ ಗುರುಪೂಜೆ
ಕುರಿಗೋಳು ಬಂದಾವ ನನಕಾಲು ತೊಳೆದಾವ
ಕಾಲೀನ ಕೆಸರಾ ಕುಡಿದಾವ ||೨||

ಪೂಜಾರಿ ಪರಮೇಶಾ ನಾನೊಬ್ಬ ಜಗದೀಶಾ
ಮಠದಯ್ಯ ಮಾಸಾಮಿ ನಾನಯ್ಯಾ
ನೀಮೂಳಾ ಮಾದೇವಾ ಖಾಲಿಕುಂಬಳ ಖೂಳಾ
ನೀ ಹೇಳಾ ಹುಚಮೂಳಾ ಹಕಿಕತ್ತಾ ||೩||

ಕ್ಯಾವೀಯ ಜೋಳ್ಯಾಗ ಕೆಂಗೋದಿ ಹೋಳ್ಗ್ಯಾಗ
ರೋಮರೋಮಕ ನೋಡ ಭಕುತಾರಾ
ಬಡಬಡ ಬಂದಾವು ದಡದಡ ಬಿದ್ದಾವು
ಕುರಿಗೋಳು ಇರುತನ ನಾ ಜೋರಾ ||೪||

ಕಲ್ಲುದೇವರು ನೀನು ಕಿಸಬಾಯಿ ಕಲ್ಲೇಶಿ
ಮಲ್ಲೇಶಿ ರಾಯ್ರೋ ಕೈಕೊಟ್ರೋ
ಪುಗಸೆಟ್ಟಿ ಪೂಜೇರಿ ಸಾಂಬ್ರಾಜ್ಯ ಜೋರ್ಜೊರಿ
ಎಲ್ಲೀಯ ದೇವ್ರೋ ನನಬಿಟ್ರೋ ||೫||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬುಗ್ಗೆಗಳು
Next post ಹಿಂದಿತ್ತು

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…