Home / ಕವನ / ಕವಿತೆ / ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ

ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ

ಸತ್ತಂಗ ನೀ ಮಾಡ ಅತ್ತಂಗ ನಾ ಮಾಡ
ಪೂಜಾರಿ ನಾನಽ ಪರಮೇಶಿ ||ಪಲ್ಲ||

ಕಲ್ಲಾಗಿ ನೀ ಕೂಡ ಬೆಲ್ಲಾ ನಾ ಕೊಡತೇನ
ಬಕುತರು ಬರಲೇ ನಿನಗುಡಿಗೆ
ಗಂಟಿ ಗುಗ್ಗುಳ ನಿನಗ ಹುಗ್ಗಿ ಹೋಳಿಗಿ ನನಗ
ಬಂಗಾರ ಕಳಸಾ ನಿನಮುಡಿಗೆ ||೧||

ನೀ ಕಲ್ಲು ಆದರ ಕಲ್ಲೆಲ್ಲ ಕೈವಲ್ಯ
ಪೂಜಾರಿ ನನಗ ಗುರುಪೂಜೆ
ಕುರಿಗೋಳು ಬಂದಾವ ನನಕಾಲು ತೊಳೆದಾವ
ಕಾಲೀನ ಕೆಸರಾ ಕುಡಿದಾವ ||೨||

ಪೂಜಾರಿ ಪರಮೇಶಾ ನಾನೊಬ್ಬ ಜಗದೀಶಾ
ಮಠದಯ್ಯ ಮಾಸಾಮಿ ನಾನಯ್ಯಾ
ನೀಮೂಳಾ ಮಾದೇವಾ ಖಾಲಿಕುಂಬಳ ಖೂಳಾ
ನೀ ಹೇಳಾ ಹುಚಮೂಳಾ ಹಕಿಕತ್ತಾ ||೩||

ಕ್ಯಾವೀಯ ಜೋಳ್ಯಾಗ ಕೆಂಗೋದಿ ಹೋಳ್ಗ್ಯಾಗ
ರೋಮರೋಮಕ ನೋಡ ಭಕುತಾರಾ
ಬಡಬಡ ಬಂದಾವು ದಡದಡ ಬಿದ್ದಾವು
ಕುರಿಗೋಳು ಇರುತನ ನಾ ಜೋರಾ ||೪||

ಕಲ್ಲುದೇವರು ನೀನು ಕಿಸಬಾಯಿ ಕಲ್ಲೇಶಿ
ಮಲ್ಲೇಶಿ ರಾಯ್ರೋ ಕೈಕೊಟ್ರೋ
ಪುಗಸೆಟ್ಟಿ ಪೂಜೇರಿ ಸಾಂಬ್ರಾಜ್ಯ ಜೋರ್ಜೊರಿ
ಎಲ್ಲೀಯ ದೇವ್ರೋ ನನಬಿಟ್ರೋ ||೫||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...