Home / ಕವನ / ಕವಿತೆ / ಮುಗಿಯಲಾರದ ದುಃಖಕೆ

ಮುಗಿಯಲಾರದ ದುಃಖಕೆ

ಕಣ್ಣ ಬೆಳಕೇ
ಒಲವಿನ ಉಸಿರೇ
ಜೀವದ ಜೀವವೇ
ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಪ್ರೇಮ ಪತ್ರವ

ಉಸಿರಿಗೆ ಉಸಿರಾದವಳೇ
ಬೆಳಕಿಗೆ ಬೆಳಕಾದವಳೇ
ಕಣ್ಣ ಮುಂದಿನ ಬೆಳಕೆ
ದಾರಿ ಮುಂದಿನ ಕನಸೇ
ನಿನಗಾಗಿ ಬರೆಯುವೆ
ಎಂದೆಂದೂ ಮುಗಿಯದ ಕತೆಯ

ಅಂಗೈ ಬೊಗಸೆಯಲ್ಲಿ ಮುಖವಿಟ್ಟು ಮಳೆ ಸುರಿಸಿದವಳೆ
ಅಂಗೈಯ ಅಳಿಸದ ರೇಖೆಗಳಲ್ಲಿ ನದಿಯಾದವಳೇ
ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಪ್ರೇಮ ಕಾವ್ಯವ

ಕಣ್ಣಲ್ಲಿ ಕಣ್ಣಿಟ್ಟು ಬದುಕ ಹೊಸೆದವಳೇ
ಬಂಧವಿರದ ಬಂಧಕೆ ಧ್ವನಿಯಾದವಳೇ
ಮುಗಿಯಲಾರದ ದುಃಖಕೆ
ಸಾಂತ್ವಾನ ಹೇಳಿದವಳೆ

ಕಣ್ಣೀರ ಕತೆಗೆ ಕಣ್ಣೀರ ಬೆಸೆದು
ಜೀವ ಜೀವಕೆ ಉದ್ದೀಪನವಾದವಳೇ
ಒಲವ ಬದುಕ ಪಯಣದಲ್ಲಿ
ಜೊತೆಯಾಗಿ ನಿಂತವಳೇ

ಅವಮಾನಗಳ ಹಾಸಿಹೊದ್ದ
ಬದುಕಲಿ, ಪ್ರೀತಿಯ ಹಠವ ಜೀವಧಾತುವಾಗಿ ಬೆಸೆದವಳೇ
ನಿನಗಾಗಿ ಬರೆಯುವೆ
ಮನುಜ ಬದುಕಿನ ಸೆಣಸಾಟದ ಪತ್ರವ

ಮುಗಿಯದ ಅಳಿಯದ ಬದುಕ
ಅರ್ಥಕೆ ವ್ಯಾಖ್ಯಾನವಾದವಳೇ
ನಿನಗಾಗಿ ಬದುಕಿ ಬರೆಯುವೆ
ಎಂದೆಂದೂ ಅಂತ್ಯವಿಲ್ಲದ
ಒಲವಿನೋಲೆ ಬರೆಯುವೆ

ಭೂಮಿಯ ಎದೆಯೊಳಗಿನೊಲವ ಬಿತ್ತಿ
ಒಲವು ಒಲವ ಸಂತೈಸಿದಂತೆ
ಆಕಾಶದಲ್ಲಿ ಹೂ ಅರಳಿದ ಬಗ್ಗೆ
ಪತ್ರವೊಂದ ಬರೆವೆ ನಿನಗಾಗಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...