Home / ಲೇಖನ / ಸಾಹಿತ್ಯ / ಎಮಿಲಿ ಡಿಕಿನ್ಸಸನ್ ಕವಿತೆಗಳು ಭಾಗ – ೨

ಎಮಿಲಿ ಡಿಕಿನ್ಸಸನ್ ಕವಿತೆಗಳು ಭಾಗ – ೨

ಅದೊಂದು ಸಾವಿನ ಮನೆ. ಜೀವವೊಂದು ಎದುಸಿರು ಬಿಡುತ್ತ ಕೊನೆಯ ಕ್ಷಣದ ಗಣನೆಯಲ್ಲಿದೆ. ಕೊನೆ ಕ್ಷಣದವರೆಗೂ ಬದುಕಿಗಾಗಿ ಆತ್ಮದ ಹೋರಾಟ ನಡೆದಿದೆ ಸಾವಿನ ಕೊನೆಯ ದೃಶ್ಯ ನೋಡಲು ಜನ ಸುತ್ತುವರೆದಿದ್ದಾರೆ. ಅಕ್ಷರಶಃ ಸ್ಥಂಭಿತರಾಗಿದ್ದಾರೆ. ಅಲ್ಲಿ ಹತಾಶೆ ಇದೆ. ಕ್ರಮೇಣ ಆತ್ಮ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಅದೇ ಕ್ಷಣ ನೊಣವೊಂದರ ಗುಂಯ್ಗುಡುವಿಕೆ ಸಾವನ್ನು ಅಂಗೀಕರಿಸಿದ ಆತ್ಮವನ್ನು ಗಲಿಬಿಲಿಗೊಳಿಸಿದೆ. ಮರಣ ಮಾರ್ಗದಲ್ಲಿ ಭಂಗ ಎಂದೆನ್ನಿಸಿದೆ. ಆದರದು ಸಾವಿನ ಮುನ್ನುಡಿ ಎಂದು ಅರಿಯಲಾಗಲಿಲ್ಲ. ಸಾವಿನ ದರ್ಶನಕ್ಕೆ ಆ ಜೀವ ಹಂಬಲಿಸಿತು. ಆದರೆ ಸಾವು ಬಂದಾಗ ಗ್ರಹಿಸಲಾಗಲಿಲ್ಲ. ಇದು ಸಾವಿನ ಚಮತ್ಕಾರ. ಅಗೋಚರ, ಅನಿರೀಕ್ಷಿತ ಆಗಂತುಕನೆಂದರೆ ಸಾವು. “ಐ ಹರ್ಡ್ ಎ ಫ್ಲಾಯ್ ಬಜ್ಜ್ ವ್ಹೆನ್ ಐ ಡೈಡ್” ಕವಿತೆಯಲ್ಲಿ ಸಾವಿನ ನೈಜ ಸಂಭವನೀಯತೆಗಳ ನಡುವೆಯೂ ಜೀವದ ನಿರೀಕ್ಷೆಗಳನ್ನು ಎಮಿಲಿ ವ್ಯಕ್ತಪಡಿಸಿದ್ದು ಹೀಗೆ.

ಸಾವಿನ ಬಾಗಿಲನ್ನು ತನ್ನ ಕವನಗಳ ಮೂಲಕ ತಟ್ಟಿ ತಟ್ಟಿ ಬಡಿದವಳು ಎಮಿಲಿ ಡಿಕಿನ್ಸಸನ್. ಸಾವು ಆಕೆಯನ್ನು ಕಾಡಿದಷ್ಟೂ ಬೇರಾವ ಸಂಗತಿಗಳು ಕಾಡಲಿಲ್ಲ. ಮರಣ ಶಯ್ಯೆಯಲ್ಲಿ ಆತ್ಮ ಹನಿ ಉಸಿರವರೆಗೂ ಬಡಿದಾಡುತ್ತದೆ. ಜೀವಂತವಿರೂವರೆಗೂ ಸಂಧಿಸಲಾಗದ ಸರದಾರ ಅವನು. ಸಂಧಿಸಿದಾಗ ನಾವೇ ಇರುವುದಿಲ್ಲ. ಸಾವು ಹತಾಶೆಯ ಸಂಕೇತ. ಒಂದರ್ಥದಲ್ಲಿ ಎಮಿಲಿಯ ಈ ಕವಿತೆ ಸಾವು ಬದುಕಿನ ಎಲ್ಲ ಒತ್ತಡಗಳಿಂದ ಮುಕ್ತಗೊಳಿಸಿ, ದಿವ್ಯ ಅಮರತ್ವದೆಡೆಗೆ, ಶಾಶ್ವತ ಆನಂದದೆಡೆಗೆ ಕೊಂಡೊಯ್ಯುತ್ತದೆ ಎಂಬ ಸಂಪ್ರದಾಯಸ್ಥ ಕ್ರೈಸ್ಥ ನಂಬಿಕೆಯನ್ನು, ಕಲ್ಪನೆಯನ್ನು ಅಣಕಿಸಿ ನಗುತ್ತವೆ.

ಸಾವನ್ನು ಎರಡು ಭಿನ್ನ ರೂಪಕಗಳಲ್ಲಿ ಹಿಡಿದಿಡುತ್ತಾಳೆ ಎಮಿಲಿ. ಒಂದು- ವಾಸ್ತವಿಕ ಸಂಗತಿಯಾಗಿ, ಬದುಕೇ ಸಾವಾಗಿ. ಇನ್ನೊಂದು- ಕಾಲ್ಪನಿಕ ಅನುಭವವಾಗಿ, ಬದುಕಿನ ಬಗ್ಗೆ ನಿರಾಕರಣದ ಸಂಕೇತವಾಗಿ. ಆಕೆಯ “ಬಿಕಾಜ್ ಐ ಕುಡ್ ನಾಟ್ ಸ್ಟಾಪ್ ಫಾರ್ ಡೆತ್” ಕವಿತೆ ಈ ಎರಡು ಕಲ್ಪನೆಗಳಿಗೆ ಸಾಕಾರವಾಗಿ ನಿಲ್ಲುತ್ತದೆ.

“ದಿ ಸೋಲ್ ಸೆಲೆಕ್ಟ್ಸ್ ಹರ್ ವೋನ್ ಸೋಸಾಯಿಟಿ”ಯಲ್ಲೂ ಎಮಿಲಿ ತಾನೆ ಕವನದ ಪಾತ್ರವಾಗುತ್ತಾಳೆ. ಆಕೆಯ ಜೀವನ ಚಿತ್ರಣ ಹೂರಣಗೊಂಡಿದೆ ಇಲ್ಲಿ. ಆಕೆಗೆ ಬದುಕು ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು. ಪ್ರೇಮ ವೈಪಲ್ಯ, ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಳ್ಳಲಾಗದ ವಿಫಲತೆ, ಸಂಪ್ರದಾಯಶೀಲ ಬದುಕಿನತ್ತ ತೋರಿದ ವಿಮುಖತೆಯ ಕಾರಣ ಧಾರ್‍ಮಿಕ ನಂಬಿಕೆಯ ನಾಶ. ಇವೆಲ್ಲವೂ ಆಕೆಯ ಬದುಕಿನಲ್ಲಿ ವಿಷಣ್ಣತೆಯನ್ನು ತೇಪೆ ಹಚ್ಚಿದವು. ಸಾವನ್ನು ಈಕೆ ಬಣ್ಣಿಸಿದಷ್ಟು ಪರಿಣಾಮಕಾರಿಯಾಗಿ ಯಾರಿಂದಲೂ ಬಣ್ಣಿಸಲಾಗದು. ತನ್ನ ಕವನಗಳಲ್ಲಿ ಸಾವಿಗಾಗಿ ಆಕೆ ಬದುಕನ್ನು ತ್ಯಾಗ ಮಾಡುತ್ತಾಳೆ. ವಿಸ್ತೃತ ಕಲ್ಪನೆಗಳು, ಸಾವಿಗೆ ಉಪಮೆಗಳಾಗಿ ರೂಪಕಗಳಾಗಿ ನಿಲ್ಲುತ್ತವೆ. ಸಾವನ್ನು ಆರಾಧಿಸಿದಳು. ಬದುಕನ್ನು ತಿರಸ್ಕರಿಸಿ, ಅದನ್ನು ಗೆದ್ದಳು. ಪ್ರೀತಿಯನ್ನು ತ್ಯಾಗಮಾಡಿ ಪಡೆದಳು. ಕ್ಷುಲಕ ಬಾಹ್ಯ ಜಗತ್ತಿನ ಬಾಗಿಲನ್ನು ಮುಚ್ಚಿ ತನ್ನೊಳಗಿನ ಜಗತ್ತಿಗೆ ತೆರೆದುಕೊಂಡಳು.

“ಮೈ ಲೈಫ್ ಕ್ಲೋಸ್ಡ್ ಟ್ವೈಸ್ ಬಿಫೋರ್ ಇಟ್ಸ್ ಕ್ಲೋಸ್” ಕವಿತೆಯಲ್ಲೂ ಕೂಡ ಬದುಕಿನ ಬಗ್ಗೆ ಗಟ್ಟಿಯಾದ ನಿರಾಕರಣ ಎದ್ದು ಕಾಣುತ್ತದೆ. ತನ್ನ ಹತ್ತಿರದ ಆತ್ಮೀಯರ ಸಾವು, ಅಗಲಿಕೆ ಆಕೆಗೆ ತನ್ನದೇ ಸಾವಾದಂತಾಗಿದೆ.

ಕೊನೆಯವರೆಗೂ ಅವಿವಾಹಿತೆಯಾಗೇ ಉಳಿದ ಏಮಿಲಿ ರಾಲ್ಫ್ ವಾಲ್ಡೋ ಎಮರಸನ್‍ನ ನೈತಿಕತೆಯ ಉತ್ಕೃಷ್ಠ ಪ್ರಜ್ಞೆ, ಸ್ವಾವಲಂಬಿ ಬದುಕು ಸಿದ್ಧಾಂತಗಳಿಂದ ಪ್ರಭಾವಿತಗೊಂಡಿದ್ದಳು. ತನ್ನ ಕವಿತೆಗಳ ಮೂಲಕ ಅಳಿಸಲಾಗದ ಗುರುತನ್ನು ಬಿಟ್ಟುಹೋದ ಎಮಿಲಿ ಅಮೇರಿಕಾದ ಸಾಹಿತ್ಯ ಲೋಕದ ಪ್ರಥಮ ಮಹಿಳಾ ಸಾಹಿತಿ ಎಂಬ ಖ್ಯಾತಿಗೆ ಪಾತ್ರಳು. ಆಕೆಯೊಬ್ಬ ಖಾಸಗಿ ಕವಿ. ತನ್ನೊಳಗಿನ ತುಡಿತ ಮಿಡಿತಗಳ ಅಭಿವ್ಯಕ್ತಿಗೆ ಆಕೆ ಕವನಗಳ ಮೊರೆಹೋದಳು. ಸಾರ್ವಜನಿಕ ಬದುಕಿನ ಯಾವ ಶೋಕಗಳು ಆಕೆಗೆ ತಟ್ಟಲೇ ಇಲ್ಲ. ಹೀಗಾಗೇ ಎಮಿಲಿಯ ಕಾವ್ಯದ ಅಂತಃಸತ್ವ ಎಂದರೆ ಮರಣ ಮತ್ತು ಅಮರತ್ವ. ೧೫ ಮೇ ೧೮೮೬ರಲ್ಲಿ ಎಮಿಲಿಯ ಕೊನೆದಿನ. ಹುಟ್ಟಿದ ಅದೇ ಆಮ್ಹರ್‍‍ಸ್ಟ್ ನಗರದಲ್ಲಿ ತೀರಿಕೊಂಡಳು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...