ಮರಿ ಪಿಶಾಚಿ ಪದ್ಯ

ಭಾಗ-೧

ಒಮ್ಮೆ ಒಂದು ಮರಿಪಿಶಾಚಿ
ಊರ ಸುತ್ತಲದಕೆ ತೋಚಿ

ಪೊಟರೆಯಿಂದ ಇಳಿಯಿತು
ಧೈರ್ಯದಿಂದ ನಡೆಯಿತು

ನಡೆದು ನಡೆದು ಬರಲು ಕೊನೆ
ಬಿತ್ತು ಕಣ್ಣಿಗೊಂದು ಮನೆ

ಬಾಗಿಲಿಗೆ ಬೀಗವಿತ್ತು
ಕಿಟಕಿ ಮಾತ್ರ ತೆರದೆ ಇತ್ತು

ಅರೆ! ಎಂದು ಮರಿಪಿಶಾಚಿ
ಇಣುಕಿತಲ್ಲಿ ಕತ್ತು ಚಾಚಿ

ಯಾರು ಇಲ್ಲ ಮನೆಯ ಒಳಗೆ
ಹೋಗಿರುವರು ಎಲ್ಲೋ ಹೊರಗೆ

ಎಷ್ಟಾದರೂ ಪಿಶಾಚಿ ತಾನೆ
ಹಾರಿಯೇ ಬಿಟ್ಟಿತು ಧುಡುಕ್ಕನೆ

ಕುರ್ಚಿ ಮೇಜು ತೂಗುಯ್ಯಾಲೆ
ಕುಣಿದಾಡಿತು ಕೆಳಗೆ ಮೇಲೆ

ಮೂಗಿಗೆ ಬಡಿಯಲು ಏನೋ ವಾಸನೆ
ಹೊಕ್ಕು ನೋಡಿತು ಅಡುಗೆ ಕೋಣೆ

ಮೂಲೆಯಲೊಂದು ಒಂಟೆ ಡುಬ್ಬ
ಕವಚಿದ ಹಾಗೆ ಬೆಲ್ಲದ ಡಬ್ಬ

ಅರೆ! ಎಂದು ಮರಿಪಿಶಾಚಿ
ಇಣುಕಿತಲ್ಲಿ ಕತ್ತು ಚಾಚಿ

ಬೆಲ್ಲದ ಪಸೆ ಮೈ ಕೈ ಸವರಿ
ಬಿದ್ದೇಬಿಟ್ಟಿತು ಒಳಕ್ಕೆ ಜಾರಿ

ಮೇಲೆ ನೆಗೆಯೋಕಾಗೋದಿಲ್ಲ
ಉಂಡೆ ಬೆಲ್ಲ ಸುತ್ತಲೆಲ್ಲ

ಸರಿ! ಎಂದು ಮರಿಪಿಶಾಚಿ
ಮೆಲ್ಲತೊಡಗಿತು ಬಾಚಿ ಬಾಚಿ

ಮೆದ್ದು ಕೈ ಕಾಲು ಮಂಡೆ
ಆಯಿತೊಂದು ಬೆಲ್ಲದುಂಡೆ

ಅಷ್ಟರಲಿ ಸದ್ದು ಹೊರಗೆ
ಬಾಗಿಲು ಕಿರ್ರನೆ ತೆರೆದ ಹಾಗೆ

ಮನುಷ್ಯರ ಕಾಲ ಸಪ್ಪಳ
ಮುರಿದ ಹಾಗೆ ಹಪ್ಪಳ

ಮರಿ ಪಿಶಾಚಿ ಡಬ್ಬದೊಳಗೆ
ಬೆವರತೊಡಗಿತು ಮೆಲ್ಲಗೆ

ಭಾಗ-೨

ಅಡುಗೆ ಭಟ್ಟ ಸುಬ್ಬಾಭಟ್ಟ
ಒಲೆಯ ಮೇಲೆ ಎಸರನಿಟ್ಟ

ಅಂದು ರಾಮನವಮಿ ದಿವಸ
ಆದ್ದರಿಂದ ಪಾಯಸ

ಎಸರು ಕುದಿಯಿತು ತಳಮಳ
ಪಿಶಾಚಿಗೇಕೊ ಕಳವಳ

ಸುಬ್ಬಾಭಟ್ಟ ಹುಡುಕಿದ
ಬೆಲ್ಲದ ಡಬ್ಬ ತಡಕಿದ

ಕೈಗೆ ಸಿಕ್ಕ ದೊಡ್ಡ ಉಂಡೆ
ಸೇರಿತು ಪಾಯಸದ ಹಂಡೆ

ನೋಡಲೇನು! ಮರಿಪಿಶಾಚಿ
ಕುಂಯ್ಯೋ ಮುರ್ರೋ ಎಂದು ಕಿರುಚಿ

ಕಿಟಕಿಯಿಂದ ಒಂದೇ ನೆಗೆತ
ಬೇಡಿ ತಿನುವೆನೆನ್ನುತ

ಕೆಳಗೆ ಬಿದ್ದ ಸುಬ್ಬಾಭಟ್ಟ
ಒಂದು ವಾರ ಮಲಗಿಬಿಟ್ಟ

ಆಗಿದ್ದಾನೆ ಸಣಕಲು
ಹೇಳುತ್ತಾನೆ ಈಗಲೂ

ಇಂಥ ವಿಚಿತ್ರ ಕಂಡದ್ದಿಲ್ಲ
ಹಾರುವಂಥ ಉಂಡೆ ಬೆಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆಲದ ಕಣ್ಣು
Next post ಬದುಕು

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys