Home / ಕವನ / ಕವಿತೆ / ಎಂದೆಂದೂ ಮುಗಿಯದ ಕತೆ

ಎಂದೆಂದೂ ಮುಗಿಯದ ಕತೆ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೊಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಯಾರಿಗೂ ತೆರೆಯದ ಮಾಂತ್ರಿಕ ಕೋಟೆ
ಆದರೊಳಗೆ ಅವಿತಿಟ್ಟ ಚಿನ್ನದ ಮೂಟೆ

ಇಟ್ಟರೆ ಅದರೊಳಗೆ ಚಿನ್ನದ ಮೂಟೆ
ಮಾಡುವರು ಯಾರು ಆ ಚಿನ್ನದ ಬೇಟೆ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಏಳು ಸಮುದ್ರಗಳಾಚೆಗೆ ದ್ವೀಪ
ಅಲ್ಲೊಂದು ಜೀವಕ್ಕೆ ಮುಗಿಯದ ಶಾಪ

ಇದ್ದರೆ ಜೀವಕ್ಕೆ ಮುಗಿಯದ ಶಾಪ
ಏನದು ಎಸಗಿದ ಮುಗಿಯದ ಪಾಪ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಕಪ್ಪು ಕೊಳದೊಳಗೊಂದು ಕೋಮಳೆ ಹೂವು
ಆದನು ಕಿತ್ತವರಿಗೆ ಖಂಡಿತ ಸಾವು

ಅದನು ಕಿತ್ತವರಿಗೆ ಬಂದರೆ ಸಾವು
ಎಲ್ಲವನು ನೋಡುವುದು ಹತ್ತಿರದ ಮಾವು


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಆಲದ ಮರದಲ್ಲಿ ನೂರೊಂದು ಕೊಂಬೆ
ಒಂದೊಂದು ಕೊಂಬೆಯಲು ತೂಗುವ ಗೊಂಬೆ

ಒಂದೊಂದು ಕೊಂಬೆಯಲು ತೂಗಿದರೆ ಗೊಂಬೆ
ನೀನೆಂದೂ ನಿನ್ನ ಕಣ್ಣುಗಳ ನಂಬೆ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಮಾಂತ್ರಿಕ ಕೊಟ್ಟಂತ ಮಂತ್ರದ ಕೋಲು
ಅದರಿಂದ ಮುಟ್ಚಿದುದೆಲ್ಲವು ಕಲ್ಲು

ಮುಟ್ಟಿದುದೆಲ್ಲವು ಆದರೆ ಕಲ್ಲು
ಅಡಗುವುದು ಮತ್ತೆ ನಮ್ಮೆಲ್ಲರ ಸೊಲ್ಲು


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಬಲು ದೊಡ್ಡ ಅರಮನೆಯ ಏಳನೆ ಮಹಡಿ
ಅದರೊಳಗೆ ಯಾರಿಗೂ ಗೊತ್ತಿರದ ಕೊಠಡಿ

ಇದ್ದರೆ ಯಾರಿಗೂ ಗೊತ್ತಿರದ ಕೊಠಡಿ
ಹತ್ತಿರ ಸುಳಿದವರ ಹಿಡಿಯುವುದು ಕರಡಿ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಎಲ್ಲಿಗೂ ತೆರೆಯದ ಕಿರಿದಾದ ಬೀದಿ
ಅಲ್ಲಿರುವನೊಬ್ಬ ಭೀಕರ ಮಂತ್ರವಾದಿ

ಇದ್ದರಲ್ಲೊಬ್ಬ ಭೀಕರ ಮಂತ್ರವಾದಿ
ಕಣ್ಣಿಗೆ ಎರಚುವನು ಮಂಕುಬೂದಿ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಗೋಡೆಯ ಮೇಲೊಂದು ಕಂಚಿನ ಡೇಗೆ
ಅದರ ಬಾಯೊಳಗೊಂದು ಕಬ್ಬಿಣದ ಕಾಗೆ

ಬಾಯೊಳೆಗಿದ್ದರೆ ಕಬ್ಬಿಣದ ಕಾಗೆ
ತೆಂಗಿನ ಮರದಿಂದ ಬೀಳುವುದು ಸೋಗೆ


ತರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಕಡಲ ತೀರದಲೊಬ್ಬ ಚೆಲುವಿನ ಯುವತಿ
ಕಂಡರೆ ಸೆರೆ ಹಿಡಿವಳೆಂಬುದು ಖ್ಯಾತಿ

ಕಂಡರೆ ಸೆರೆ ಹಿಡಿವಳಾದರೆ ಯುವತಿ
ಇರಲೇಬೇಕವಳೊಬ್ಬ ಮಾಟಗಾತಿ

೧೦
ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಎಂದೆಂದು ಮುಗಿಯದ ಕತೆ ಬೇಕು ನನಗೆ
ಸುಂದರಿಯೊಬ್ಬಳು ಇರಲದರ ಒಳಗೆ

ಸುಂದರಿಯೊಬ್ಬಾಕೆ ಇದ್ದರೆ ಒಳಗೆ
ಎಂದೆಂದು ಮುಗಿಯದ ಕತೆಯೇಕೆ ನಿನಗೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...