Home / ಕವನ / ಕವಿತೆ / ಬ್ರಾಹ್ಮಣನೂ ಭಗವದ್ಗೀಯೂ

ಬ್ರಾಹ್ಮಣನೂ ಭಗವದ್ಗೀಯೂ

ದಾರಿ ತಪ್ಪಿದವನೊಬ್ಬ ಬ್ರಾಹ್ಮಣ
ಅಲೆಯುತಿದ್ದ ಕಾಡಿನಲ್ಲಿ
ಮುಸ್ಸಂಜೆಯ ಸಮಯ
ಸಿಕ್ಕಿದ ಯಕ್ಷಿಯ ಬಲೆಯಲ್ಲಿ

ಹೆಣ್ಣು ರೂಪದ ಯಕ್ಷಿ
ತನ್ನ ಮನೆಗೆ ಕರೆಯಿತು
ನಾಳೆ ಹೋದರಾಯಿತೆಂದು
ಅವನ ಮನವ ಒಲಿಸಿತು

ಊಟ ಕೊಟ್ಟು ಚಾಪೆ ಹಾಕಿ
ಮಾತಾಡುತ್ತ ಕುಳಿತಿತು
ಕೈಯಲಿದ್ದ ಭಗವದ್ಗೀತೆ
ಕೆಳಗಿಡೊದನ್ನ ಕಾದಿತು

ಕಣ್ಣಿನಲ್ಲಿ ಕುಡಿನೋಟ
ಕೆಳ ಜಾರಿದ ಸೆರಗು
ಎಷ್ಟಾದರೂ ಬಡ ಬ್ರಾಹ್ಮಣ
ಆಂದುಕೊಂಡ ಕೊನೆಗು

ಗೀತೆಯಾದರೂ ಹೇಳುವುದೇನು:
ಅಡಿಯ ಮುಂದಿಡೆ ಸ್ವರ್ಗ!
ಮುನಿ ಕೂಡ ಮಾಡಿದ್ದೇನು?
ಬೆಸ್ತರವಳ ಸಂಸರ್ಗ!

ಒಗೆದೇ ಬಿಟ್ಟ ಪುಸ್ತಕ
ಅದರ ಮೇಲೆ ಧೋತರ
ಯಕ್ಷಿ ಸುಮ್ಮನೆ ನಕ್ಕಿತು-
ಯಕ್ಷಿಗಳು ನಗುವ ತರ

ಮರುದಿನ ಅಲ್ಲಿ ಕಂಡೆದ್ದೇನು?
ಮನೆಯಿದ್ದಲ್ಲಿ ತಾಳೆ!
ಕೆಳಗೆ ಹಸಿ ಹಸೀ ಮೂಳೆ ಹಾಗೂ
ಭಗವದ್ಗೀತೆಯ ಹಾಳೆ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...