ಆನೆ ಬಂತೊಂದಾನೆ

ಆನೆ ಬಂತೊಂದಾನೆ ಆನೆ ಬಂತೇನೆ
ಆನೆಯಷ್ಟೇ ದೊಡ್ಡ ಆನೆ ಸರಿ ತಾನೆ

ಭಾರಿ ಕಂಭಗಳಂತೆ ಅದರ ಕೈಕಾಲು
ಸೊಂಡಿಲೆಂದರೆ ತೂಗಿ ತೊನೆವ ಬಿಳಲು

ದೊರಗು ಮೈ ಗೆರಸೆ ಕಿವಿ ಅದರಂತೆ ಗೋಣು
ಏನೊ ಹೇಳಲು ಬಯಸುವಂಥ ಕಿರುಗಣ್ಣು

ನೋಡಿದರೆ ಎಲ್ಲರೂ ಹೊರಬೀದಿಗಿಳಿದು
ಎಂದಿನಿಂದಲೊ ನಾವು ನೋಡಬಯಸಿದುದು

ಮೋಡದಲಿ ತೇಲುತಿಹ ಚಿನ್ನದಂಬಾರಿ
ಅದರೊಳಗೆ ರತ್ನದಂತಹ ರಾಜಕುವರಿ

ಬಂತು ಬಾಗಲಿಗೆ ಬಂತು ಬೀದಿಯ ಕೊನೆಗೆ
ಮಾಯವಾಯತು ಕಣ್ಣ ತೆರಯುವುದರೊಳಗೆ

ಏನ ತಂದಿತದು ಏನನೊಯ್ದಿತೊ ಕಾಣೆ
ಒಬ್ಬೊಬ್ಬರಿಗು ಅವರ ಪ್ರತ್ಯೇಕ ಆನೆ!

ಹೊರಲಾರದ ಕನಸುಗಳೊ ಬಡವಾದ ನೆನಸುಗಳೊ
ಅಥವ ಕೇವಲ ಗುರುತು ಬಿಟ್ಟ ಗೊರಸುಗಳೊ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹನಿಗಳು
Next post ಸತ್ಯ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…