ಚಿಂತಲ್ ಬಸ್ತಿ

ಚಿಂತಲ್ ಬಸ್ತಿ ಚಿಂತಲ್ ಬಸ್ತಿ
ಬಡವರ ಬಗ್ಗರ ಅಗ್ಗದ ಆಸ್ತಿ
ಸ್ವರ್ಗಕ್ಕಿಂತಲೂ ನೀನೇ ಜಾಸ್ತಿ

ರಾಮುಡು ಭೀಮುಡು ಪರಮೇಶ್ವರುಡು
ಕಾಜಿಬಿ ಗೀಜೀಬಿ ಗೊರಿಬಿಗೆಲ್ಲಾ
ಎಲ್ಲರಿಗೂ ಇದು ಒಂದೇ ಮಾಡು
ಇರುವಂತೆಲ್ಲರಿಗೊಬ್ಬನೆ ಅಲ್ಲಾ!

ಆಚೆಗೆ ಬಯಲು ಈಚೆಗೆ ರೈಲು
ಕೈಕಾಲಿಟ್ಟಲ್ಲೆಲ್ಲಾ ಕೊಳಚೆ
ಆದರು ಬದುಕು ಸಾಗಲೆಬೇಕು
ಹೊಯ್ಯಲೆ ಬೇಕು ಬಂದರೆ ಉಚ್ಚೆ

ಚಿಂತಲ್ ಬಸ್ತಿ ಚಿಂತಲ್ ಬಸ್ತಿ
ಗತಿಯಿಲ್ಲದವರಿಗೆ ನೀನೇ ಆಸ್ತಿ

ಹಗಲೂ ಇರುಳೂ ಬೀದಿಗಳಲ್ಲಿ
ಘನ ಸರಕಾರದ ನಿಯಾನ್ ಬೆಳಕು
ಆಳುವ ಪಕ್ಷಕು ಆಳದ ಪಕ್ಷಕು
ಎಲ್ಲರಿಗೂ ಈ ಮತಗಳು ಬೇಕು

ತೆಲುಗು ದೇಶಂ ಭಾರತ ದೇಶಂ
ಇಂದಿರಾಗಾಂಧಿಯ ಕಾಂಗ್ರೆಸ್ ದೇಶಂ
ಯಾರೂ ಬಿಡರೈ ಈ ಅವಕಾಶಂ
ಸರ್ವರ ಮೈಮೇಲೂ ಆವೇಶಂ

ಚಿಂತಲ್ ಬಸ್ತಿ ಚಿಂತಲ್ ಬಸ್ತಿ
ಗತಿಯಿಲ್ಲದವರಿಗೆ ನೀನೇ ಆಸ್ತಿ
ಗತಿಯಿದ್ದವರಿಗು ನೀನೇ ಆಸ್ತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾರಿವಾಳಗಳು ಹಾರಿಹೋದವು
Next post ಘಾಟಿ ಹೆಂಗಸು

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…